Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆಡ್ಡು ಹೊಡೆದ ಈಶ್ವರಪ್ಪ.
    Trending

    ಸೆಡ್ಡು ಹೊಡೆದ ಈಶ್ವರಪ್ಪ.

    vartha chakraBy vartha chakraSeptember 13, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.13:
    ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿರುವ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಈಶ್ವರಪ್ಪ ದಲಿತ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಸಂಘಟನೆಗೆ ಮುಂದಾಗಿದ್ದಾರೆ.
    ಈ ಹಿಂದೆ ರಾಯಣ್ಣ ಬ್ರಿಗೇಡ್ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಮರ ಘೋಷಣೆ ಮಾಡಿದ್ದ ಈಶ್ವರಪ್ಪ ಅವರು ಹೈಕಮಾಂಡ್ ಮಧ್ಯಪ್ರವೇಶದ ಮೂಲಕ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳನ್ನು ಅಂತ್ಯಗೊಳಿಸಿದ್ದರು ಇದೀಗ ಮತ್ತೆ ಅದೇ ರೀತಿಯ ಚಟುವಟಿಕೆಗಳನ್ನು ಪುನರಾರಂಭಿಸಲು ತೀರ್ಮಾನಿಸಿದ್ದು ಬೆಂಬಲಿಗರು ಮತ್ತು ಹಿತೈಷಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.
    ಈ ಬಾರಿ ತಮ್ಮ ಸಂಘಟನೆಗೆ ರಾಯಣ್ಣ ಬ್ರಿಗೇಡ್ ಬದಲಾಗಿ ಬೇರೆ ರೀತಿಯ ಹೆಸರು ಇಡಲು ಸಿದ್ಧತೆ ನಡೆಸಿದ್ದಾರೆ. ರಾಯಣ್ಣ ಬ್ರಿಗೇಡ್ ಎಂದರೆ ಅದು ಕೇವಲ ಕುರುಬ ಸಮುದಾಯದ ಸಂಘಟನೆ ಎಂದು ಅಪಪ್ರಚಾರ ಮಾಡುವ ಸಾಧ್ಯತೆ ಇದೆ ಎಂಬುದಾಗಿ ಅವರ ಹಿತೈಷಿಗಳು ಸಲಹೆ ಮಾಡಿರುವ ಹಿನ್ನೆಲೆಯಲ್ಲಿ ಈ ಸಂಘಟನೆಗೆ ಮರುನಾಮಕರಣ ಮಾಡಲು ಚಿಂತನೆ ನಡೆಸಿದ್ದು ಸಂಘಟನೆಯಲ್ಲಿ ಕೊಳಗೇರಿ ನಿವಾಸಿಗಳು ಪರಿಶಿಷ್ಟ ಜಾತಿ ಮತ್ತು ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಲು ತೀರ್ಮಾನಿಸಿದ್ದಾರೆ ಎಂದು ಗೊತ್ತಾಗಿದೆ.
    ಕಳೆದ ಲೋಕಸಭೆ Election ಸಮಯದಲ್ಲಿ ತಮ್ಮ ಪುತ್ರ ಕಾಂತೇಶ್ ಅವರಿಗೆ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು ಆದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಮೇಲೆ ಬೀರಿದ ಪ್ರಭಾವದ ಹಿನ್ನೆಲೆಯಲ್ಲಿ ಹಾವೇರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
    ಇದರಿಂದ ಆಕ್ರೋಶಗೊಂಡ ಈಶ್ವರಪ್ಪ ಪಕ್ಷಕ್ಕೆ ಗುಡ್ ಬೈ ಹೇಳಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
    ಇದೀಗ ಮತ್ತೆ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಪಕ್ಷದ ಒಂದು ವರ್ಗ ಪ್ರಯತ್ನ ನಡೆಸುತ್ತಿದೆ ಆದರೆ ಅವರು ಪಕ್ಷದ ಅಧ್ಯಕ್ಷ ವಿಜಯೇಂದ್ರ ಆ ಹುದ್ದೆಯಿಂದ ನಿರ್ಗಮಿಸುವವರೆಗೆ ಬಿಜೆಪಿಗೆ ಬರುವುದಿಲ್ಲ ಎಂದು ಹೇಳಿದ್ದು ಇದೀಗ ಪರ್ಯಾಯ ಸಂಘಟನೆಗೆ ಮುಂದಾಗಿದ್ದಾರೆ.
    ಇದಕ್ಕಾಗಿ ಬಿಜೆಪಿ ರಾಜಕೀಯ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಜಿಎಂ ಸಿದ್ದೇಶ್ವರ್, ಪ್ರತಾಪ ಸಿಂಹ, ವಿರೂಪಾಕ್ಷಪ್ಪ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್ ಹಿರಿಯ ಮುಖಂಡರಾದ ಮುಕುಡಪ್ಪ ಸೇರಿದಂತೆ ಹಲವು ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ.

    Bangalore BJP Congress Government Karnataka News Politics Trending Varthachakra ಈಶ್ವರಪ್ಪ Election ಬೊಮ್ಮಾಯಿ ಯಡಿಯೂರಪ್ಪ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯ.ಸಿಎಂ ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದ ಹೈಕೋರ್ಟ್.
    Next Article ನಕಲಿ ದಾಳಿಯ GST ಅಧಿಕಾರಿಗಳ ವಿರಾಟ್ ರೂಪ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    2 Comments

    1. w2sk9 on June 8, 2025 6:03 am

      where to get generic clomiphene pill where can i get generic clomid pill can i purchase clomid without insurance how can i get generic clomiphene can i order cheap clomiphene without a prescription cheap clomiphene pills generic clomiphene pill

      Reply
    2. ohig9 on June 20, 2025 10:30 pm

      purchase amoxil online cheap – buy ipratropium 100 mcg sale combivent 100 mcg ca

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamreosy on ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • ov846 on ಮೈಸೂರಲ್ಲಿ ಸೈಟ್ ಕಳೆದುಕೊಳ್ಳುವರಾರು..?
    • Melvinboory on ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe