Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿರೋಧಿ ನಾಯಕರ ತಲೆಮೇಲೆ ತೂಗುಗತ್ತಿ!
    ಸುದ್ದಿ

    ವಿರೋಧಿ ನಾಯಕರ ತಲೆಮೇಲೆ ತೂಗುಗತ್ತಿ!

    vartha chakraBy vartha chakraAugust 28, 2022Updated:August 28, 2022No Comments2 Mins Read
    Facebook Twitter WhatsApp Pinterest LinkedIn Tumblr Email
    ಕರ್ನಾಟಕದಲ್ಲಿ ವಿರೋಧಪಕ್ಷವಾಗಿರುವ ಕಾಂಗ್ರೆಸ್
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿ,ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ವಿದ್ಯಮಾನಗಳನ್ನು ಗಮನಿಸಿದಾಗ ಕೇಂದ್ರದ ತನಿಖಾ ಸಂಸ್ಥೆಗಳು ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿ ಕೆಲಸ ಮಾಡುತ್ತಿವೆ ಎಂಬುದು ಬಹಳ ಸ್ಪಷ್ಟವಾಗುತ್ತಿದೆ.
    ಅದರಲ್ಲೂ ಸದ್ಯದಲ್ಲೇ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಪ್ರತಿಪಕ್ಷಗಳನ್ನು ಕಟ್ಟಿಹಾಕಲು‌ ಇಂತಹದೊಂದು ತಂತ್ರ ನಡೆಯುತ್ತಿದೆಯಾ ಎಂಬ ಅನುಮಾನಗಳು ಬರುತ್ತಿವೆ.
    ಈ ಅನುಮಾನ ನಿಜವೇ ಆದಲ್ಲಿ ಕರ್ನಾಟಕದಲ್ಲೂ ‌ಸದ್ಯದಲ್ಲೇ ಇಂತಹ ದಾಳಿಗಳು ನಡೆಯಲಿವೆ. ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ವೇದಿಕೆ ಸಜ್ಜುಗೊಳ್ಳುತ್ತಿದೆ.ಆಡಳಿತ ರೂಡ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆಯ ಜೊತೆಗೆ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ.ಇದು ಜನ ಸಾಮಾನ್ಯರ ಗಮನ ಸೆಳೆದಿದೆ.ಇದರಿಂದ ಕಂಗೆಟ್ಟಿರುವ ಬಿಜೆಪಿ ಇದೀಗ ಪ್ರತಿಪಕ್ಷಗಳನ್ನು ಹಣಿಯಲು ತನಿಖಾ ಸಂಸ್ಥೆಗಳನ್ನು ಬಳಸುವ ಸಾಧ್ಯತೆಯಿದೆ.
    ಉನ್ನತ ಮೂಲಗಳ ಪ್ರಕಾರ ಸಿಬಿಐ,ಜಾರಿ ನಿರ್ದೇಶನಾಲಯ ಮತ್ತು ಮಾದಕ ದ್ರವ್ಯ ನಿಯಂತ್ರಣ ಘಟಕ ಈಗಾಗಲೇ ಪಟ್ಟಿ ಮಾಡಿ ದಾಳಿಗೆ ಸಿದ್ದತೆ ನಡೆಸಿವೆ.ಪ್ರಮುಖವಾಗಿ ಶಿವಕುಮಾರ್, ಸಿದ್ದರಾಮಯ್ಯ, ಕುಮಾರಸ್ವಾಮಿ, ಎಂ.ಬಿ.ಪಾಟೀಲ್, ಡಾ.ಪರಮೇಶ್ವರ್ ಮತ್ತವರ ಆಪ್ತರು ಈ ದಾಳಿಯಲ್ಲಿ ಸಿಲುಕುವ ಸಾಧ್ಯತೆಯಿದೆ.
    ಸಿಬಿಐ ಈಗಾಗಲೇ ಮೂವತ್ತಕ್ಕೂ ಅಧಿಕ ಜನರ ಪಟ್ಟಿ ಮಾಡಿದ್ದು ನೋಟೀಸ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
    ಇದಾದ ನಂತರದಲ್ಲಿ ಶೋಧ ಕಾರ್ಯ ನಡೆಸಲಿದೆ.
