Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟಾಚಾರವನ್ನು ಕಲಿಸಿಕೊಟ್ಟವರೇ Congress ನವರು.
    ರಾಜ್ಯ

    ಭ್ರಷ್ಟಾಚಾರವನ್ನು ಕಲಿಸಿಕೊಟ್ಟವರೇ Congress ನವರು.

    vartha chakraBy vartha chakraJanuary 25, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.25-
    ‘ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೇಗೆ ಅಕ್ರಮ ನಡೆಸಬೇಕು ಎಂಬುದನ್ನು ರಾಜ್ಯ ಮತ್ತು ದೇಶಕ್ಕೆ ತೋರಿಸಿಕೊಟ್ಟವರು ಕಾಂಗ್ರೆಸ್ ನಾಯಕರು. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಇಂಥವರು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಹೇಳಿರುವುದೇ ಹಾಸ್ಯಾಸ್ಪದ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ತಮ್ಮ ವಿರುದ್ಧ ಕಾಂಗ್ರೆಸ್ ಮಾಡಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್. ಅವರಿಂದ ನಾವು ಪಾಠ ಕಲಿಯಬೇಕಾಗಿಲ್ಲ’ ಎಂದು ಕಿಡಿಕಾರಿದರು.
    ‘Congress ನವರು ಮಾಡುತ್ತಿರುವ ರೀತಿ ನಾವೂ ಕೂಡ ನೂರಾರು ದೂರುಗಳನ್ನು ಕೊಡಬಹುದು. ದೇಶದಲ್ಲಿ ಕಾನೂನುಗಳಿವೆ. ತನಿಖಾ ಸಂಸ್ಥೆಗಳಿವೆ. ಇವರು ಹೇಳಿದ್ದೇ ಅಂತಿಮವೇ?’ ಎಂದು ಪ್ರಶ್ನೆ ಮಾಡಿದರು.

    ‘ಚುನಾವಣೆಯಲ್ಲಿ ಸೋಲುವುದು ಗೊತ್ತಾಗಿಯೇ ಕಾಂಗ್ರೆಸ್ ನಾಯಕರು ಜನತೆಯಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದರಲ್ಲಿ ನೀವು ಯಶಸ್ವಿಯಾಗುವುದಿಲ್ಲ. ನೀವು ನಮ್ಮ ವಿರುದ್ಧ ನೂರು ದೂರುಗಳನ್ನು ಕೊಡಬಹುದು. ಕುಣಿಗಲ್‍ನಲ್ಲಿ ನಿಮ್ಮ ಪಕ್ಷದವರೇ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದೀರಿ. ಇದಕ್ಕಿಂತ ನಿರ್ದಶನ ಇನ್ನೇನು ಬೇಕೆಂದು’ ಹರಿಹಾಯ್ದರು.
    ‘ತಾವು ಸೋಲುತ್ತೇವೆ ಎಂಬುದು ಗ್ಯಾರಂಟಿ ಆಗಿದೆ. ಹತಾಶೆಯಿಂದ ಈ ರೀತಿ ದೂರು ಕೊಡುವುದು, ಇನ್ನೊಂದು ಮತ್ತೊಂದು ಎಂದು ಎಲ್ಲಾ ಮಾಡುತ್ತಿದ್ದಾರೆ. ಅವರು ಒಂದು ಕಂಪ್ಲೇಂಟ್ ಕೊಟ್ಟರೆ ನಾವು 100 ಕಂಪ್ಲೇಂಟ್ ಕೊಡಬಹುದು’ ಎಂದರು.
    ‘ಮೊದಲು ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಎಂಬುದನ್ನು ಮರೆಯಬೇಡಿ. ಕುಣಿಗಲ್‍ನಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‍ಗಳನ್ನು ಸಾಕ್ಷಿ ಸಮೇತ ವಾಣಿಜ್ಯ ತೆರಿಗೆ ಅಧಿಕಾರಿಗಳು ಹಿಡಿದು ನಾಲ್ವರಿಗೆ ದಂಡ ಹಾಕಿದ್ದಾರೆ. ಕುಕ್ಕರ್ ಹಂಚುತ್ತಿದ್ದ ಫೋಟೋಗಳು ಸಹ ಸಿಕ್ಕಿಬಿದ್ದಿವೆ. ಹಾಗಾದರೆ ಇದು ಕಾಂಗ್ರೆಸ್ ಸಂಸ್ಕೃತಿಯೇ?’ ಎಂದು ತರಾಟೆಗೆ ತೆಗೆದುಕೊಂಡರು.

    Congress Government News Politics ಕಾಂಗ್ರೆಸ್ ಕಾನೂನು Election ಬೊಮ್ಮಾಯಿ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleInternational love story..
    Next Article BJP ಯವರು ಮೂರ್ಖರು‌, CAG ವರದಿ ಅರ್ಥವಾಗೋಲ್ಲಾ..
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    September 1, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Quauco4tow on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • kashpo napolnoe _rmmn on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Mirinchik6tow on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe