Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಕಿಪಾಕ್ಸ್ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ
    ಸುದ್ದಿ

    ಮಂಕಿಪಾಕ್ಸ್ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ

    vartha chakraBy vartha chakraJuly 20, 2022Updated:July 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿದ ಕೇರಳ ಮೂಲದ ಇಬ್ಬರಲ್ಲಿ ಮಂಕಿಪಾಕ್ಸ್ ಸೋಂಕು ಕಂಡು ಬಂದ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.

    ಮಂಗಳೂರು ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್‌ನಲ್ಲಿ ಮಂಕಿ ಫಾಕ್ಸ್ ಸೋಂಕು ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ನಡೆಸಿ ಮಾತನಾಡಿದ ಅವರು, ಮಂಕಿಪಾಕ್ಸ್ ಕೇರಳದಲ್ಲಿ ಪತ್ತೆಯಾಗಿದ್ದರೂ ಕೂಡ ಕೇರಳದ ಹೆಚ್ಚಿನ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಸಂಚರಿಸುವುದರಿಂದ ವಿಶೇಷ ನಿಗಾ ವಹಿಸಬೇಕು. ಏರ್‌ಲೈನ್ಸ್ ಸಿಬ್ಬಂದಿಯು ಜ್ವರ, ಚರ್ಮದ ಗುಳ್ಳೆಗಳಿರುವ ಪ್ರಯಾಣಿಕರನ್ನು ಪತ್ತೆ ಹಚ್ಚಿ ಪ್ರತ್ಯೇಕಗೊಳಿಸಿ ವಿಮಾನ ನಿಲ್ದಾಣ ಆರೋಗ್ಯಾಧಿಕಾರಿಗಳ ಬಳಿ ಕರೆದೊಯ್ಯಬೇಕು. ನಂತರ ಅವರನ್ನು ವೆನ್ಲಾಕ್‌ ಆಸ್ಪತ್ರೆಗೆ ಕರೆತಂದು ಮಂಕಿಪಾಕ್ಸ್ ಐಸೋಲೇಶನ್ ವಾರ್ಡ್‌ಗೆ ದಾಖಲಿಸಿ ಪ್ರತಿಬಂಧಕ ಕ್ರಮ ತೆಗೆದುಕೊಳ್ಳಬೇಕು ಎಂದು ಆದೇಶಿಸಿದರು.

    ಮಂಕಿಪಾಕ್ಸ್ ಜಾಗೃತಿ ಮೂಡಿಸುವ ವಿವಿಧ ಫೋಟೋಗಳನ್ನು ವಿಮಾನ ನಿಲ್ದಾಣದ ಆರೋಗ್ಯಾಧಿಕಾರಿ, ಏರ್‌ಲೈನ್ಸ್ ಅಧಿಕಾರಿಗಳು ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿ ಹಾಗೂ ಸಿಬ್ಬಂದಿಯ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಹಂಚಬೇಕು. ಪ್ರಯಾಣಿಕರು, ಸಾರ್ವಜನಿಕರು, ಕ್ಯಾಬ್ ಚಾಲಕರಲ್ಲಿ ಮತ್ತು ವಿಮಾನ ನಿಲ್ದಾಣದ ಡಿಜಿಟಲ್ ಡಿಸ್‌ಪ್ಲೇಯಲ್ಲಿ ಹಾಗೂ ಮೈಕ್ ಮೂಲಕ ಅರಿವು ಮೂಡಿಸಬೇಕು. ಜನರು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ನಿರ್ದೇಶಿಸಿದ್ದಾರೆ.

    ಈ ಸಂದರ್ಭ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಬಿ., ಕೋವಿಡ್ ನೋಡಲ್ ಅಧಿಕಾರಿ ಡಾ.ಆಶೋಕ್ ಎಚ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಕೆ., ವಿಮಾನ ನಿಲ್ದಾಣದ ಹೆಡ್ ಆಪರೇಷನ್ ಅಧಿಕಾರಿ ಶ್ರೀಕಾಂತ್ ಟಾಟಾ, ವಿಮಾನ ನಿಲ್ದಾಣದ ವೈದ್ಯಾಧಿಕಾರಿ ಡಾ. ನಿಶಿತಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    doctor medical ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ಆಪ್ತರಿಗೆ ಗೇಟ್ ಪಾಸ್…
    Next Article ಇಡಿ‌ ವಿಚಾರಣೆ: ಸೋನಿಯಾ ಗಾಂಧಿ‌ ನಾಳೆ ಹಾಜರು
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Rbctyt on ಮೈಸೂರು ಸಮೀಪ ಸ್ಪೋಟಕಗಳು ಪತ್ತೆ.
    • Cemjns on ರಾಜ್ಯಸಭೆಗೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಯಾಕೆ ಇಲ್ಲ ಗೊತ್ತಾ | Rajya Sabha Elections
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.