Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೀರ ಸಾವರ್ಕರ್ ಸಿನಿಮಾದ ಸುಳ್ಳು.
    Viral

    ವೀರ ಸಾವರ್ಕರ್ ಸಿನಿಮಾದ ಸುಳ್ಳು.

    vartha chakraBy vartha chakraOctober 1, 202426 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ಅ, 01-ಲೋಕಸಭೆ ಚುನಾವಣೆಗೂ ಮುನ್ನ ಬಿಡುಗಡೆಯಾದ ಸ್ವಾತಂತ್ರ್ಯ ವೀರ ಸಾವರ್ಕರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ರೀತಿಯ ಸದ್ದು ಮಾಡದೆ ಹೋದರೂ ರಾಜಕೀಯ ಪಕ್ಷಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ದೊಡ್ಡ ಸುದ್ದಿ ಮಾಡಿತ್ತು.
    ಸಿನಿಮಾ ಬಿಡುಗಡೆಯನ್ನು ಅಭಿಮಾನಿಗಳು ಅತ್ಯಂತ ಸಂಭ್ರಮದಿಂದ ಸ್ವಾಗತಿಸಿದ್ದರು. ಅದರಲ್ಲೂ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಈ ಸಿನಿಮಾ ಒಂದು ಸೆನ್ಸೇಷನ್ ಆಗಲಿದೆ ಎಂದು ಬಿಂಬಿಸಿದ್ದರು ಆದರೆ ಸಿನಿಮಾ ಜನರ ಮನ ಗೆಲ್ಲುವಲ್ಲಿ ವಿಫಲವಾಗಿತ್ತು ಎಂಬುದನ್ನು ಸಿನಿಮಾದ ಕಲೆಕ್ಷನ್ ಸಾಬೀತುಪಡಿಸಿತು.
    ಆದರೆ ಈ ಸಿನಿಮಾ ಕೆಲ ದಿನಗಳಿಂದ ಮತ್ತೊಂದು ರೀತಿಯಲ್ಲಿ ಸುದ್ದಿ ಮಾಡಿದ್ದು ಇದೀಗ ಅದು ಈಗ ಸುಳ್ಳು ಎಂದು ಸಾಬೀತಾಗಿದೆ.
    ಸ್ವಾತಂತ್ರ್ಯ ವೀರ ಸಾವರ್ಕರ್‌’ ಚಿತ್ರವು 2024ರ ಆಸ್ಕರ್‌ಗೆ ಅಧಿಕೃತವಾಗಿ ಭಾರತದಿಂದ ಸಲ್ಲಿಕೆಯಾಗಿದೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದ್ದವು.
    ಇದರ ಬೆನ್ನಲ್ಲೇ ಈ ಚಿತ್ರದ ನಿರ್ಮಾಣ ಮಾಡಿದವರೇ, ‘ನಮ್ಮ ಚಿತ್ರ ‘ಸ್ವಾತಂತ್ರ್ಯ ವೀರ ಸಾವರ್ಕರ್‌’ ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಕೆಯಾಗಿದೆ.ಈ ಮೆಚ್ಚುಗೆಗಾಗಿ ಭಾರತೀಯ ಚಲನಚಿತ್ರ ಒಕ್ಕೂಟಕ್ಕೆ ಧನ್ಯವಾದ’ ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದರು.
    ಇದನ್ನು ಹಲವರು ಹಂಚಿಕೊಂಡಿದ್ದರು. ಮಾಧ್ಯಮಗಳೂ ವರದಿ ಮಾಡಿದ್ದವು. ಅಷ್ಟೇ ಅಲ್ಲ ಸಾವರ್ಕರ್ ಅವರ ಅಭಿಮಾನಿಗಳು ಇದು ನಿಜವಾದ ಯೋಧನಿಗೆ ಸಲ್ಲುತ್ತಿರುವ ಗೌರವವಾಗಿದೆ, ಸುಳ್ಳು ಸುದ್ದಿ ಹರಡಿದವರಿಗೆ ಆಸ್ಕರ್ ಪ್ರಶಸ್ತಿಯ ಕಿರೀಟ ಒಲಿಯುವ ಮೂಲಕ ಉತ್ತರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
    ಸಿನಿಮಾ ಆಸ್ಕರ್ ಗೆ ಪ್ರವೇಶ ಪಡೆದಿದೆ ಇದಕ್ಕೆ ಪ್ರಶಸ್ತಿ ಖಚಿತವಾಗಿಯೂ ಲಭಿಸಲಿದೆ ಸಾವರ್ಕರ್ ಅವರ ವಿರೋಧಿಗಳಿಗೆ ತಕ್ಕ ಉತ್ತರವು ಸಿಗಲಿದೆ ಎಂದು ಜಾಲತಾಣಗಳಲ್ಲಿ ಸಂಭ್ರಮಿಸಿದ್ದರು.
    ಆದರೆ, ವಾಸ್ತವ ಸಂಗತಿ ಹೊರಬಿದ್ದಿದೆ. ಅಸಲಿಗೆ ಸ್ವಾತಂತ್ರ್ಯ ವೀರ ಸಾವರ್ಕರ್ ಸಿನಿಮಾ ಆಸ್ಕರ್ ಗೆ ಪ್ರವೇಶವನ್ನೇ ಪಡೆದಿಲ್ಲ. ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಆಸ್ಕರ್‌-2024 ಎಂದು ಉಲ್ಲೇಖಿಸಲಾಗಿದೆ. 96ನೇ ಆವೃತ್ತಿಯ ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭ ಈ ವರ್ಷದ ಮಾರ್ಚ್‌ ತಿಂಗಳಲ್ಲೇ ನಡೆದಿದೆ. ಹೀಗಾಗಿ ಸಾವರ್ಕರ್ ಸಿನಿಮಾ ಇದರಲ್ಲಿ ಇರಲೇ ಇಲ್ಲ.
    97ನೇ ಆವೃತ್ತಿಯ ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭ ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ 2025ರ ಮಾರ್ಚ್‌ 2ರಂದು ನಡೆಯಲಿದೆ. ಹಾಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ನಲ್ಲಿ ಯಾವುದೇ ಅರ್ಥ ಇಲ್ಲ. ಎನ್ನುವುದು ಸಾಬೀತಾಗಿದೆ
    ಅಂದಹಾಗೆ, 2025ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ನಾಮನಿರ್ದೇಶನಗೊಂಡಿರುವ ಏಕೈಕ ಚಿತ್ರ ‘ಲಪಾತಾ ಲೇಡಿಸ್‌’. ಇದು ನಟ ಅಮೀರ್ ಖಾನ್ ಪ್ರೊಡಕ್ಷನ್ ಹೌಸ್ ನಿಂದ ತಯಾರಾದ ಸಿನಿಮಾವಾಗಿದೆ ಇದರ ನಿರ್ದೇಶಕಿ, ಅಮೀರ್ ಖಾನ್ ಪತ್ನಿ ಬೆಂಗಳೂರಿನ ಕಿರಣ್ ರಾವ್ ಎನ್ನುವುದು ಮತ್ತೊಂದು ವಿಶೇಷ.

    ಕಲೆ ಚಲನಚಿತ್ರ Election ರಾಜಕೀಯ ವೀರ ಸಾವರ್ಕರ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜನಾರ್ದನ ರೆಡ್ಡಿ ತವರು ಜಿಲ್ಲೆ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್
    Next Article ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • online drugstore on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe