ಬೆಂಗಳೂರು,ಜು.18- ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಬೆದರಿಸಿ ಚಿನ್ನಾಭರಣ, ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ ಐವರು ಕುಖ್ಯಾತ ದರೋಡೆಕೋರರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ್ ಅಲಿಯಾಸ್ ಕೋಳಿ ಮಂಜ, ಹರೀಶ್ ಗೌಡ, ಕುಶಾಲ್ ಕುಮಾರ್, ಮುನಿಸ್ವಾಮಿ, ಹರೀಶ್ ಅಲಿಯಾಸ್ ಹರಿ ಬಂಧಿತ ಆರೋಪಿಗಳಾಗಿದ್ದಾರೆ.
ಕಳೆದ ಜೂ. 23ರಂದು ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ಮಾಡಿ ಸುನಂಧ ಅವರ ಮನೆಯಲ್ಲಿ ದರೋಡೆ ಮಾಡಿದ್ದರು.
ಬಂಧಿತರಿಂದ 3ಲಕ್ಷ ಬೆಲೆಬಾಳುವ ಚಿನ್ನಾಭರಣಗಳು ಹಾಗು ಬೆಳ್ಳಿ ಜಪ್ತಿ ಮಾಡಲಾಗಿದೆ.ಆರೋಪಿ ಕೋಳಿ ಮಂಜನ ವಿರುದ್ಧ ಹಲವು ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ಕೋಳಿ ಮಂಜನ ಬಂಧನ..!
Previous Articleರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರದ ಹೀರೋ, ಹೀರೋಯಿನ್ ಫಿಕ್ಸ್
Next Article ಬೆಲೆಯೇರಿಕೆ ಬರೆ..