ಬೆಂಗಳೂರು,ಜು.3-
ಹಾಸನ ಸೇರಿದಂತೆ ರಾಜದ ಹಲವು ಪ್ರದೇಶಗಳಲ್ಲಿ
ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕೋವಿಡ್ ಲಸಿಕೆ ಕಾರಣವಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದನ್ನು ಬಯೋಕಾನ್ ಮುಖ್ಯಸ್ಥ ಕಿರಣ್ ಮಜುಂದಾರ್ ಶಾ
ಬಲವಾಗಿ ಖಂಡಿಸಿದ್ದಾರೆ.
ಈ ಕುರಿತಂತೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ವಾಸ್ತವಕ್ಕೆ ವಿರುದ್ಧವಾಗಿದ್ದು, ದಾರಿ ತಪ್ಪಿಸುವಂತಿದೆ’ ಎಂದಿದ್ದಾರೆ.
ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್-19 ಲಸಿಕೆಗಳನ್ನು ತುರ್ತು ಬಳಕೆಗಾಗಿ ಅನುಮೋದಿಸಲಾಗಿತ್ತು. ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ವಿಷಯದಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸಲಾಗಿದೆ. ಈ ಲಸಿಕೆಗಳನ್ನು ‘ತರಾತುರಿಯಲ್ಲಿ’ ಅನುಮೋದಿಸಲಾಗಿದೆ ಎಂದು ಹೇಳುವುದು ವಾಸ್ತವಕ್ಕೆ ವಿರುದ್ಧವಾಗಿದ್ದು, ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ಕೊಡುತ್ತದೆ’ ಎಂದು ಹೇಳಿದ್ದಾರೆ.
ಕೋವಿಡ್ ಲಸಿಕೆ ಲಕ್ಷಾಂತರ ಜೀವಗಳನ್ನು ಉಳಿಸಿದೆ. ಎಲ್ಲಾ ಲಸಿಕೆಗಳಂತೆ ಇದರಲ್ಲಿಯೂ ಸಣ್ಣಪುಟ್ಟ ಅಡ್ಡಪರಿಣಾಮಗಳು ಇರಬಹುದು. ಲಸಿಕೆಯ ಬಗ್ಗೆ ಆರೋಪ ಮಾಡುವ ಬದಲು ಅವುಗಳ ಅಭಿವೃದ್ಧಿಯ ಹಿಂದಿನ ವಿಜ್ಞಾನವನ್ನು ಒಪ್ಪಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ
Previous Articleನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !
Next Article ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !