Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !
    ಸುದ್ದಿ

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    vartha chakraBy vartha chakraJuly 18, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.18-
    ಐಷಾರಾಮಿ ಬದುಕು, ಮಲೇಶಿಯನ್ ಹುಡುಗಿಯರು ವಿದೇಶಿ ಮಧ್ಯದ ಮೂಲಕ ಶ್ರೀಮಂತ ಕುಳಗಳನ್ನು ಖೆಡ್ಡಾಕ್ಕೆ ಬೀಳಿಸಿ ಸಾಲದ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಪಡೆದು ಪಂಗನಾಮ ಹಾಕಿರುವ ಐ ನಾತಿ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
    ರೋಹನ್ ಅಲಿಯಾಸ್ ರೋಹನ್ ಸಲ್ಡಾನಾ (45) ಬಂಧಿತ ಆರೋಪಿಯಾಗಿದ್ದು, ಈತನ ಐಷಾರಾಮಿ ಜೀವನ ವಿದೇಶಗಳೊಂದಿಗೆ ಹೊಂದಿರುವ ನಂಟು ಪ್ರಭಾವಿಗಳೊಂದಿಗೆ ಹೊಂದಿರುವ ಸಂಪರ್ಕ ಬ್ಯಾಂಕ್ ಬ್ಯಾಲೆನ್ಸ್ ಕಂಡು ಪೊಲೀಸರೇ ದಂಗುಬಡಿದು ಹೋಗಿದ್ದಾರೆ
    ರೋಹನ್ ವಿರುದ್ಧ ಕೇಳಿ ಬಂದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ನೇತೃತ್ವದ ತಂಡ ಕಳೆದ ರಾತ್ರಿ ಮಂಗಳೂರು ಹೊರವಲಯದ ಜಪ್ಪಿನಮೊಗರು ಎಂಬಲ್ಲಿನ ಐಷಾರಾಮಿ ಬಂಗಲೆಯ ಮೇಲೆ ದಾಳಿ ನಡೆಸಿದ ವೇಳೆ ಅಲ್ಲಿನ ವೈಭೋಗ ಕಂಡು ಇಡೀ ತಂಡ ಬೆಚ್ಚಿಬಿದ್ದಿದೆ
    ಮನೆಯಲ್ಲಿನ ಚಿನ್ನ, ಬಣ್ಣದ ಚಿತ್ತಾರ, ಎಲ್ಲಿ ನೋಡಿದ್ರೂ ವಿದೇಶಿ ಮದ್ಯಗಳು, ಮಲೇಶಿಯನ್ ಹುಡುಗಿಯರು ಎಲ್ಲವನ್ನು ಮನೆಗೆ ಬಂದ ಉದ್ಯಮಿಗಳಿಗೆ ನೀಡುತ್ತಿದ್ದ. ಐಷಾರಾಮಿ ಮನೆ, ಅಲ್ಲಿನ ಆತಿಥ್ಯ ನೋಡಿಯೇ ಉದ್ಯಮಿಗಳು ಖೆಡ್ಡಾಕ್ಕೆ ಬೀಳುತ್ತಿದ್ದರು.
    ಮೊದಲ ಸುತ್ತಿನ ಮಾತುಕತೆ ಬಳಿಕ ಉದ್ಯಮಿಗಳನ್ನು ತನ್ನ ವಂಚನಾ ಜಾಲಕ್ಕೆ ಬೀಳಿಸಿಕೊಳ್ಳುತ್ತಿದ್ದ. ಉದ್ಯಮಿಗಳ ಒಪ್ಪಿಗೆಯ ನಂತರ 50 ರಿಂದ 100 ಕೋಟಿ ರೂ. ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು 5-10 ಕೋಟಿ ರೂ. ಸ್ಟ್ಯಾಂಪ್ ಡ್ಯೂಟಿ ಹಣ ನೀಡುವಂತೆ ಕೇಳುತ್ತಿದ್ದ. ಆತನ ಬಣ್ಣದ ಮಾತಿಗೆ ಮರುಳಾಗಿ ಉದ್ಯಮಿಗಳು ಹಿಂದೆ-ಮುಂದೆ ನೋಡದೇ ಕೋಟ್ಯಂತರ ರೂ. ಹಣವನ್ನು ನಗದು ರೂಪದಲ್ಲಿ ನೀಡುತ್ತಿದ್ದರು.
    ಮೊದಲ ಸುತ್ತಿನ ಮಾತುಕತೆ ಬಳಿಕ ಉದ್ಯಮಿಗಳಿಗೆ ತನ್ನ ವಂಚನೆ ಜಾಲದ ಖೆಡ್ಡಾಕ್ಕೆ ಬೀಳಿಸುತ್ತಿದ್ದ ರೋಹನ್, 50 ಕೋಟಿಯಿಂದ 100 ಕೋಟಿ ರೂ. ವ್ಯವಹಾರ ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದ. ತಾನು ನಿರೀಕ್ಷೆ ಮಾಡಿದಷ್ಟು ಹಣ ವಸೂಲಿಯಾದ ಬಳಿಕ  ಉದ್ಯಮಿಗಳಿಗೆ ನಾನಾ ನೆಪ ಹೇಳಿ ಎಸ್ಕೇಪ್ ಆಗುತ್ತಿದ್ದ. ಹೀಗೆ ಕೇವಲ 3 ತಿಂಗಳಲ್ಲೇ 45 ಕೋಟಿ ರೂ ವ್ಯವಹಾರ ನಡೆಸಿರುವುದು ಪತ್ತೆ ಆಗಿದೆ.
    ಆರೋಪಿ ರೋಹನ್ ಸಲ್ಡಾನಾನ ಐಷಾರಾಮಿ ಬೆಡ್ ರೂಮ್ ಬಳಿ ಹೈಡ್ ಔಟ್ ರೂಮ್ ಇದೆ. ಬೆಡ್ ರೂಮ್ ಕಬೋರ್ಡ್ ಒಳಗೆ ಒಂದು ಹಿಡನ್ ಡೋರ್ ಇದೆ. ಅದನ್ನು ತಳ್ಳಿದ್ದರೆ ವಿಶಾಲವಾದ ರೂಮ್ ಇದೆ. ಪೊಲೀಸರು ಅಥವಾ ಮೋಸ ಹೋದವರು ಬಂದರೆ ಇದೇ ರೂಮ್ನಲ್ಲಿ ಆತ ಅಡಗಿಕೊಳ್ಳುತ್ತಿದ್ದ.
    ಇದನ್ನು ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.
    ರೋಹನ್ ಸಲ್ಡಾನಾ ಯಾರು?
    ರೋಹನ್ ಸಲ್ಡಾನಾ ಹುಟ್ಟುತ್ತಲೇ ಶ್ರೀಮಂತನಲ್ಲ. 2016ರವರೆಗೂ ಕಷ್ಟದ ಜೀವನ ಮಾಡುತ್ತಿದ್ದ. ವಂಚನೆಯ ಜಾಲಕ್ಕೂ ಮುನ್ನ ಮುಂಬೈಯಲ್ಲಿ ಕೆಲಸ ಮಾಡಿಕೊಂಡಿದ್ದ. ತನಗೆ ಪ್ರಸಿದ್ಧ ಉದ್ಯಮಿಗಳ ಪರಿಚಯವಿದೆ ಎಂದು  ಹೇಳಿಕೊಳ್ಳುತ್ತಿದ್ದ.
    2016ರ ಬಳಿಕ ವಂಚನೆಯ ಜಾಲಕ್ಕೆ ಕೈ ಹಾಕಿದ್ದ. ಹಣದಾಸೆಯಿಂದ ವಂಚನೆಯ ಜಾಲವನ್ನು ವಿಸ್ತಾರ ಮಾಡಿಕೊಂಡಿದ್ದ. ಇದೇ ವರ್ಷ ಜನವರಿಯಲ್ಲಿ ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಆ ಬಳಿಕ ಕೋಟ್ಯಂತರ ರೂ. ವಂಚನೆ ಗೆ ಕೈ ಹಾಕಿದ್ದ. ಈ ನಿಟ್ಟಿನಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ 40 ಕೋಟಿ ರೂ. ವ್ಯವಹಾರ ಮಾಡಿದ್ದ. ಕಳೆದ ತಿಂಗಳು 10 ಕೋಟಿ ರೂ. ಮೌಲ್ಯದ ಫಿಶಿಂಗ್ ಬೋಟ್ ತಯಾರು ಮಾಡಲು ಹೂಡಿಕೆ ಮಾಡಿದ್ದನು.

    ಚಿನ್ನ Bengaluru ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ
    Next Article ಸಿದ್ದರಾಮಯ್ಯ ಕ್ಷಮೆ ಕೋರಿದ META.
    vartha chakra
    • Website

    Related Posts

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jybvf on ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • TommyKit on SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • xumrz on ಮೊಬೈಲ್ ನಿಂದಾದ ದುರಂತ
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe