ತುಮಕೂರು: ತುಮಕೂರಲ್ಲಿ ಸಾವರ್ಕರ್ ಫ್ಲೆಕ್ಸ್ ಜಟಾಪಟಿ ಮುಂದುವರಿದೆ. ನಗರದ ಟೌನ್ ಹಾಲ್ ಸರ್ಕಲ್ ನಲ್ಲಿರುವ ಗಣಪತಿ ದೇವಸ್ಥಾನದ ಹೊರಭಾಗದ ಗೊಡೆ ಮೇಲೆ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ರಾತ್ರಿ ಫ್ಲೆಕ್ಸ್ ಅಳವಡಿಕೆ ಮಾಡಿದ್ದಾರೆ. ಮೊನ್ನೆ ರಾತ್ರಿ ಅಶೋಕ ರಸ್ತೆಯಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ಹರಿದು ಹಾಕಿದ್ದರು. ಇದನ್ನ ಖಂಡಿಸಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಸೇರಿ ಹಿಂದೂಪರ ಸಂಘಟನೆಗಳು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪ್ಲೆಕ್ಸ್ ಹರಿದ ಕಿಡಿಗೇಡಿಗಳು ಇನ್ನೂ ಪತ್ತೆಯಾಗುವ ಮುನ್ನವೇ ದೇವಾಲಯದ ಮುಂದೆ ಸಾವರ್ಕರ್ ಪ್ಲೆಕ್ಸ್ ಹಾಕಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಇಂದು ಕೂಡ ಸ್ಥಳದಲ್ಲಿ ಪೊಲೀಸರ ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.
Previous Articleಶೇರ್ ಆದ ಕಿರಣ್ ರಾಜ್
Next Article ಪೊಲೀಸ್ ಪೇದೆಗಳ ಮೇಲೆ ಹಲ್ಲೆ : ಪಾಕ್ ಕೈದಿ ಗುಂಡೇಟಿಗೆ ಬಲಿ