    ಈ ಸಂಸ್ಥೆಗಳು ನಡೆಸುವ ಶೋಧ ಕಾರ್ಯಾಚರಣೆಗಳಿಗೆ ವ್ಯಾಪಕ ಪ್ರಚಾರ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಹೀಗೆ ಶೋಧಕ್ಕೆ ಒಳಗಾಗುವ ವ್ಯಕ್ತಿಗಳು ಭ್ರಷ್ಟರು, ಅಪರಾಧಿಗಳು ಎಂದು ಬಿಂಬಿಸುವ ವ್ಯವಸ್ಥಿತ ಕಾರ್ಯಾಚರಣೆಯೂ ನಡೆಯುತ್ತಿದೆ.
    ಸಂಶಯವೆಂಬ ಬೀಜವನ್ನು ಗಾಳಿಯಲ್ಲಿ ಬಿತ್ತಿ ಅದು ಮೊಳಕೆಯೊಡೆದು ಹೆಮ್ಮರವಾಗುವಂತೆ ನೋಡಿಕೊಳ್ಳಲಾಗುತ್ತದೆ ಇದೊಂದು ಕಡೆಯಾದರೆ ದಾಳಿಯ ಬೆನ್ನಲ್ಲೇ ಅವರ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.ದಾಳಿಗೆ ಕಾರಣವಾದ ಇವರ ವಿರುದ್ಧದ ಆರೋಪದ ತನಿಖೆ ಪೂರ್ಣಗೊಳ್ಳುವವರಗೆ ಬ್ಯಾಂಕ್ ಖಾತೆಗಳು ಸೀಜ್ ಆಗಿರಲಿವೆ ಈ ಮೂಲಕ ಚುನಾವಣೆಯ ಸಮಯದಲ್ಲಿ ಪ್ರತಿಪಕ್ಷಗಳಿಗೆ ಸಂಪನ್ಮೂಲವೇ ಇಲ್ಲದಂತೆ ಮಾಡುವುದು ತಂತ್ರದ ಭಾಗವಾಗಲಿದೆ.ಇದಿಷ್ಟೇ ಅಲ್ಲ ಪ್ರತಿಪಕ್ಷಗಳಿಗೆ ಆಪ್ತರಾಗಿರುವ ಗುತ್ತಿಗೆದಾರರು, ಉದ್ಯಮಿಗಳು, ಹಣವಂತರಿಗೂ ಗಂಡಾಂತರ ಎದುರಾಗಲಿದೆ.
    ಹರಿಯಾಣದಲ್ಲಿ ಈಗಾಗಲೇ ಪ್ರಯೋಗ ನಡೆದಿದೆ.ಅಲ್ಲಿ ಕಾಂಗ್ರೆಸ್ ಪಕ್ಷದ ಆಪ್ತ ಗುತ್ತಿಗೆದಾರ ರಕ್ಷಣಾ ಇಲಾಖೆಗೆ ಇಲೆಕ್ಟ್ರಿಕಲ್ ಉಪಕರಣ ಪೂರೈಕೆದಾರನ‌ ಮನೆ ಮೇಲೆ ಸಿಬಿಐ ದಾಳಿ ನಢಸಿದ್ದು ಆತ ಹಾಗೂ ಆತನ ಸಂಪರ್ಕದ ಎಲ್ಲಾ ಕಾಂಗ್ರೆಸ್ ನಾಯಕರ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
    ಇದೊಂದು ರೀತಿಯಲ್ಲಿ ಆದರೆ ಮತ್ತೊಂದೆಡೆ
    ಒಮ್ಮೆ ಕೇಂದ್ರ ತನಿಖಾ ತಂಡಗಳು ಕಾರ್ಯಾಚರಣೆ ಆರಂಭಿಸಿದರೆ ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗಳು ಅಂತಹವರ ಜೊತೆ ಯಾವದೇ ಆರ್ಥಿಕ ವಹಿವಾಟು ನಡೆಸುವುದಿಲ್ಲ.ಹೀಗಾದಲ್ಲಿ ಪ್ರತಿಪಕ್ಷಗಳ ಜಂಘಾಬಲವೇ ಹುದುಗಿ ಹೋಗಲಿದೆ.
    ಇಂತಹ ರಾಜಕೀಯ ಚಟುವಟಿಕೆಗಳು ಸದ್ಯದಲ್ಲೇ ರಾಜ್ಯ ರಾಜಕಾರಣದಲ್ಲಿ ಕಾಣ ಸಿಗುತ್ತವೆ.

    ಕಾಂಗ್ರೆಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಷ್ಯನ್ ಸ್ಮಾರಕ ಧ್ವಂಸ ಮಾಡಿದ ಲ್ಯಾಟ್ವಿಯ
    Next Article ಸಚಿವ ಅರಗ ವಿರುದ್ಧ ಲೋಕಾಯುಕ್ತಕ್ಕೆ ದೂರು..
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe on ಸತ್ತವನು ಎದ್ದು‌ ಬಂದಾಗ
    • can i order cheap duphalac price on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • http://sportzona24.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe