ಬೆಳಗಾವಿ,ಡಿ.9-
ಜಗತ್ತಿಗೆ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸಿದ್ದು,12 ನೇ ಶತಮಾನದಲ್ಲಿ ನಡೆದ ವಚನ ಚಳುವಳಿ.ಭಕ್ತಿ ಭಂಡಾರಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಚಳವಳಿ ಮತ್ತು ಅನುಭವ ಮಂಟಪ ಜಗತ್ತಿಗೆ ಮಾದರಿ.
ಇಂತಹ ಅನುಭವ ಮಂಟಪದ ತೈಲವರ್ಣ ಚಿತ್ರ ಇದೀಗ ಬೆಳಗಾವಿ ಸುವರ್ಣ ಸೌಧದ ವಿಧಾನಸಭೆಯಲ್ಲಿ ಕಂಗೊಳಿಸುತ್ತಿದೆ.
ವಿಶ್ವದ ಮೊದಲ ಸಂಸತ್‘ ಎಂಬ ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.
ಸುವರ್ಣಸೌಧದ ಸೆಂಟ್ರಲ್ ಹಾಲ್ ಮುಂಭಾಗ ಬಿಡಿಸಿದ ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು. ಟಿ. ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಹೆಚ್. ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.
ಕ್ಯಾನ್ ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರ ಇದಾಗಿದೆ. Bengaluru ಚಿತ್ರಕಲಾ ಪರಿಷತ್ನ ಕಲಾವಿದ ಸತೀಶ್ ರಾವ್, ಶಿವಮೊಗ್ಗದ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು. ಜಗಳೂರು, ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ. ಆರ್. ವೀರಣ್ಣ ಮಡಿವಾಳಪ್ಪ ಬಲ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ ಹಾಗೂ ಜಮಖಂಡಿಯ ದಫಲಾಪುರ ಅವರ ಕುಂಚದಲ್ಲಿ ಮೂಡಿಬಂದಿದೆ.
ಅನುಭವ ಮಂಟಪವು ಮಾನವೀಯತೆ ಮತ್ತು ಸಮಾನತೆಯ ಮಹಾನ್ ಸಂದೇಶವನ್ನು ಸಮಸ್ತ ವಿಶ್ವಕ್ಕೆ ತೋರಿಸಿಕೊಟ್ಟ ಶಕ್ತಿ ಕೇಂದ್ರವಾಗಿತ್ತು. ಸರ್ವಜಾತಿ, ಧರ್ಮಗಳ ಶರಣರನ್ನು ಸ್ವೀಕರಿಸಿದ ಪವಿತ್ರ ತಾಣವಾಗಿದೆ. ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯ, ಸಿದ್ದರಾಮೇಶ್ವರ, ಮಡಿವಾಳ ಮಾಚಿದೇವ, ಡೋಹರ ಕಕ್ಕಯ್ಯ, ಮೇದಾರ ಕೇತಯ್ಯ, ಬಹುರೂಪಿ ಚೌಡಯ್ಯ,, ಕೇತಲದೇವಿ, ದುಗ್ಗಳೆ, ಕಾಳವ್ವ ಮೊದಲಾದ ಶರಣರ ದಿವ್ಯ ಚಿಂತನೆ ಮತ್ತು ಅನುಭವಗಳನ್ನು ಜಗತ್ತಿಗೆ ಪರಿಚಯಿಸಿರುವುದು ಅನುಭವ ಮಂಟಪವಾಗಿದೆ.
6 Comments
cost generic clomiphene for sale clomiphene rx for men buying clomiphene where buy generic clomid pill cost of generic clomiphene get cheap clomiphene online clomid calculator
This is the amicable of serenity I get high on reading.
The reconditeness in this tune is exceptional.
buy inderal paypal – buy methotrexate 5mg generic methotrexate order
amoxil pills – valsartan 160mg tablet ipratropium ca
purchase zithromax for sale – order azithromycin order nebivolol pills