Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೈಂಗಿಕ ಕಿರುಕುಳ ಆರೋಪ – ಸ್ವಾಮೀಜಿ ದುರ್ಮರಣ
    ಅಪರಾಧ

    ಲೈಂಗಿಕ ಕಿರುಕುಳ ಆರೋಪ – ಸ್ವಾಮೀಜಿ ದುರ್ಮರಣ

    vartha chakraBy vartha chakraSeptember 5, 2022Updated:September 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಸೆ.5- ಮಹಿಳೆಯೊಬ್ಬರ ಜೊತೆ ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನೊಂದ ಬೈಲಹೊಂಗಲ ತಾಲೂಕಿನ ನೆಗಿನಹಾಳದ ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿಗಳು ಶಂಕಾಸ್ಪದವಾಗಿ ಸಾವಿಗೆ ಶರಣಾಗಿದ್ದಾರೆ.
    ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್​ ಆಗಿರುವುದೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
    ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತು ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಅದರ ಬೆನ್ನಲ್ಲೇ ನೇಗಿನಹಾಳದ ಬಸವಸಿದ್ದಲಿಂಗ ಸ್ವಾಮೀಜಿ ಮನ ನೊಂದು ನೇಣಿಗೆ ಶರಣಾಗಿದ್ದಾರೆ.
    ಕೆಲವು ಸ್ವಾಮೀಜಿಗಳ ಲೈಂಗಿಕ ಹಗರಣದ ಕುರಿತು ಓರ್ವ ಮಹಿಳೆ ಆಡಿಯೊದಲ್ಲಿ ಹೆಸರು ಸಹಿತ ಪ್ರಸ್ತಾಪ ಮಾಡಿದ್ದಾರೆ. ಆಡಿಯೊದಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ್ದಾರೆ. ಅವರ ಪೈಕಿ ಓರ್ವ ಮಹಿಳೆ ಕೆಲವೊಂದು ಪ್ರಶ್ನೆಗಳನ್ನು ಇನ್ನೊಂದು ಮಹಿಳೆಗೆ ಕೇಳಿದ್ದಾರೆ. ಬೆಳಗಾವಿಯ ಮಠದಲ್ಲಿಯೇ ಅನೇಕ ವರ್ಷಗಳಿಂದ ತಾವು ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಇನ್ನೊಂದು ಮಹಿಳೆ ಮಠಗಳಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ದೌರ್ಜನ್ಯಗಳ ಕುರಿತು ವಿವರಣೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೆಲವೊಂದು ಮಠಗಳು ಹಾಗೂ ಕೆಲವು ಸ್ವಾಮೀಜಿಗಳ ಹೆಸರನ್ನೂ ಆಕೆ ಆಡಿಯೋದಲ್ಲಿ ಹೇಳಿದ್ದಾರೆ. ಆ ಆಡಿಯೊದಲ್ಲಿ ನೇಗಿನಹಾಳ ಸ್ವಾಮೀಜಿ ಹೆಸರು ಕೂಡ ಇದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮನನೊಂದುಕೊಂಡು ಇಂಥದ್ದೊಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
    ವೈರಲ್​ ಆಡಿಯೋ ಕುರಿತು ಸೂಕ್ತ ತನಿಖೆ ನಡೆಸುವಂತೆ, ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೈಲಹೊಂಗಲ ಡಿವೈಎಸ್​ಪಿ ಅವರಿಗೆ ಮಠದ ಆಡಳಿತ ಮಂಡಳಿ ದೂರು ನೀಡಿದೆ. ಲಿಂಗಾಯತ ಧರ್ಮದ ಮಠಾಧೀಶರನ್ನ ಗುರಿಯಾಗಿಸಿಕೊಂಡು ಪಟ್ಟಭದ್ರ ಹಿತಾಸಕ್ತಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
    ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಠಾಧೀಶರ ಚಾರಿತ್ರ್ಯಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಲಿಂಗಾಯತ ಧರ್ಮದವರಿಗೆ ಮುಜುಗರ ಮಾಡಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ.
    ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Verbattle
    Verbattle
    Verbattle
    ಕಾನೂನು ಧರ್ಮ ಧಾರ್ಮಿಕ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಕ್ತಿ ಪ್ರದರ್ಶನ
    Next Article ಹಬ್ಬದ ರಜೆಗೆ ಬಂದಿದ್ದ ಯುವಕನ ಕೊಲೆ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Jamespiedy on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Jamespiedy on The Essence Of Gandhi Jayanthi | Gandhi Jayanthi 2023
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.