Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಜೊತೆ ವೇದಿಕೆ ಹಂಚಿಕೊಂಡರಾ ಐಎಸ್‌ಐ ನಂಟಿನ ವ್ಯಕ್ತಿ
    ರಾಜಕೀಯ

    ಸಿಎಂ ಜೊತೆ ವೇದಿಕೆ ಹಂಚಿಕೊಂಡರಾ ಐಎಸ್‌ಐ ನಂಟಿನ ವ್ಯಕ್ತಿ

    vartha chakraBy vartha chakraDecember 6, 202359 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.6- ರಾಜ್ಯ ಬಿಜೆಪಿ ನಾಯಕರ ವಿರುದ್ದ ಬಾಯಲ್ಲಿ ಸುಡು ಗುಂಡುಗಳನ್ನು ಎಸೆಯುತ್ತಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದದ ಬಾಂಬ್ ಸಿಡಿಸಿದ್ದಾರೆ.
    ಪಾಕಿಸ್ತಾನದ ಗುಪ್ತಚರ ಐಎಸ್‍ಐ ಜೊತೆ ಸಂಪರ್ಕ ಹೊಂದಿರುವ ಮೌಲ್ವಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಂಚಿಕೊಂಡಿದ್ದಾರೆ ಸದ್ಯದಲ್ಲೇ ಆ ವ್ಯಕ್ತಿಯ ಸಂಪೂರ್ಣ ಮಾಹಿತಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಐಎಸ್‍ಐ ಹಾಗೂ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಇಟ್ಟುಕೊಂಡಿರುವ ಮೌಲ್ವಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ ಇದು ಅತ್ಯಂತ ದುರ್ದೈವ ಎಂದು ಹೇಳಿದರು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದಾಗ ಅದು ಹೇಗೆ ಜಾರಿ ಮಾಡುತ್ತೀರಿ ಎಂದು ಇದೇ ಮೌಲ್ವಿ ಪ್ರಾಣ ಬೆದರಿಕೆ ಹಾಕಿದ್ದ . ಇಂಥವರ ಬಗ್ಗೆ ಕಾಳಜಿ ತೋರುವ ಮುಖ್ಯಮಂತ್ರಿ ಅವರ ಜೊತೆ ವೇದಿಕೆ ಹಂಚಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
    ದೇಶದ ಪ್ರಧಾನಿ ರಾಜ್ಯಕ್ಕೆ ಬರುವಾಗ ಅವರ ಜೊತೆ ಯಾರು,ಯಾರು ಇರಬೇಕೆಂದು ಮೊದಲು ತೀರ್ಮಾನವಾಗುತ್ತದೆ. ಅಲ್ಲದೆ ಅವರ ಪೂರ್ವಾಪರ ಹಿನ್ನೆಲೆ ಸೇರಿದಂತೆ ಎಲ್ಲಾ ಮಾಹಿತಿಯನ್ನು ಕಲೆ ಹಾಕಲಾಗುತ್ತದೆ. ಅದೇ ರೀತಿ ಮುಖ್ಯಮಂತ್ರಿ ಜೊತೆ ವೇದಿಕೆ ಹಂಚಿಕೊಳ್ಳುವಾಗ ಪೊಲೀಸ್ ಇಲಾಖೆ ಹಾಗೂ ಗುಪ್ತಚರಕ್ಕೆ ಮಾಹಿತಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು.
    ಮೌಲ್ವಿಯ ಹಿನ್ನೆಲೆ ಏನೆಂಬುದನ್ನು ಒಂದು ವಾರದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿ ಕೊಡುತ್ತೇನೆ.

     

    ಮುಖ್ಯಮಂತ್ರಿಯವರು ಇಂಥವರ ಜೊತೆ ವೇದಿಕೆ ಹಂಚಿಕೊಂಡು ರಾಜ್ಯದ ಜನತೆಗೆ ಏನು ಸಂದೇಶ ಕೊಡುತ್ತಾರೆ ಎಂದು ಪ್ರಶ್ನೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಹಣ ಹಂಚುತ್ತೇನೆ ಎಂದು ಹೇಳಿದ್ದಾರೆ. ನೀವು ಕೇವಲ ಮುಸ್ಲಿಮರಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ಈ ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆಯಬೇಡಿ. ನಿಮಗೆ ಕೇವಲ ಅವರೊಬ್ಬರೇ ಮಾತ್ರ ಮತ ಹಾಕಿದ್ದಾರೆಯೇ ಎಂದು ಪ್ರಶ್ನಿಸಿದರು.
    ರಾಜ್ಯದ ಮುಖ್ಯಮಂತ್ರಿಯಾದವರು ಎಲ್ಲಾ ಸಮುದಾಯದವರನ್ನು ಸಮಾನವಾಗಿ ಕಾಣಬೇಕು. ಕೇವಲ ವೋಟ್ ಬ್ಯಾಂಕ್‍ಗಾಗಿ ಒಂದು ಸಮುದಾಯವನ್ನು ಓಲೈಕೆ ಮಾಡುವುದು ಸರಿಯಲ್ಲ. ಹೀಗೆ ತುಷ್ಟೀಕರಣ ಮಾಡಿದ್ದರಿಂದಲೇ ನಿಮ್ಮ ಪರಿಸ್ಥಿತಿ ಏನಾಯಿತು ಎಂಬುದನ್ನು ಪಂಚರಾಜ್ಯ ಚುನಾವಣೆಯಿಂದಾದರೂ ತಿಳಿದುಕೊಳ್ಳಿ ಎಂದು ಕಿವಿಮಾತು ಹೇಳಿದರು.

    Verbattle
    Verbattle
    Verbattle
    Government Karnataka News Politics Trending ಕಲೆ Election ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಒಂದೂವರೆ ಸಾವಿರ ರೂಪಾಯಿಗೆ ನಡೆಯಿತು ಕೊಲೆ | Murder
    Next Article ಎಲ್ಲಿದ್ದೀಯಪ್ಪಾ ಜಮೀರ್ ಅಹಮದ್ ಖಾನ್ | Zameer Ahmed Khan
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michealactip on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Georgemen on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • Daviddek on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.