Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?
    Trending

    ವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?

    vartha chakraBy vartha chakraJuly 22, 2024153 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.15-
    ಮಂತ್ರಿಯೊಬ್ಬರ ರಾಜೀನಾಮೆ ಹಾಗೂ ಹಲವರ ಬಂಧನದ ಮೂಲಕರಾಜ್ಯ ರಾಜಕಾರಣದಲ್ಲಿ ಕೋಲಾಹವನ್ನೇ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಲಾಗಿದೆ.
    ಹಣಕಾಸಿನ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಸ್ತಿತ್ವದಲ್ಲಿಲ್ಲದೇ ಇರುವ ವ್ಯಕ್ತಿಯನ್ನು ನೇಮಕ ಮಾಡಿರುವ ಅಂಶಗಳನ್ನು ಪತ್ತೆ ಹಚ್ವಿದ್ದಾರೆ
    ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದ್ದು,ಕೋಟ್ಯಾಂತರ ರೂಪಾಯಿ ಲೂಟಿ ಮಾಡಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪದ್ಮನಾಭ ಅವರು  ನಕಲಿ ವ್ಯಕ್ತಿಯನ್ನೇ ಸೃಷ್ಟಿಸಿ ನಿಗಮದಲ್ಲಿ ಹುದ್ದೆ ಸಹ ನೀಡಿರುವುದು ಬೆಳಕಿಗೆ ಬಂದಿದೆ.ಈ ನಕಲಿ ವ್ಯಕ್ತಿಯ ಹೆಸರಿನಲ್ಲಿ 45 ಕೋಟಿ ರೂ ಹಣ ವ್ಯವಹಾರ ಮಾಡಲಾಗಿದೆ. ಈ ವಿಚಾರ ಪತ್ತೆಯಾಗುತ್ತಿದ್ದಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ
    ಲೂಟಿಗಾಗಿ ನಕಲಿ ಹುದ್ದೆ:
    ಕೋಟ್ಯಾಂತರ ಹಣ ಲೂಟಿ ಹೊಡೆಯಲು ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಎಂಬ ಹುದ್ದೆಯನ್ನು ಸೃಷ್ಟಿಸಿ ಆ ಹುದ್ದೆಗೆ ಶಿವಕುಮಾರ್‌ ಎಂಬ ಹೆಸರಿನಲ್ಲಿ ಉದ್ಯೋಗಿಯನ್ನು ನೇಮಕ ಮಾಡಿದ್ದಾರೆ.
    ಈ ರೀತಿಯಲ್ಲಿ ನೇಮಕಗೊಂಡ ವ್ಯಕ್ತಿಗೆ ಜ್ಯೂನಿಯರ್ ಅಕೌಂಟೆಂಟ್ ಎಂದು ಗುರುತಿನ ಪತ್ರ ನೀಡಿ ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ ನೀಡಲಾಗಿತ್ತು. ಅಸಲಿಗೆ ಶಿವಕುಮಾರ್‌ ಹೆಸರಿನ ವ್ಯಕ್ತಿಯೇ ಇರಲಿಲ್ಲ.
    ಹಣಕ್ಕೆ ಕನ್ನ ಹಾಕಲು ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ನಲ್ಲಿ ಫೆ. 21ರಂದು 034123030001619 ಖಾತೆ ತೆರೆಯಲಾಗುತ್ತದೆ.ಈ ಶಿವಕುಮಾರ್ ಖಾತೆಗೆ ನಿಗಮದಿಂದ 187 ಕೋಟಿ ರೂ. ವರ್ಗಾವಣೆಗೆ ಮನವಿ ಹೋಗುತ್ತದೆ.
    ಮನವಿ ಮೇರೆಗೆ ನಿಗಮದಿಂದ ಮಾ 5ರಿಂದ ಮೇ 6 ರವರೆಗೆ 187 ಕೋಟಿ ರೂ. ಹಣ ವರ್ಗಾವಣೆಯಾಗುತ್ತದೆ. ಶಿವಕುಮಾರ್‌ ಖಾತೆಯಿಂದ ಹೈದರಾಬಾದ್‌ನ ಆರ್‌ಬಿಎಲ್ ಬ್ಯಾಂಕ್‌ಗೆ ಹಣ ವರ್ಗಾವಣೆ ಆಗುತ್ತದೆ. ಪದ್ಮನಾಭ್ ಕೃತ್ಯಕ್ಕೆ ಯೂನಿಯನ್‌ ಬ್ಯಾಂಕ್ ಸಿಬ್ಬಂದಿ ಸಾಥ್ ನೀಡಿದ್ದರಿಂದ ಇಷ್ಟೊಂದು ಹಣವನ್ನು ಲೂಟಿ ಮಾಡಲಾಗಿದೆ.

    Verbattle
    Verbattle
    Verbattle
    ಇಡಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleD.K.ಶಿವಕುಮಾರ್ Shoes ಎಗರಿಸಿದ ಕಳ್ಳರು.
    Next Article ನಾನೇಕೆ ರಾಜೀನಾಮೆ ಕೋಡಬೇಕೆಂದ ಸಿಎಂ ಸಿದ್ದರಾಮಯ್ಯ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xvmpun on ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    • Glennhof on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.