Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನ ಪರಿಷತ್ ಗೆ ಅವಿರೋಧ ಆಯ್ಕೆ.
    Trending

    ವಿಧಾನ ಪರಿಷತ್ ಗೆ ಅವಿರೋಧ ಆಯ್ಕೆ.

    vartha chakraBy vartha chakraJune 3, 202421 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.3:
    ವಿಧಾನಸಭೆಯಿಂದ ವಿಧಾನಪರಿಷತ್ ನ 11 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ
    ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಸಚಿವ ಬೋಸರಾಜು,ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.
    ಕಾಂಗ್ರೆಸ್‌‍, ಬಿಜೆಪಿ ಹಾಗೂ ಜೆಡಿಎಸ್‌‍ ನಿಂದ ಹನ್ನೊಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.
    ತಮ್ಮ ಪಕ್ಷದ ಮುಖಂಡರೊಂದಿಗೆ ಕಾಂಗ್ರೆಸ್‌‍, ಬಿಜೆಪಿ ಮತ್ತು ಜೆಡಿಎಸ್‌‍ ಅಭ್ಯರ್ಥಿಗಳು ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು.ಕಾಂಗ್ರೆಸ್‌‍ ಅಭ್ಯರ್ಥಿಗಳು ಪ್ರತ್ಯೇಕವಾಗಿ ಉಮೇದುವಾರಿಕೆ ಮಾಡಿದರೆ ಬಿಜೆಪಿ-ಜೆಡಿಎಸ್‌‍ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
    ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
    ಮೊದಲು ಕಾಂಗ್ರೆಸ್‌‍ನ 7 ಅಭ್ಯರ್ಥಿಗಳಾದ ಎನ್‌‍.ಎಸ್‌‍. ಬೋಸರಾಜು, ವಸಂತ್‌ಕುಮಾರ್‌, ಡಾ.ಯತೀಂದ್ರ, ಕೆ.ಗೋವಿಂದರಾಜ್‌, ಐವನ್‌ ಡಿಸೋಜಾ, ಬಿಲ್ಕಿಸ್‌‍ ಬಾನೋ, ಜಗದೇವ್‌ ಗುತ್ತೇದಾರ್‌ ಅವರುಗಳು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಉಮೇದುವಾರಿಕೆ ಮಾಡಿದರು.
    ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಹಾಜರಿದ್ದರು
    ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ , ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ನಾಯಕರೊಂದಿಗೆ ಆಗಮಿಸಿದ ಬಿಜೆಪಿಯ ಸಿ.ಟಿ.ರವಿ, ಎನ್‌.ರವಿಕುಮಾರ್‌ ಹಾಗೂ ಎಂ.ಜಿ.ಮುಳೆ, ಜೆಡಿಎಸ್‌‍ನ ಹಿರಿಯ ಮುಖಂಡ ಜವರಾಯಗೌಡ ಅವರು ಉಮೇದುವಾರಿಕೆ ಸಲ್ಲಿಕೆ ಮಾಡಿದರು.
    ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯೆಯ ಆಧಾರದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ 7, ಪ್ರತಿಪಕ್ಷ ಬಿಜೆಪಿ 3 ಹಾಗೂ ಜೆಡಿಎಸ್‌‍ 1 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ ಗೆಲ್ಲಬೇಕಾದರೆ 19 ಮತಗಳನ್ನು ಪಡೆಯಬೇಕು.
    ಅರವಿಂದ್‌ಕುಮಾರ್‌ ಅರಳಿ, ಎನ್‌‍.ಎಸ್‌‍.ಬೋಸರಾಜು, ಕೆ.ಗೋವಿಂದರಾಜ್‌, ಡಾ. ತೇಜಸ್ವಿನಿ ಗೌಡ, ಮುನಿರಾಜು ಗೌಡಪಿ.ಎಂ, ಕೆ.ಪಿ.ನಂಜುಂಡಿ ವಿಶ್ವಕರ್ಮ ಬಿ.ಎಂ.ಫಾರೂಕ್‌, ರಘುನಾಥ ರಾವ್‌ ಮಲ್ಕಾಪುರೆ, ಎನ್‌. ರವಿ ಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌ ಅವರ ಅಧಿಕಾರಾವಧಿ ಮುಕ್ತಾಯವಾಗಲಿದ್ದು, ತೆರವಾಗಲಿರುವ ಈ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಎನ್‌.ಎಸ್‌‍.ಬೋಸರಾಜ್‌, ಗೋವಿಂದರಾಜ್‌, ಎನ್‌.ರವಿಕುಮಾರ್‌ ಪುನಃ ಸ್ಪರ್ಧಿಸಿದ್ದಾರೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಎಂ.ಕೆ.ವಿಶಾಲಾಕ್ಷಿ ಕಾಂಗ್ರೆಸ್ Election ಜೆಡಿಎಸ್ ಯಡಿಯೂರಪ್ಪ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಲ್ಲೇ ಕೊಲೆಯಾದ ಪಾತಕಿ.
    Next Article ನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LeonardReawn on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Glennhof on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.