ಬೆಂಗಳೂರು, ಜು.23-ರಾಮನಗರದ ಎಸ್.ಬಿ.ಕಲ್ಯಾಣಮಂಟಪದ ಬಳಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ರಾಮನಗರದ ಎಸ್.ಬಿ ಕಲ್ಯಾಣ ಮಂಟಪದ ಬಳಿ ತುರ್ತುಭೂಸ್ಪರ್ಶ ಮಾಡಲಾಗಿದ್ದು, ಹೆಲಿಕಾಪ್ಟರ್ ನೋಡಲು ಸಾವಿರಾರು ಜನರು ಮುಗಿಬಿದ್ದಿದ್ದಾರೆ.
ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿಕೊಂಡ ಬಳಿಕ ಮತ್ತೆ ಹಾರಾಟ ನಡೆಸಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್ ಗಳು ಮಾತ್ರ ಇದ್ದರು ಎಂದು ತಿಳಿದುಬಂದಿದೆ.
Previous Articleಮಳಲಿ ಮಸೀದಿ ವಿವಾದ : ಸಿವಿಲ್ ನ್ಯಾಯಾಲಯದಿಂದ ಆ.1ರಂದು ತೀರ್ಪು ಸಾಧ್ಯತೆ
Next Article ಡ್ರೋನ್ ಮೂಲಕ ಔಷಧಿ ಸಿಂಪಡಣೆ ಮಾಡುತ್ತಿರುವ ರೈತರು