Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕದನ ಕೌತುಕ ಕಣ – ಲಕ್ಷ್ಮಿ ಸೋಲಿಗೆ ಸಾಹುಕಾರ್ ಪಣ
    ಚುನಾವಣೆ 2024

    ಕದನ ಕೌತುಕ ಕಣ – ಲಕ್ಷ್ಮಿ ಸೋಲಿಗೆ ಸಾಹುಕಾರ್ ಪಣ

    vartha chakraBy vartha chakraFebruary 15, 2023Updated:February 17, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ.

    ರಾಜ್ಯ ರಾಜಕಾರಣದಲ್ಲಿ ದಕ್ಷಿಣದ ಬೆಂಗಳೂರು ಮತ್ತು ಉತ್ತರದ ಬೆಳಗಾವಿ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಇಲ್ಲಿನ ವಿಧಾನಸಭೆ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಿರುವಂತೆ ನಾಯಕರಲ್ಲಿ ಪಕ್ಷ ನಿಷ್ಠೆಗಿಂತ ಪ್ರತಿಷ್ಠೆ, ವ್ಯಕ್ತಿಗತ ಸ್ನೇಹ, ದ್ವೇಷ, ಒಳ ಒಪ್ಪಂದಗಳೇ ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಹೀಗಾಗಿ ಪಕ್ಷ ಸಿದ್ಧಾಂತ, ಅಲೆಯನ್ನು ಗಮನಿಸಿ ಇಲ್ಲಿನ ಫಲಿತಾಂಶಗಳ ಜಾಡು ಹಿಡಿಯುವುದು ಸ್ವಲ್ಪ ಕಷ್ಟವೇ.

    ಅದರಲ್ಲೂ ಬೆಳಗಾವಿಯಲ್ಲಂತೂ ಇದು ಇನ್ನೂ ಕಷ್ಟ. ಒಂದು ಚುನಾವಣೆಯಲ್ಲಿದ್ದ ಮೈತ್ರಿ, ಹೊಂದಾಣಿಕೆ ಮತ್ತೊಂದು ಚುನಾವಣೆಯಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುತ್ತದೆ. ಸದ್ಯ ಈ ಬೆಳಗಾವಿಯಲ್ಲಿ ಇದೀಗ ಹೆಚ್ಚು ಸದ್ದು ಮಾಡುತ್ತಿರುವ ಹೆಸರು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹಾಗೂ ರಮೇಶ್ ಜಾರಕಿಹೊಳಿ (Ramesh Jarkiholi) ಹಾಗೆಯೇ ಬೆಳಗಾವಿ ಗ್ರಾಮೀಣ ಮತ್ತು ಗೋಕಾಕ್ ಕ್ಷೇತ್ರ.

    2018ರ ಚುನಾವಣೆಯಲ್ಲಿ ಹೆಬ್ಟಾಳ್ಕರ್‌ ಪರ ನಿಂತು ಚುನಾವಣೆ ಮಾಡಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್‌, ಈಗ ಅದೇ ಹೆಬ್ಟಾಳ್ಕರ್‌ಸೋಲಿಸಲು ಪಣತೊಟ್ಟಿದ್ದಾರೆ. ಇದು ತಮ್ಮ ಏಕೈಕ ಅಜೆಂಡಾ ಎನ್ನುವಂತೆ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರ ಸಂಚಾರ ಮಾಡುತ್ತಿದ್ದಾರೆ.  ಕ್ಷೇತ್ರದಲ್ಲಿ ನಿರ್ಣಾಯಕರಾಗಿರುವ ಮರಾಠಾ ಸಮುದಾಯದ ಜನರನ್ನು ಸೇರಿಸಿ ಸಭೆಗಳನ್ನು ಮಾಡುತ್ತಿದ್ದಾರೆ. ಮತದಾರರಿಗೆ ಬಹಿರಂಗವಾಗಿಯೇ ಹಣ ಮತ್ತು ಕಾಣಿಕೆಯ ಆಮಿಷ ತೋರಿಸುತ್ತಿದ್ದಾರೆ.

