ಬೆಂಗಳೂರು, ಜೂ. 20:
ಲೋಕಸಭಾ Election ದೃಷ್ಟಿಯಿಂದ ರಾಜ್ಯದಲ್ಲಿ ಬಿಜೆಪಿ ಜೊತೆ ಜೆ.ಡಿ.ಎಸ್. ಮೈತ್ರಿ ಮಾಡಿಕೊಂಡಿತ್ತು
ಈಗ ಚುನಾವಣೆ ಮುಗಿದಿರುವುದರಿಂದ
ಬಿಜೆಪಿಯೊಂದಿಗೆ ಜೆಡಿಎಸ್ ಆದಷ್ಟು ಬೇಗ ವಿಲೀನವಾಗಲಿದೆ ಎಂದು ಕೆಲವರು ತಮಗೆ ಹೇಳಿರುವುದಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆ ಸಮಯದಲ್ಲಿ ಅಥವಾ ನಂತರದಲ್ಲಿ ಈ ವಿಲೀನ ಪ್ರಕ್ರಿಯೆ ನಡೆಯುತ್ತದೆ ಎಂದು ಭವಿಷ್ಯ ನುಡಿದರು.
ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗಬಹುದು. ಉಪಚುನಾವಣೆಗೆ ತಯಾರಿ ನಡೆಸಲು ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಹಳ ದಿನದಿಂದ ಕನಸು ಕಟ್ಟಿಕೊಂಡಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಮಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬಹುದು ಎಂಬ ಆಸೆ ಹೊಂದಿದ್ದಾರೆ.ಆದರೆ, ಕುಮಾರಸ್ವಾಮಿಯವರು ಅವರ ಪುತ್ರನಿಗೆ ಟಿಕೆಟ್ ನೀಡಬೇಕೆಂದುಕೊಂಡಿದ್ದಾರೆ. ಕಾದು ನೋಡೋಣ. ಏನು ಮಾಡುತ್ತಾರೋ ಎಂದರು.
ಚನ್ನಪಟ್ಟಣ ಹೈ ವೋಲ್ಟೇಜ್ ಕ್ಷೇತ್ರವಾಗಿರುವುದರಿಂದ ಮೊದಲೇ ಅಭ್ಯರ್ಥಿ ಹೆಸರು ಹೇಳಿದರೆ ಅಚ್ಚರಿಯ ಘೋಷಣೆಯಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 85 ಸಾವಿರ ಮತಗಳನ್ನು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ರವರ ನಾಯಕತ್ವ ಇರುವುದಕ್ಕೆ ಈ ಪ್ರಮಾಣದ ಮತಗಳು ಲಭಿಸಿವೆ ಎಂದು ಹೇಳಿದರು.
ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಒಳ್ಳೆಯ ಕೆಲಸವನ್ನು ಕ್ಷೇತ್ರದಲ್ಲಿ ಮಾಡಿದ್ದಾರೆ.
ಅವರಿಗೂ ಒಳ್ಳೆಯ ಅವಕಾಶ ಸಿಗಲಿದೆ. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಅವರೇ ಸೂಕ್ತ ತೀರ್ಮಾನ ಮಾಡುತ್ತಾರೆ. ನನಗೆ ಸಣ್ಣ ಜವಾಬ್ದಾರಿಯನ್ನು ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ತೀರ್ಮಾನ ಮಾಡಿಲ್ಲ. ಜನರ ಪಕ್ಷದ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು
5 Comments
order cheap clomid how to buy clomiphene tablets cheap clomid pills clomid generico get generic clomid online cost of clomid at cvs cheap clomiphene without insurance
This is the make of post I recoup helpful.
With thanks. Loads of knowledge!
buy amoxil generic – buy diovan no prescription brand combivent 100 mcg
buy zithromax cheap – nebivolol order nebivolol for sale online