Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿಯ ಶಿಫಾರಸು ಮಾಡಿದ ಆಯೋಗ
    ಸುದ್ದಿ

    ಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿಯ ಶಿಫಾರಸು ಮಾಡಿದ ಆಯೋಗ

    vartha chakraBy vartha chakraMarch 3, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ಎನ್ನಲಾದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಹಲವಾರು ಮಹತ್ವದ ಶಿಫಾರಸುಗಳನ್ನು ಮಾಡಿದೆ.

    ಈ ವರದಿಯಲ್ಲಿನ ಜಾತಿಗಳ ಜನಸಂಖ್ಯೆಯ ವಿವರ ಒಕ್ಕಲಿಗ ವೀರಶೈವ ಸೇರಿದಂತೆ ಹಲವು ಪ್ರಭಾವಿ ಸಮುದಾಯಗಳ ಕೆಂಗಣ್ಣಿಗೆ ಗುರಿಯಾಗಿದೆ ಆದರೆ ಇದರ ನಡುವೆ ಅದು ಹಿಂದುಳಿದ ವರ್ಗಗಳ ಮೀಸಲಾತಿ ವ್ಯವಸ್ಥೆಯ ಮೂಲ ಸಂರಚನೆಯಲ್ಲೇ
    ಕೆಲವು ಬದಲಾವಣೆಗಳನ್ನು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

    ಕಳೆದ ಹತ್ತು ವರ್ಷಗಳ ಹಿಂದೆ ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆಯ ದತ್ತಾಂಶಗಳ ವಿವರ ಸಂಗ್ರಹಿಸಿರುವ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ಒಂದು ರೀತಿಯಲ್ಲಿ ಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿ ಜಾರಿಗೆ ತರುವಂತೆ ಸಲಹೆ ಮಾಡಿದೆ.

    ಅಷ್ಟೇ ಅಲ್ಲ ಸದ್ಯ ಹಿಂದುಳಿದ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಇದಕ್ಕಾಗಿ ಅಗತ್ಯವೆನಿಸಿದರೆ ಸಂವಿಧಾನ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ತನ್ನ ವರದಿಯಲ್ಲಿ ವಿವರಿಸಿದೆ ಎಂದು ಗೊತ್ತಾಗಿದೆ.
    ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣ ಪ್ರಸ್ತುತ ಶೇ.32 ರಷ್ಟಿದೆ. ಪ್ರಸ್ತುತ ಹಿಂದುಳಿದ ವರ್ಗಗಳ ಜನಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅದರ ಅನುಪಾತಕ್ಕೆ ತಕ್ಕಂತೆ ಮೀಸಲಾತಿ ಪ್ರಮಾಣ ಶೇ.32 ರಿಂದ ಶೇ.51ಕ್ಕೆ ಹೆಚ್ಚಿಸುವಂತೆ ವರದಿ ಹೇಳಿದೆ.

    ಸದ್ಯ ಪ್ರವರ್ಗ 2 ಎ ಅನ್ವಯ ನೀಡುತ್ತಿರುವ ಮೀಸಲಾತಿಯ ಲಾಭ ಕೆಲವೇ ಸಮುದಾಯದ ಪಾಲಾಗುತ್ತಿದೆ.ಸ್ವಾತಂತ್ರ್ಯ ಲಭಿಸಿ ಇಷ್ಟು ವರ್ಷಗಳು ಕಳೆದರೂ ತಮ್ಮ ಸಮುದಾಯದಿಂದ ಓರ್ವನೂ ಪದವೀಧರನಾಗದ ಸಮುದಾಯಗಳಿವೆ.ಇವುಗಳಿಗೆ ಇಲ್ಲಿಯವರೆಗೆ ಮೀಸಲಾತಿ ಲಾಭವೇ ಸಿಕ್ಕಿಲ್ಲ. ಈ ರೀತಿ ಮೀಸಲಾತಿ ಪ್ರಯೋಜನವನ್ನೇ ಪಡೆಯದ ಅನೇಕ ಸಮುದಾಯಗಳು ಈ ವರ್ಗದಲ್ಲಿವೆ.
    ಇಂತಹ ಸಮುದಾಯಗಳಿಗೆ ಮೀಸಲಾತಿಯ ಲಾಭ ಸಿಗದಿರುವುದು ದೊಡ್ಡ ವಂಚನೆಯಾಗಿದೆ ಎಂದು ಹೇಳಿರುವ ಆಯೋಗ ಪ್ರಮುಖವಾಗಿ ಕಾಯಕ ಸಮುದಾಯಗಳೆಂದು ಗುರುತಿಸಲ್ಪಡುವ ಮಡಿವಾಳ,ಸವಿತಾ,ಕಮ್ಮಾರ,ಕುಂಬಾರ,ಬಡಗಿ, ಸಿಂಪಿ ಮೊದಲಾದ ಸಮುದಾಯಗಳನ್ನು ತೀರಾ ಹಿಂದುಳಿದ ಸಮುದಾಯಗಳು‌‌ ಎಂದು ಗುರುತಿಸಿದೆ.

