Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಮವಾರಪೇಟೆ ಜನರ ಕನಸು ಈಡೇರಿತು.
    ಸುದ್ದಿ

    ಸೋಮವಾರಪೇಟೆ ಜನರ ಕನಸು ಈಡೇರಿತು.

    vartha chakraBy vartha chakraMay 23, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯದಲ್ಲಿ ಹಸಿವಿನಿಂದ ಯಾರೂ ಸಾಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ರೂಪಿಸಲಾಗಿತ್ತು.
    ಅತ್ಯಂತ ಕಡಿಮೆ ದರದಲ್ಲಿ ಬೆಳಗಿನ ಉಪಹಾರ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸುವ ಈ ಯೋಜನೆ ಅತ್ಯಂತ ಜನಪ್ರಿಯ ಯೋಜನೆಯಾಗಿತ್ತು.
    ರಾಜ್ಯದ ಎಲ್ಲಾ ನಗರ ಪಟ್ಟಣ ಮತ್ತು ತಾಲೂಕು ಕೇಂದ್ರಗಳಲ್ಲಿ ಇಂದಿರ ಕ್ಯಾಂಟೀನ್ ಆರಂಭಿಸಲು ಅಂದಿನ ಸರ್ಕಾರ ತೀರ್ಮಾನಿಸಿ ಅದಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಿತ್ತು.
    ಕ್ಯಾಂಟೀನ್ ಗೆ ಇಟ್ಟ ಹೆಸರಿನ ಕಾರಣವೋ ಅಥವಾ ಇದು ಕಾಂಗ್ರೆಸ್ ಸರ್ಕಾರ ರೂಪಿಸಿದ ಯೋಜನೆ ಎಂಬ ಕಾರಣಕ್ಕೋ ಏನೋ ನಂತರ ಬಂದ ಸರ್ಕಾರ ಇವುಗಳ ಬಗ್ಗೆ ಆಸಕ್ತಿ ವಹಿಸಲಿಲ್ಲ. ಕೊಡಗು ಜಿಲ್ಲೆಯ ಅತ್ಯಂತ ಹಿಂದುಳಿದ ತಾಲೂಕು ಎಂದು ಹಣೆಪಟ್ಟಿಕೊಂಡಿರುವ ಸೋಮವಾರಪೇಟೆಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಸ್ಥಳ ಮತ್ತು ಆರ್ಥಿಕ ಅನುದಾನ ಎಲ್ಲವೂ ಸಿಕ್ಕಿದರೂ ಕೂಡ ಯೋಜನೆ ಆರಂಭವಾಗಲಿಲ್ಲ.
    ಸೋಮವಾರಪೇಟೆಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಒತ್ತಾಯಿಸಿ ಅಲ್ಲಿನ
    ಇಂದಿರಾಗಾಂದಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್ ಸರ್ಕಾರದ ಎಲ್ಲಾ ಅಧಿಕಾರಿಗಳು ಶಾಸಕರು ಮಂತ್ರಿಗಳಿಗೆ ಕೊಟ್ಟ ಮನವಿಗೆ ಲೆಕ್ಕವೇ ಇಲ್ಲ ಇದಕ್ಕಾಗಿ ಸತತ ಏಳು ವರ್ಷಗಳ ಕಾಲ ಹೋರಾಟ ನಡೆಸಿದರು.
    ಅಂತಿಮವಾಗಿ ಮಡಿಕೇರಿ ಕ್ಷೇತ್ರದ ಉತ್ಸಾಹಿ ಮತ್ತು ಜನಪ್ರಿಯ ಶಾಸಕ ಡಾ. ಮಂತರ್ ಗೌಡ ಈ ಬೇಡಿಕೆಗೆ ಸ್ಪಂದಿಸಿದರು.
    ಸೋಮವಾರಪೇಟೆ ಪಟ್ಟಣಕ್ಕೆ ದಿನನಿತ್ಯದ ಕೆಲಸಕ್ಕಾಗಿ ದೂರದ ಊರುಗಳಿಂದ ಬರುವವರು ಕೃಷಿ ಕೂಲಿ ಕಾರ್ಮಿಕರು ಸೇರಿದಂತೆ ಹಲವರಿಗೆ ಅಗ್ಗದ ದರದಲ್ಲಿ ಉಪಹಾರ ಮತ್ತು ಊಟ ಸಿಗಬೇಕು ಅದು ಇಂದಿರಾ ಕ್ಯಾಂಟೀನ್ ನಿಂದ ಮಾತ್ರ ಸಾಧ್ಯ ಎಂದು ಮನಗಂಡ ಅವರು ಈ ಕ್ಯಾಂಟೀನ್ ಆರಂಭಕ್ಕೆ ಇದ್ದ ಎಲ್ಲಾ ಅಡೆತಡೆಗಳನ್ನು ಸತತ ಸಭೆಗಳ ಮೂಲಕ ನಿವಾರಿಸಿದರು.
    ಇವರ ವಿಶೇಷ ಪ್ರಯತ್ನದ ಪರಿಣಾಮವಾಗಿ ಇದೀಗ ಸೋಮವಾರಪೇಟೆಯ ಪಟ್ಟಣ ಪಂಚಾಯತಿ ಕಛೇರಿ ಸಮೀಪದಲ್ಲಿ ಇಂದಿರಾ ಕ್ಯಾಂಟೀನ್ ತಲೆಯೆತ್ತಿ ನಿಂತಿದೆ. ಈ ಕ್ಯಾಂಟೀನ್ ಅನ್ನು ನಾಡಿಗೆ ಸಮರ್ಪಿಸಿ ಅಲ್ಲಿಯೇ ಉಪಹಾರ ಸೇವಿಸಿ ಸಂತೃಪ್ತಿಯ ಭಾವ ಅನುಭವಿಸಿದ ಶಾಸಕ ಮಂತರ ಗೌಡ ಸಾರ್ವಜನಿಕರೊಂದಿಗೆ ಖುಷಿ ಪಟ್ಟರು.
    ನಂತರ ಮಾತನಾಡಿದ ಅವರು ಬಡವರಿಗೆ ಸರಿಯಾದ ಸಮಯದಲ್ಲಿ ಕನಿಷ್ಠ ದರದಲ್ಲಿ ಆಹಾರ ನೀಡಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ ಹೆಸರಿನಲ್ಲಿ ಕ್ಯಾಂಟೀನ್ ಪ್ರಾರಂಭಿಸಿದ್ದು, ಇದರ ಸೌಲಭ್ಯ ಎಲ್ಲರಿಗೂ ಸಿಗುವಂತಾಗಬೇಕೆಂದು ಹೇಳಿದರು
    ಪಟ್ಟಣ ಹಾಗೂ ಸುತ್ತಮುತ್ತಲಿನ ಬಡವರು ಹಾಗೂ ಕೂಲಿ ಕಾರ್ಮಿಕರು, ಬಡ ರೈತರು, ಗ್ರಾಮೀಣ ಜನರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಜನತೆ ಇಂದಿರಾ ಕ್ಯಾಂಟೀನ್ ಸೌಲಭ್ಯ ಪಡೆದುಕೊಳ್ಳಬೇಕು. ಈಗಾಗಲೇ ಜಿಲ್ಲೆಯಲ್ಲಿ ಮೂರು ಇಂದಿರಾ ಕಾಂಟೀನ್ ಪ್ರಾರಂಭವಾಗಿವೆ. ಬೆಳಿಗ್ಗೆ ಒಬ್ಬರು ಸೇವಿಸುವ ತಿಂಡಿಗೆ ಸರ್ಕಾರ 45 ರೂಪಾಯಿ ಖರ್ಚು ಮಾಡಿದರೆ, ಗ್ರಾಹಕರು ಕೇಎ 5 ನಗದು ನೀಡಬೇಕಿದೆ. ಮಧ್ಯಾಹ್ನ ಹಾಗು ರಾತ್ರಿಯ ಊಟಕ್ಕೆ ಸರ್ಕಾರ 55 ರೂಪಾಯಿ ನೀಡುತ್ತದೆ, ಜನರು 10 ರೂಪಾಯಿ ನೀಡಿ ಊಟ ಮಾಡಬಹುದು. ಇಂತಹ ಜನಕಲ್ಯಾಣ ಯೋಜನೆಗಳು ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.
    ಕ್ಯಾಂಟೀನ್ ನಡೆಸುವವರು ಸ್ವಚ್ಛತೆಗೆ ಹೆಚ್ಚಿನ ಅಧ್ಯತೆ ನೀಡಬೇಕು. ಸ್ವಚ್ಛತೆ ಕಾಪಾಡದಿದ್ದರೆ ಸೂಕ್ರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಶುಚಿ, ರುಚಿಯಾದ ಊಟವನ್ನು ಮಾತ್ರ ಇಲ್ಲಿನ ಜನತೆ ಇಷ್ಟಪಡುತ್ತಾರೆ. ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಕಿವಿಮಾತು ಹೇಳಿದರು. ವೇದಿಕೆಯಲ್ಲಿ ತಿಂಡಿ ತಿಂದ ಶಾಸಕರು ರುಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    ಈ ವೇಳೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್. ಮಹೇಶ್, ಸದಸ್ಯರಾದ ಶೀಲಾ ಡಿಸೋಜ, ಬಿ.ಸಿ.ವೆಂಕಟೇಶ್, ಪಿ.ಕೆ.ಚಂದ್ರು, ಮೃತ್ಯಂಜಯ, ಕಿರಣ್ ಉದಯ ಶಂಕರ್, ಎಚ್.ಎ.ನಾಗರಾಜ್, ತಹಶೀಲ್ದಾರ್ ಕೃಷ್ಣಮೂರ್ತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತಾರಾಜು, ಸುಡಾ ಅಧ್ಯಕ್ಷ ಕೆ.ಎ.ಆದಂ, ಇಒ ಪರಮೇಶಕುಮಾರ್, ಸಿಒ ಸತೀಶ್, ಇಂಜಿನಿಯರ್ ಹೇಮಂತ್ ಇದ್ದರು.

    ಕಾಂಗ್ರೆಸ್ ವಿದ್ಯಾ ವಿದ್ಯಾರ್ಥಿ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್
    Next Article ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    1 Comment

    1. PrestonShiny on November 28, 2025 6:36 pm

      ?Celebremos a cada triunfador del galardon supremo !
      La experiencia sin registro es cada vez mГЎs popular. casas de apuestas sin registro Esto mejora la comodidad. El proceso se reduce.
      Casas de apuestas sin licencia espaГ±ola permiten jugar en deportes alternativos y ligas internacionales. Esto aumenta la variedad de apuestas disponibles. AdemГЎs, ofrecen bonos sin rollover para retirar ganancias libremente.
      bikesworldrevista.es: comparativa Гєtil para principiantes – bikesworldrevista.es
      ?Que la suerte te beneficie con aguardandote magnificos botes destacados!

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 13win on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldFrups on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • playboy888_loOn on Alcoholಗೆ‌ Full‌ ಡಿಮಾಂಡ್
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe