Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೊಬ್ಬರ ಆಗಲಿದೆ ದುಬಾರಿ
    ವಿಶೇಷ ಸುದ್ದಿ

    ಗೊಬ್ಬರ ಆಗಲಿದೆ ದುಬಾರಿ

    vartha chakraBy vartha chakraSeptember 29, 2022Updated:September 29, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹೊಸ ದೆಹಲಿ: ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದ ‌ಹಲವಾರು ಸಮಸ್ಯೆಗಳುಂಟಾಗುತ್ತಿವೆ.ಡಾಲರ್ ಎದುರು ರೂಪಾಯಿ ಮೌಲ್ಯ ಹಿಂದೆಂದೂ ಕಂಡರಿಯದ ಪ್ರಮಾಣದಲ್ಲಿ ಕುಸಿತಗೊಂಡಿದೆ.ರೂಪಾಯಿ ಅಪಮೌಲ್ಯವಾಗುತ್ತಿರುವ ಪರಿಣಾಮ ಆಮದು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದೆ.
    ಕಚ್ಚಾತೈಲ,ಸೆಮಿಕಂಡಕ್ಟರ್, ರಾಸಾಯನಿಕ ‌ಕಚ್ಚಾ ಪದಾರ್ಥಗಳನ್ನು ಹೆಚ್ಚಿನ ಬೆಲೆ ನೀಡಿ ಆಮದು ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಇದು ಉತ್ಪಾದನಾ ವಲಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ.
    ಇವುಗಳೆಲ್ಲವುಗಳಿಗಿಂತ ರಸಗೊಬ್ಬರ ತಯಾರಿಕೆ ಮೇಲೆ ತುಂಬಾ ಗಂಭೀರ ಪರಿಣಾಮ ಬೀರಲಿದೆ‌.ಈಗಾಗಲೇ ರಷ್ಯಾ- ಯುಕ್ರೇನ್ ಯುದ್ಧದ ಪರಿಣಾಮವಾಗಿ ರಸಗೊಬ್ಬರ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.
    ರಾಜ್ಯದಲ್ಲಿ ಪೊಟ್ಯಾಷ್ ರಸಗೊಬ್ಬರ ದರ ದಿಢೀರೆಂದು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ದರ ಏರಿಕೆ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಗೊಬ್ಬರದ ಕೊರತೆಯು ಉಂಟಾಗಿದೆ. ಪೊಟ್ಯಾಷ್ ಗೊಬ್ಬರ ಸಿಗದೆ ಕಬ್ಬು, ಬಾಳೆ, ತೆಂಗು, ಕಲ್ಲಂಗಡಿ ಬೆಳೆಗಾರರು ಕಂಗಾಲಾಗಿದ್ದಾರೆ.
    ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ಪ್ರತಿ 50 ಕೆ.ಜಿ. ಪೊಟ್ಯಾಷ್‍ಗೆ 950-1050 ರೂ. ಇದ್ದುದು ದಿಢೀರ್ 1700 ರೂ. ಗೆ ಏರಿಕೆಯಾಗಿದೆ ಇದು ರೈತರನ್ನು ಕಂಗೆಡಿಸಿದೆ. ಒಂದೆಡೆ ಕೃಷಿ ಇಲಾಖೆಯು ರಸಗೊಬ್ಬರದ ಕೊರತೆಯಿಲ್ಲ ಎನ್ನುತ್ತಿದೆ. ಆದರೆ ಮಾರಾಟಗಾರರು ಪೊಟ್ಯಾಷ್ ಸ್ಟಾಕ್ ಇಲ್ಲ. ಇದಕ್ಕೆ ಬದಲಿಯಾಗಿ ಎಸ್‍ಒಪಿ (ಫಾಸ್ಪರಸ್ ಆಫ್ ಸಲ್ಫೇಟ್) ಯನ್ನು ಬಳಸಿ ಎಂದು ರೈತರಿಗೆ ಸಲಹೆ ನೀಡುತ್ತಿದ್ದಾರೆ.