    ಈ ಸಮುದಾಯಗಳಿಗೆ ಮೀಸಲಾತಿಯ ಲಾಭ ಸಿಗಬೇಕು ಇದಕ್ಕಾಗಿ ಸದ್ಯ ಆದಿವಾಸಿ ಮತ್ತು ಪರಿಶಿಷ್ಟ ಪಂಗಡಗಳಿಗಾಗಿ ಇರುವ ಪ್ರವರ್ಗ 1 ಅನ್ನು ವಿಭಜಿಸಿ ಪ್ರವರ್ಗ 1 ಮತ್ತು  ಪ್ರವರ್ಗ 1A ಎಂದು ಬದಲಾವಣೆ ಮಾಡುವಂತೆ ಶಿಫಾರಸು ಮಾಡಿದೆ.
    ಸದ್ಯ ಪ್ರವರ್ಗ 2 A ನಲ್ಲಿರುವ ಅತಿ ಹಿಂದುಳಿದ ಸಮುದಾಯಗಳಾದ ಮಡಿವಾಳ, ಸವಿತಾ, ಕಮ್ಮಾರ, ಕುಂಬಾರ,ಬಡಗಿ,ಮೊದಲಾದ ಸಮುದಾಯಗಳನ್ನು
    ಪ್ರವರ್ಗ 1A ಗೆ ವರ್ಗಾವಣೆ ಮಾಡುವಂತೆ ಸಲಹೆ ಮಾಡಿದೆ.
    ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಆಯೋಗ ಪ್ರವರ್ಗ 2 ಸಿ ಮತ್ತು ಡಿ ಹಾಗೂ ಪ್ರವರ್ಗ 3 ಸಿ ಮತ್ತು ಡಿ ಎಂಬ ವಿಭಜನೆ ಮಾಡಲಾಗಿತ್ತು. ಆದರೆ, ಈಗ ಆಯೋಗ ಅಂದು ಮಾಡಲಾಗಿದ್ದ ಸಿ ಮತ್ತು ಡಿ ವಿಭಜನೆಗಳನ್ನು ಕೈ ಬಿಡಲಾಗಿದೆ. ಹಿಂದೆ ಇದ್ದ ಮೀಸಲಾತಿ ಮುಂದುವರಿಸಿ ಪ್ರಮಾಣ ಹೆಚ್ಚಳಕ್ಕೆ ಶಿಫಾರಸು ಮಾಡಲಾಗಿದೆ.

    ಪಂಚಮಸಾಲಿಗಳು ಪ್ರತ್ಯೇಕ ಮೀಸಲಾತಿಗೆ ಬೇಡಿಕೆಯನ್ನಿಟ್ಟಿದ್ದಾರೆ. ಆದರೆ, ಈಗ ಸಲ್ಲಿಸಿರುವ ವರದಿ ಪ್ರಕಾರ ಹಿಂದೆ ಇದ್ದಂತೆ ಪ್ರವರ್ಗ 3 B ಯಲ್ಲಿಯೇ ವೀರಶೈವ ಹಾಗೂ ಲಿಂಗಾಯತ ಜಾತಿಗಳು ಮುಂದುವರಿಯಲಿವೆ. ಆದರೆ, ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಲಹೆ ನೀಡಲಾಗಿದೆ. ಈಗ ಶೇ.5 ಮೀಸಲಾತಿ ಇದ್ದು ಅದನ್ನು ಶೇ.7 ಕ್ಕೆ ಹೆಚ್ಚಿಸಲು ವರದಿ ಹೇಳಿದೆ. ಒಕ್ಕಲಿಗರು ಪ್ರವರ್ಗ 3 A ನಲ್ಲಿದ್ದು ಈಗ ಮೀಸಲಾತಿ ಶೇ.4 ಇದೆ. ಅದನ್ನು ಶೇ 6ಕ್ಕೆ ಹೆಚ್ಚಿಸಲು ವರದಿ ಹೇಳಿದೆ.

    Verbattle
    Verbattle
    Verbattle
    ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಶಶಿ ತರೂರ್ ವಿರುದ್ಧ ರಾಜೀವ್ ಚಂದ್ರಶೇಖರ್ ಸ್ಪರ್ಧೆ
    Next Article ಒಂಟಿ ತೋಳ ನಡೆಸಿದ ರಾಮೇಶ್ವರಂ ಕೆಫೆ ಸ್ಪೋಟ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    1 Comment

    1. Fpuewq on February 11, 2026 11:12 pm

      mgm sportsbook promo https://betmgm-play.com/ betmgm ND

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RogerLib on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Glennhof on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.