Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಬರಿಮಲೈನಲ್ಲಿ ಪೊಲೀಸರ ಅವಾಂತರ.
    Trending

    ಶಬರಿಮಲೈನಲ್ಲಿ ಪೊಲೀಸರ ಅವಾಂತರ.

    vartha chakraBy vartha chakraNovember 27, 202423 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪಟ್ಟನಂತಿಟ್ಟ:
    ಶಬರಿಮಲೈನ ಅಯ್ಯಪ್ಪ ದೇಗುಲದ ಪವಿತ್ರ 18 ಮೆಟ್ಟಿಲುಗಳ ಮೇಲೆ ಪೊಲೀಸರು ಸಮವಸ್ತ್ರ ಧರಿಸಿದ ಕೇರಳ ಪೊಲೀಸರು ನಿಂತಿರುವ ಚಿತ್ರವೊಂದು ವೈರಲ್ ಆಗಿ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
    ಇದು ಧಾರ್ಮಿಕ ಭಾವನೆಗಳಿಗೆ ಹಾಗೂ ದೇವಾಲಯದ ಸಂಪ್ರದಾಯಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಭಕ್ತರು ಆರೋಪಿಸಿದ್ದಾರೆ. ವಿವಾದವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಕೇರಳದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಲಾಖೆಗೆ ಸೂಚಿಸಿದ್ದಾರೆ.
    ಗರ್ಭಗುಡಿಗೆ ಬೆನ್ನು ಮಾಡಿ ನಿಂತ ಪೊಲೀಸರ ಚಿತ್ರವನ್ನು ಶನಿವಾರ ತೆಗೆಯಲಾಗಿದ್ದು, ಇದರಲ್ಲಿ ಸಮವಸ್ತ್ರದಲ್ಲಿರುವ ಸುಮಾರು 28 ಪೊಲೀಸರು ನಿಂತಿರುವುದು ಕಾಣಿಸಿದೆ.
    ಇದು ದೇವಾಲಯದ ಸಂಪ್ರದಾಯ ಮತ್ತು ಭಕ್ತರ ನಂಬಿಕೆಗಳ ಉಲ್ಲಂಘನೆಯಾಗಿದೆ ಎನ್ನಲಾಗಿದೆ. ಪ್ರತಿದಿನದ ವಾಡಿಕೆಯಂತೆ ಮಧ್ಯಾಹ್ನ ದೇವಸ್ಥಾನದ ಬಾಗಿಲು ಮುಚ್ಚಿದ ನಂತರ ಈ ಫೋಟೊ ಸೆರೆಹಿಡಿಯಲಾಗಿದೆ ಎನ್ನಲಾಗಿದೆ.
    ದೇವಾಲಯದ ಪುರೋಹಿತರು ಸಹ ಗರ್ಭಗುಡಿಯ ಕಡೆಗೆ ಮುಖ ಮಾಡಿಕೊಂಡೇ ಈ 18 ಮೆಟ್ಟಿಲುಗಳನ್ನು ಇಳಿಯುತ್ತಾರೆ ಎಂಬುದು ಗಮನಾರ್ಹವಾಗಿದೆ.
    ಭಕ್ತರ ಜನಸಂದಣಿ ನಿಯಂತ್ರಣಕ್ಕೆ ನಿಯೋಜಿಸಲಾದ ಪೊಲೀಸರು ಮೆಟ್ಟಿಲುಗಳ ಮೇಲೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ದೇವಾಲಯದಲ್ಲಿ ಎರಡು ತಿಂಗಳ ಉತ್ಸವದ ಋತು ನವೆಂಬರ್ 16 ರಂದು ಪ್ರಾರಂಭವಾಗಿದೆ. ಪ್ರತಿದಿನ 70,ಸಾವಿರ ಯಾತ್ರಾರ್ಥಿಗಳಿಗೆ ದರ್ಶನಕ್ಕೆ ಅವಕಾಶವಿದ್ದು, ಆನ್ ಲೈನ್ ಮೂಲಕ ದರ್ಶನದ ಬುಕಿಂಗ್ ಮಾಡಬಹುದಾಗಿದೆ.

    ಆನ್ ಲೈನ್ ಧಾರ್ಮಿಕ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಧೂಮಪಾನ ಮತ್ತು ವೇಪ್ಸ್ ನಿಷೇಧಿಸಲಿರುವ ಬ್ರಿಟನ್
    Next Article ಬಾಂಗ್ಲಾದೇಶದಲ್ಲಿ ಕೃಷ್ಣ ಭಕ್ತನ ಬಂಧನ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwinSig on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • ElliottAlods on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Lune Finvex Review on ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe