ಬೆಂಗಳೂರು,ಜೂ.7:
ರಾಜ್ಯ ಬಿಜೆಪಿ ನಾಯಕರು ತಮ್ಮ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾದ ಕಾಂಗ್ರೆಸ್ನ ವರಿಷ್ಠ ನಾಯಕ ರಾಹುಲ್ ಗಾಂಧಿ ಜಾಮೀನು ಪಡೆದುಕೊಂಡರು.
ಕಳೆದ ವಿಧಾನಸಭೆ Election ಸಮಯದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅಂಟಿಸಿದ್ದ ಪೋಸ್ಟರ್ ಗಳನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ನಾಯಕರು ಕೆಪಿಸಿಸಿ, ಅಂದಿನ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ನ್ಯಾಯಾಲಯ ಕುದ್ದು ಹಾಜರಾತಿಗೆ ಸೂಚಿಸಿ ಸಮನ್ಸ್ ಜಾರಿಗೊಳಿಸಿತ್ತು. ಅದರಂತೆ ಕಳೆದ ವಾರ ಕೋರ್ಟ್ ಮುಂದೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಾಮೀನು ಪಡೆದುಕೊಂಡಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಂದು ವಿಚಾರಣೆಗೆ ಹಾಜರಾಗದೆ ರಾಹುಲ್ ಗಾಂಧಿ ವಿನಾಯತಿ ಪಡೆದುಕೊಂಡಿದ್ದರು.
ಅಂದು ನ್ಯಾಯಾಲಯ ನೀಡಿದ ಸೂಚನೆ ಆಧರಿಸಿ ರಾಹುಲ್ ಗಾಂಧಿ ಇಂದು ನಗರದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾದರು.
ಈ ಹಾಜರಾತಿಯನ್ನು ಮಾನ್ಯ ಮಾಡಿದ ಬೆಂಗಳೂರಿನ42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಅವರಿಗೆ ಜಾಮೀನು ಮಂಜೂರು ಮಾಡಿ, ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದರು.
ದೆಹಲಿಯಿಂದ ಬೆಂಗಳೂರಿಗೆರಾಹುಲ್ ಗಾಂಧಿ ಆಗಮನದ ಹಿನ್ನಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಟಿ ಸಿವಿಲ್ ಕೋರ್ಟ್ವರೆಗೂ ವ್ಯಾಪಕ ಭದ್ರತೆಯನ್ನು ಒದಗಿಸಲಾಗಿತ್ತು.
ವಿಮಾನ ನಿಲ್ದಾಣದಲ್ಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಅನೇಕರು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿ ಅವರ ಜೊತೆ ಕೋರ್ಟ್ಗೆ ಆಗಮಿಸಿದ್ದರು. ವಿಚಾರಣೆಯಲ್ಲಿ ರಾಹುಲ್ ಗಾಂಧಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 70 ಲಕ್ಷ ರೂ. ಮೌಲ್ಯದ ಆಸ್ತಿಯ ವೈಯಕ್ತಿಕ ಬಾಂಡ್ನ ಭದ್ರತೆ ಒದಗಿಸಿದ್ದಾರೆ.
Previous Articleಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
Next Article ಕಾಂಗ್ರೆಸ್ ಕೈಹಿಡಿದ ಸುಶಿಕ್ಷಿತರು.