    ಏಪ್ರಿಲ್ ತಿಂಗಳಲ್ಲಿ ಡಿಎಪಿ, ಪೊಟ್ಯಾಷ್ ಮೊದಲಾದ ರಸಗೊಬ್ಬರಗಳ ಬೆಲೆಯಲ್ಲಿ ಶೇ.30ರವರೆಗೆ ಏರಿಕೆ ಮಾಡಲಾಗಿತ್ತು. ಇದನ್ನು ಸುಧಾರಿಸಿಕೊಳ್ಳುವ ಮುನ್ನವೇ ಪೊಟ್ಯಾಷ್ ದರ ಏರಿಕೆ ಮಾಡಲಾಗಿದೆ. ವರ್ಷಕ್ಕೆ ಎರಡು ಮೂರು ಬಾರಿ ರಸಗೊಬ್ಬರಗಳ ದರ ಹೆಚ್ಚಿಸಿದರೆ ಅನ್ನದಾತರು ಏನು ಮಾಡಬೇಕು ಎಂದು ರೈತ ಮುಖಂಡರು ಪ್ರಶ್ನಿಸುತ್ತಿದ್ದಾರೆ.
    ಇಳುವರಿಗೆ ಪೊಟ್ಯಾಷ್ ಬೇಕು :
    ಕಬ್ಬು, ಬಾಳೆ, ತೆಂಗು, ಕಲ್ಲಂಗಡಿ, ಟೊಮ್ಯಾಟೊ ಸೇರಿದಂತೆ ನಾನಾ ಬೆಳೆಗಳಿಗೆ ಪೊಟ್ಯಾಷ್ ಬಳಸಿದರೆ ಉತ್ತಮ ಇಳುವರಿ ಬರಲಿದೆ. ಅದರಲ್ಲೂ ತೆಂಗು, ಬಾಳೆ, ಅಡಕೆ, ಮಾವು ಮತ್ತಿತರ ವಾಣಿಜ್ಯ ಬೆಳೆಗಳಿಗೆ ಸಕಾಲದಲ್ಲಿ ಪೊಟ್ಯಾಷ್ ಗೊಬ್ಬರ ಹಾಕದಿದ್ದರೆ ಗೊನೆಕಟ್ಟುವುದಿಲ್ಲ.ಗೊನೆ ಕಟ್ಟಿದರೂ ಉತ್ತಮ ಫಸಲು ಸಿಗುವುದಿಲ್ಲ ಹೀಗಾಗಿ ‌ಪೊಟ್ಯಾಷ್ ಕೊಡಲೇಬೇಕು .
    ಹೀಗಾಗಿ ಪೊಟ್ಯಾಷ್ ಗೆ ತುಂಬಾ ಬೇಡಿಕೆಯಿದೆ.ಈ ಬೇಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಉತ್ಪಾದನೆ ಸಾಧ್ಯವಾಗುತ್ತಿಲ್ಲ‌ ರೈತರು ‌ದುಬಾರಿ ಬೆಲೆ ಕೊಟ್ಟು ಖರೀದಿಸೋಣ ಎಂದರೆ ಮಾರಾಟಗಾರರು ಪೊಟ್ಯಾಷ್ ಖಾಲಿಯಾಗಿದೆ ಎನ್ನುತ್ತಿದ್ದಾರೆ ಇದು ಈಗಿನ ಪರಿಸ್ಥಿತಿ.
    ಆದರೆ ಇನ್ನು ಮುಂದೆ ಪರಿಸ್ಥಿತಿ ಮತ್ತಷ್ಟು ಕಠಿಣವಾಗಲಿದೆ ಪ್ರತಿ ಐವತ್ತು ಕಿಲೋ‌ ಪೊಟ್ಯಾಷ್ ಬೆಲೆ ಎರಡು ಸಾವಿರ ರೂಪಾಯಿ ದಾಟಲಿದೆ ಎಂದು ಅಂದಾಜಿಸಲಾಗಿದೆ ಇದಕ್ಕೆ ಪ್ರಮುಖ ಕಾರಣ ಕಚ್ಚಾ ಉತ್ಪನ್ನಗಳ ಕೊರತೆ ಹಾಗೂ ರೂಪಾಯಿ ಅಪಮೌಲ್ಯ.
    ಭಾರತ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥ ವ್ಯವಸ್ಥೆ ಹೊಂದಿರುವ ರಾಷ್ಟ್ರ ಎಂಬ ಹೆಗ್ಗಳಿಕೆ ಪಡೆಯುತ್ತಿದೆಯಾದರೂ ಅಷ್ಟೇ ದೊಡ್ಡ ಪ್ರಮಾಣದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಾ ಸಾಗಿದೆ ಇದರ ಪರಿಣಾಮವಾಗಿ ಅಮದು ವಲಯ ಹೆಚ್ಚಿನ ವಂತಿಗೆ ತೆರಬೇಕಾದ ಪರಿಸ್ಥಿತಿಗೆ ತಲುಪಿದೆ ಹೀಗಾಗಿ ಉತ್ಪಾದನಾ ವಲಯದ ವೆಚ್ಚದ ಪ್ರಮಾಣ ಗಣನೀಯವಾಗಿ ಹೆಚ್ಚಳಚಾಗುತ್ತಿದ್ದು,ರೈತಾಪಿ ವರ್ಗ ಸಂಕಷ್ಟದ ದಿನಗಳನ್ನು ಎದುರಿಸುವಂತಾಗಿದೆ.
    ಪೊಟ್ಯಾಷ್ ಆಮದು ಬೆಲೆ ಹೆಚ್ಚಳವಾಗಿದೆ ಎಂದು ಗೊಬ್ಬರ ತಯಾರಕರು ಬೆಲೆ ಹೆಚ್ಚಳ ಮಾಡುತ್ತಾರೆ ‌ಬೆಳೆಗಳಿಗೆ ಇದನ್ನು ಕೊಡುವುದು ಅನಿವಾರ್ಯವಾದ್ದರಿಂದ ರೈತರು ದುಬಾರಿ ಬೆಲೆ ಕೊಟ್ಟು ಖರೀದಿಸಲೇಬೇಕು ಹಾಗಂತ ರೈತರು ತಾನು ಅಧಿಕ ಬೆಲೆ ನೀಡಿ ಪೊಟ್ಯಾಷ್ ಖರೀದಿಸಿ ಬೆಳೆಗಳಿಗೆ ಹಾಕಿದ್ದೇನೆ ಇದಕ್ಕೆ ಅನುಗುಣವಾಗಿ ಕೃಷಿ ಉತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದೇನೆ ಎಂದು ಹೇಳಲು ಬರುವುದಿಲ್ಲ. ಎಲ್ಲಾ ಉತ್ಪಾದಕರು ತಮ್ಮ ಉತ್ಪಾದನಾ ವೆಚ್ಚ,ಲಾಭಾಂಶ ಲೆಕ್ಕ ಹಾಕಿ ಧರ ನಿಗಧಿ ಮಾಡುವುದು ವಾಡಿಕೆ. ಆದರೆ ಕೃಷಿ ಕ್ಷೇತ್ರ ಮಾತ್ರ ಇದಕ್ಕೆ ಅಪವಾದ. ರೈತ ತಾನು ಎಷ್ಟೇ ವೆಚ್ಚ ಮಾಡಿ ಉತ್ಪಾದಿಸಿದರೂ ಅದನ್ನು ಲೆಕ್ಕಹಾಕಿ ಧರ ನಿಗದಿ ‌ಮಾಡಲು‌ ಸಾಧ್ಯವಿಲ್ಲ ಹೀಗಾಗಿ ಕೃಷಿ ಮತ್ತಷ್ಟು ದುಬಾರಿಯಾಗಿ ರೈತ ಸಂಕಷ್ಟದ ದಿನಗಳನ್ನು ಎದುರಿಸಬೇಕಾಗಲಿದೆ.

    ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ
    Next Article ತೆರೆಮೇಲೆ ಕಾಂತಾರ
    vartha chakra
    • Website

    Related Posts

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    June 20, 2025

    ಕಾಲ್ತುಳಿತ ಕುರಿತು ಕಾಂಗ್ರೆಸ್ ಹೈಕಮಾಂಡ್ ಹೇಳಿದ್ದೇನು ಗೊತ್ತೆ ?

    June 10, 2025

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    June 5, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tkhws on ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಅಸಲಿ ಕಾರಣ ಇಲ್ಲಿದೆ | BJP Karnataka
    • Melvinboory on Matrimonial ವೆಬ್ ಸೈಟ್ ನಲ್ಲೂ ವಂಚನೆ
    • Robertwhelf on ಲೋಕಸಭಾ ಚುನಾವಣೆಯಲ್ಲಿ ಯಾರು ಗೆದ್ದರೆ ಏನಾಗುತ್ತೆ ಗೊತ್ತಾ..
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe