ಬೆಂಗಳೂರು,ಡಿ.21:
ಭಾರತೀಯ ಕ್ರಿಕೆಟ್ ನಲ್ಲಿ ಭರ್ಜರಿ ಹೊಡೆತಗಳ ಮೂಲಕ ಗಮನ ಸೆಳೆದ ಕ್ರಿಕೆಟಿಗ ಕೊಡಗಿನ ಕುವರ ರಾಬಿನ್ ಉತ್ತಪ್ಪ ಆಟದ ಮೈದಾನದಲ್ಲಿ ಸುದ್ದಿ ಮಾಡಿದ್ದಕ್ಕಿಂತ ಹೆಚ್ಚು ಹೊರಗಡೆ ಸದ್ದು ಮಾಡಿದರು.
ದಾಂಪತ್ಯ ಜೀವನದಿಂದ ಹಿಡಿದು ಹಲವಾರು ಕಾರಣಗಳಿಂದ ಸುದ್ದಿ ಮಾಡಿದ ಈ ಮಾಜಿ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಇದೀಗ
ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಎದುರಿಸುತ್ತಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ ನಂತರ ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯನ್ನು ನಡೆಸುತ್ತಿದ್ದಾರೆ.
ಈ ಕಂಪನಿಯಲ್ಲಿ ಸಾಕಷ್ಟು ಮಂದಿ ಉದ್ಯೋಗಿಗಳಿದ್ದಾರೆ. ಅವರಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತಿತ್ತು ಅಲ್ಲದೇ ಅವರ
ಸಂಬಳದಿಂದ ಪಿಎಫ್ ಹಣವನ್ನು ತಿಂಗಳು ತಿಂಗಳು ಕಡಿತ ಮಾಡಲಾಗುತ್ತಿತ್ತು. ಆದರೆ ಈ ಹಣವನ್ನು ಉದ್ಯೋಗಿಗಳ ಖಾತೆಗೆ ಹಾಕುತ್ತಿಲ್ಲ. ಹಣ ಪಾವತಿಸುವಂತೆ ಪಿ ಎಫ್ ಅಧಿಕಾರಿಗಳು ಸಂಸ್ಥೆಗೆ ಪತ್ರ ಬರೆದರೂ ಯಾವುದೇ ಉತ್ತರ ನೀಡಿಲ್ಲ.
ಪಿಎಫ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ದಾಖಲೆ ಪತ್ರಗಳನ್ನು ಅವಲೋಕಿಸಿದ್ದಾರೆ ಈ ವೇಳೆ ರಾಬಿನ್ ಉತ್ತಪ್ಪ ತಮ್ಮ ಕಂಪನಿಯಲ್ಲಿ ಕೆಲಸ ಮಾಡುವ ನೌಕರರ ಪಿಎಫ್ ವಂತಿಗೆ ಹಣವನ್ನು ಪಾವತಿಸದೆ ಸುಮಾರು 23 ಲಕ್ಷ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರದ ಪೊಲೀಸರಿಗೆ ಪಿಎಫ್ಓ ಅಧಿಕಾರಿ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಪತ್ರ ಬರೆದಿದ್ದಾರೆ. ಹೀಗಾಗಿ ಪೊಲೀಸರು ರಾಬಿನ್ ಉತ್ತಪ್ಪರ ವಿಳಾಸ ಹುಡುಕಿಕೊಂಡು ಹೋಗಿದ್ದರು. ಆದರೆ ಆ ವಿಳಾಸದಲ್ಲಿ ಉತ್ತಪ್ಪ ವಾಸವಿಲ್ಲದಿರುವುದು ಗೊತ್ತಾಗಿ ಪೊಲೀಸರು ವಾಪಸ್ ಆಗಿದ್ದು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

