Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೀವಂತವಾಗಿರುವಾಗಲೆ ಸುಡಲು ಜಿಎಸ್‌ಟಿ..!
    ಸುದ್ದಿ

    ಜೀವಂತವಾಗಿರುವಾಗಲೆ ಸುಡಲು ಜಿಎಸ್‌ಟಿ..!

    vartha chakraBy vartha chakraJuly 20, 2022Updated:July 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಬಿಜೆಪಿ ಸರ್ಕಾರ ಜಿಎಸ್​ಟಿ ಮೂಲಕ ಜೀವಂತವಾಗಿರುವಾಗಲೇ ಜನರಿಗೆ ವಿಷ ಕೊಟ್ಟು ಸಾಯಿಸಲು ಮುಂದಾಗಿದೆ. ಇದರ ವಿರುದ್ಧ ತಾಲೂಕು ಹಾಗು ಹೊಬಳಿ ಮಟ್ಟದಲ್ಲಿ ಪಕ್ಷ ಹೋರಾಟ ಮಾಡಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಇರುವುದು ಜನ ಸಂತೋಷವಾಗಿರುವಂತೆ ನೋಡಿಕೊಳ್ಳಲು ಆದರೆ ಸರ್ಕಾರಿ ಉದ್ಯೋಗಿಗಳು, ವ್ಯಾಪಾರಸ್ಥರು, ಜನಸಾಮಾನ್ಯರ ಆದಾಯ ಹೆಚ್ಚು ಮಾಡದೆ, ಎಲ್ಲ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡಿ ಅವರನ್ನು ದಿನನಿತ್ಯ ಪಿಕ್ ಪಾಕೆಟ್ ಮಾಡುತ್ತಿದೆ. ಜಿಎಸ್ ಟಿ ಹಾಕಿ ಜನರನ್ನು ಜೀವಂತವಾಗಿ ಸಾಯಿಸುತ್ತಿದೆ. ಪೆಟ್ರೋಲ್, ಡೀಸೆಲ್, ಹಾಲು ಮೊಸರು ಎಲ್ಲವೂ ದುಬಾರಿಯಾಗಿದೆ. ಇದರ ಹೊರೆಯನ್ನು ಜನರು ಹೇಗೆ ಹೊರುತ್ತಾರೆ ಎಂದು ಪ್ರಶ್ನಿಸಿದರು
    ಹಾಲು ಉತ್ಪಾದನೆ ಮಾಡುವ ರೈತರಿಗೆ ಪ್ರತಿ ಲೀಟರ್ ಗೆ 28 ರೂ. ನೀಡುತ್ತಿದ್ದಾರೆ. ಹಾಲಿಗೆ 5 ರೂ. ಹೆಚ್ಚು ಮಾಡಲಿಲ್ಲ. ಆದರೆ ಹಸುಗಳಿಗೆ ಹಾಕುವ ಮೇವು, ನೀಡುವ ಚಿಕಿತ್ಸೆ ಬೆಲೆ ಹೆಚ್ಚಿದೆ. ರೈತ ಪಶುಸಂಗೋಪನೆ ಮೂಲಕ ತಾನೇ ಉದ್ಯೋಗ ಸೃಷ್ಟಿಸಿಕೊಂಡು ಬದುಕುತ್ತಿದ್ದರೂ ಈ ಸರ್ಕಾರ ಆತನ ಬಗ್ಗೆ ಯೋಚಿಸುತ್ತಿಲ್ಲ ಎಂದು ಕಿಡಿಕಾರಿದರು.
    ಸಹಕಾರಿ ಸಂಸ್ಥೆಗಳು ಎಂದರೆ ಅದು ರೈತರ ಸಂಸ್ಥೆ. ಸರ್ಕಾರದ ಈ ತೀರ್ಮಾನದಿಂದ ಜನ ಮುಂದೆ ಯಾವುದೇ ಪ್ಯಾಕೇಜ್ ಮಾಡುವಂತಿಲ್ಲ. ಕಳ್ಳ ದಾರಿಯಲ್ಲಿ ವ್ಯಾಪಾರ ಮಾಡಲಿ ಎಂದು ಈ ರೀತಿ ಮಾಡುತ್ತಿದೆಯೆ ಎಂದು ಪ್ರಶ್ನಿಸಿದರು.
    ಶವ ಸುಡಲು ತೆರಿಗೆ ಕಟ್ಟುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನಲ್ಲಿ ಯಾರಿಗೂ ಪರಿಹಾರ ನೀಡಲಿಲ್ಲ. ಹೊರ ದೇಶಗಳಲ್ಲಿ ಜನರು ಸಾಯುವ ಮುನ್ನವೇ ಹಣ ಕಟ್ಟಬೇಕು ಎಂದು ಕೇಳಿದ್ದೆ. ಈಗ ಇಲ್ಲೂ ಶವಸಂಸ್ಕಾರಕ್ಕೂ ತೆರಿಗೆ ವಸೂಲಿ ಮಾಡುತ್ತಿದ್ದೀರಿ. ಜನರಿಗೆ ಇಷ್ಟು ಕಿರುಕುಳ ನೀಡುತ್ತಿರುವುದು ಸರಿಯೇ? ಮುಖ್ಯಮಂತ್ರಿಗಳೂ ಇಂದೇ ಸಭೆ ಕರೆದು, ಸರ್ಕಾರದಿಂದಲೇ ಈ ತೆರಿಗೆ ಭರಿಸಿ ಈ ಹೊರೆಯನ್ನು ಜನರಿಗೆ ಹಾಕದಂತೆ ತಡೆಯಬೇಕು. ಆ ಮೂಲಕ ಬಡವರ ಪಿಕ್ ಪಾಕೆಟ್ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿ ತಾಲೂಕು ಮಟ್ಟದಿಂದ ಹೋಬಳಿ ಮಟ್ಟದವರೆಗೂ ಈ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಬಿಜೆಪಿ ಸರ್ಕಾರ ಈಗಾಗಲೇ ಭ್ರಷ್ಟ ಸರ್ಕಾರ ಎಂದು ಹೆಸರು ಪಡೆದುಕೊಂಡಿದೆ ಎಂದರು.

    Politics Business
    Share. Facebook Twitter Pinterest LinkedIn Tumblr Email WhatsApp
    Previous Articleಯಾರು ಯಾರೋ ಸಿಎಂ ಹುದ್ದೆ ಕೇಳುತ್ತಿದ್ದಾರೆ..?
    Next Article ಮಾಜಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್..?
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kashpo napolnoe _bqmn on ಎಲ್‌.ಕೆ. ಅತೀಕ್‌ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ | LK Atheeq
    • kashpo napolnoe _msmn on EDಗೆ ಸುಪ್ರೀಂ ಕೋರ್ಟ್ ತಪರಾಕಿ | Supreme Court
    • panstulavucky on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe