Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಟಿಕೆಟ್ ಬೇಕಾದ್ರೆ ಹೀಗೆ ಮಾಡಿ
    ರಾಜಕೀಯ

    ಕಾಂಗ್ರೆಸ್ ಟಿಕೆಟ್ ಬೇಕಾದ್ರೆ ಹೀಗೆ ಮಾಡಿ

    vartha chakraBy vartha chakraNovember 2, 2022Updated:November 3, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಬೇಕಾ ಹಾಗಾದರೆ ಅರ್ಜಿ ಶುಲ್ಕ ಕೊಟ್ಟು ಅರ್ಜಿ ಪಡೆದು ಡಿ.ಡಿ.ಜೊತೆ ಅರ್ಜಿ ಸಲ್ಲಿಸೋದು ಕಡ್ಡಾಯ . ಆನಂತರ ಅದನ್ನು ಪರಿಶೀಲನಾ ಸಮಿತಿ ಪರಮಾರ್ಷೆ ಮಾಡಲಿದೆ.
    ಹೀಗೊಂದು ನಿಯಮವನ್ನು ಪ್ರದೇಶ ಕಾಂಗ್ರೆಸ್ ರೂಪಿಸಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 5 ರಿಂದ 15 ರವರೆಗೆ ಅರ್ಜಿ ಹಾಕಬಹುದು. ಅರ್ಜಿಗೆ ₹5 ಸಾವಿರ ಶುಲ್ಕ ಕಡ್ಡಾಯ ಮಾಡಲಾಗಿದೆ.
    ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು ₹2 ಲಕ್ಷ ಡಿ.ಡಿ.ಯ ಜೊತೆಗೆ ತಮ್ಮ ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ. 50 ರಷ್ಟು ವಿನಾಯಿತಿ ನೀಡಲಾಗಿದೆ.ಡಿಡಿ ಹಾಗೂ ಅರ್ಜಿ ಶುಲ್ಕದ ಮೂಲಕ ಸಂಗ್ರಹವಾಗುವ ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ.
    ಸುದ್ದಿಗಾರರೊಂದಿಗೆ ಈ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅರ್ಜಿ ಹಾಕಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಸ್ಪಷ್ಟಪಡಿಸಿದರು.
    ಪಕ್ಷಕ್ಕೆ ಮರಳಿ:
    ವಿವಿಧ ಕಾರಣಗಳಿಂದ ಪಕ್ಷ ಬಿಟ್ಟವರು ಮತ್ತೆ ಪಕ್ಷ ಸೇರಲು ಅವಕಾಶ ನೀಡಲಾಗಿದೆ. ಅಂತವರನ್ನು ಮತ್ತೆ ಸೇರಿಸಿಕೊಳ್ಳುವ ವಿಚಾರದಲ್ಲಿ ಮುಕ್ತ ಅವಕಾಶ ನೀಡಿದ್ದೇವೆ. ಅದಕ್ಕಾಗಿ ಒಂದು ಸಮಿತಿ ಇದೆ. ಪಕ್ಷದ ಸಿದ್ಧಾಂತ ಒಪ್ಪಿಕೊಳ್ಳುವ ಯಾರು ಬೇಕಾದರೂ ಅರ್ಜಿ ಹಾಕಬಹುದು ಆದರೆ ಯಾರನ್ನು ಸೇರಿಸಿಕೊಳ್ಳಬೇಕು ಯಾರನ್ನು ಸೇರಿಸಿಕೊಳ್ಳಬಾರದು ಎಂಬ ನಿರ್ಧಾರವನ್ನು ಸಮಿತಿ ಕೈಗೊಳ್ಳಲಿದೆ’ ಎಂದು ಹೇಳಿದರು.
    ಹಲವು ಮಂದಿ ಕಾಂಗ್ರೆಸ್ ಸದಸ್ಯತ್ವ ಪಡೆಯಲು ಉತ್ಸುಕರಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಆನ್ ಲೈನ್ ಮೂಲಕ ನೋಂದಣಿ ಆರಂಭಿಸಿದ್ದೇವೆ. ಕೆಲವು ನಾಯಕರು ಕಾಂಗ್ರೆಸ್ ಸೇರಲು ಬಯಸಿದ್ದು, ನನ್ನ ಸಂಪರ್ಕದಲ್ಲಿದ್ದಾರೆ. ಅವರ ಹೆಸರನ್ನು ಈಗ ಬಹಿರಂಗ ಪಡಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
    ಸರ್ವೋದಯ ಸಮಾವೇಶ:
    ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಇದೇ 6 ರಂದು ಆಗಮಿಸುತ್ತಿದ್ದು, ಅವರನ್ನು ಅಭಿನಂದಿಸಲು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ಆಯೋಜಿಸಲಾಗಿದೆ.
    ರಾಜ್ಯದ ವಿವಿಧ ಮೂಲೆಯಿಂದ ಜನ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮಧ್ಯಾಹ್ನ ಹಮ್ಮಿಕೊಂಡಿದ್ದೇವೆ. ರಾಜ್ಯದ ಎಲ್ಲ ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಆಗಮಿಸಲಿದ್ದಾರೆ. ಅವರು ಎರಡು ದಿನ ಮುಂಚಿತವಾಗಿ ಆಗಮಿಸಲಿದ್ದಾರೆ. ರಾಜ್ಯದ ವಿವಿಧ ನಾಯಕರ ಜತೆ ಒಂದು ವಾರ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸುಧಾ ಮೂರ್ತಿ ಏನು ಹೇಳಿದ್ದಾರೆ…ಕೇಳಿ!
    Next Article ಮಡಿಕೇರಿಯ ತುಫೈಲ್ ಬಂಧನ ಯಾವಾಗ?
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    January 19, 2026

    ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಷಯ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ!

    January 16, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Daviddek on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Daviddek on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.