    ಇದಕ್ಕೆ ಮೇಲ್ನೋಟಕ್ಕೆ ಅವರು ನೀಡುತ್ತಿರುವ ಕಾರಣ ಕಳೆದ ಮೂರು ವರ್ಷಗಳ ಹಿಂದೆ ನಡೆದ ಪಿಎಲ್ ಡಿ ಬ್ಯಾಂಕ್ (PLD Bank) ಚುನಾವಣೆ. ಇದರಲ್ಲಿ ತಮ್ಮ ವಿರುದ್ಧ ಹೆಬ್ಬಾಳ್ಕರ್ ಕೆಲಸ ಮಾಡಿದ್ದರು, ಇದು ತನ್ನ ಕೋಪಕ್ಕೆ ಕಾರಣ ಎಂದು ಸಾಹುಕಾರ್ ಜಾರಕಿಹೊಳಿ ಹೇಳುತ್ತಾ ಓಡಾಟ ನಡೆಸಿದ್ದಾರೆ. ಹಾಗೆ ನೋಡಿದರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್‌ ಜಾರಕಿಹೊಳಿ ನಡುವಿನ ಸ್ನೇಹ ಮತ್ತು ಆತ್ಮೀಯತೆಗೆ ಧಕ್ಕೆ ಬರಲು ಕೇವಲ ಬೆಳಗಾವಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯೊಂದೇ ಕಾರಣವಲ್ಲ. ಅದು ನೆಪ ಅಷ್ಟೇ. ಕಾರಣಗಳೇ ಬೇರೆ ಎಂಬುದು ಅವರ ಆಪ್ತರ ಮಾತು. ಇದರ ಜೊತೆಗೆ ಮುಖ್ಯವಾಗಿ ಜಿಲ್ಲೆಯ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್‌ (DK Shivakumar) ಅವರ ನೇರ ಹಸ್ತಕ್ಷೇಪ ರಮೇಶ್‌ ಅವರ ಮುನಿಸಿಗೆ ಕಾರಣವಾಯಿತು. ಇದು ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಲ್ಲಿ ಸ್ಪಷ್ಟವಾಗಿ ಎದ್ದುಕಂಡಿತು. ಇದಾದ ಬಳಿಕ ರಮೇಶ್‌ ಜಾರಕಿಹೊಳಿ ತಮ್ಮ ರಾಜಕೀಯ ಸಾಮರ್ಥ್ಯ ತೋರಿಸಲು ತೊಡೆತಟ್ಟಿ ನಿಂತಿದ್ದಾರೆ.

    ಶಿವಕುಮಾರ್‌ ಹಾಗೂ ಹೆಬ್ಬಾಳ್ಕರ್ ಮೇಲಿನ ಅವರ ಸಿಟ್ಟು JDS ಮತ್ತು Congress ಮೈತ್ರಿ ಸರಕಾರಕ್ಕೆ ಶಾಪವಾಗಿ ಪರಿಣಮಿಸಿತು. ಹೆಬ್ಬಾಳ್ಕರ್ ಮೇಲಿನ ಸಿಟ್ಟು ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿತು. ಮುಂದೆ ನಡೆದಿದ್ದೆಲ್ಲಾ ಈಗ ಇತಿಹಾಸ. ಇದೀಗ ರಮೇಶ್‌ ಜಾರಕಿಹೊಳಿ ತಮ್ಮ ಗೋಕಾಕ್ (Gokak) ಕ್ಷೇತ್ರಕ್ಕಿಂತ ಹೆಬ್ಬಾಳ್ಕರ್ ಪ್ರತಿನಿಧಿಸುತ್ತಿರುವ ಬೆಳಗಾವಿ (Belagavi) ಗ್ರಾಮೀಣ ಕ್ಷೇತ್ರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಗ್ರಾಮೀಣ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ಮಾಡುತ್ತಿರುವ ರಮೇಶ್‌, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರವನ್ನು BJP ವಶ ಮಾಡಿಕೊಳ್ಳುವ ಸವಾಲು ಹಾಕಿದ್ದಾರೆ.

    ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆ ನಿಶ್ಚಿತ. ನಾನೇ ಖುದ್ದು ಇದರ ಉಸ್ತುವಾರಿ ವಹಿಸಿಕೊಂಡು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದ ಹಲವೆಡೆ ಸಂಚಾರ ಮಾಡುತ್ತಿದ್ದಾರೆ. ಹಲವು ಮುಖಂಡರ ಮನೆ ಬಾಗಿಲಿಗೆ ಎಡತಾಕುತ್ತಾ BJP ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ. ಇಲ್ಲಿ BJP ಗೆಲ್ಲಬೇಕು ಎನ್ನುವುದಕ್ಕಿಂತ ಹೆಬ್ಬಾಳ್ಕರ್ ಸೋಲಬೇಕು ಎಂಬುದು ಅವರ ಏಕೈಕ ಗುರಿ.  ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ಸಮಯದಲ್ಲಿ ಆರಂಭವಾದ ಈ ರಾಜಕೀಯ ದ್ವೇಷ ಈಗ ಪರಾಕಾಷ್ಠೆಗೆ ಬಂದು ನಿಂತಿದೆ. ಪರಸ್ಪರ ಆರೋಪ, ಟೀಕಾ ಪ್ರಹಾರ ರಾಜಕೀಯದ ಗಡಿ ಮೀರಿವೆ. ಒಮ್ಮೊಮ್ಮೆ ಜವಾಬ್ದಾರಿ ಮರೆತು ವೈಯಕ್ತಿಕ ಟೀಕೆಗಳು ಕೇಳಿ ಬರುತ್ತಿವೆ.

    ರಮೇಶ್ ಜಾರಕಿಹೊಳಿ ಈ ಕ್ಷೇತ್ರದಿಂದ ತಮ್ಮ ಆಪ್ತ ನಾಗೇಶ ಮನ್ನೋಳ್ಕರ್ (Nagesh Mannolkar) ಅವರಿಗೆ BJP ಟಿಕೆಟ್‌ ಕೊಡಿಸಲು ಶಕ್ತಿಮೀರಿ ಪ್ರಯತ್ನ ನಡೆಸಿದ್ದಾರೆ. ಈ ಸಂಬಂಧ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಮನವರಿಕೆ ಮಾಡಿದ್ದಾರೆ.

    Verbattle
    Verbattle
    Verbattle
    #BJP #Congress #lakshmihebbalkar belagavi BJP Congress DK. Shivakumar Elections 2023 Gokak Government JDS Karnataka m mi nagesh ramesh jarakiholi shiva Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleCongressನತ್ತ ಮುಖಮಾಡಿದ BJP ಶಾಸಕಿ
    Next Article ಹಣ ಸಂಗ್ರಹಕ್ಕೆ ವಾಮ ಮಾರ್ಗ – Congress ಆರೋಪ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    6 Comments

    1. Aaitgf on February 11, 2026 3:08 pm

      betmgm VT betmgm-play betmgm new customer promo

      Reply
    2. Hbofsv on February 19, 2026 5:20 am

      Ignite passions with fiery tournaments and leagues. In crown coins casino, league play fosters rivalry. Compete fiercely and claim glory!

      Reply
    3. Dnuakm on February 27, 2026 9:31 pm

      chumba casino withdrawal brings Vegas vibes straight to your phone. Claim free Sweeps Coins on signup and chase real cash redemptions. Fun never felt this rewarding!

      Reply
    4. Ilpgsz on March 2, 2026 1:06 am

      Stake isn’t just a casino — it’s the crypto gambling stake wheel standard. Provably fair, no KYC hassle for most players, insane multipliers. Start spinning and watch your balance grow.

      Reply
    5. Fvpgwn on March 3, 2026 5:38 pm

      Elevate your casino play with DraftKings roulette. Wager $5 to get 500 bonus spins and up to $1K lossback on day one. Hundreds of games, endless excitement!

      Reply
    6. Rrjjjc on March 6, 2026 7:23 pm

      Usetrete stovky az tisice korun na sve pravidelne lecbe
      https://opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasZes on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Tzzale on ಹೀಗೊಂದು ಯೂ ಟರ್ನ್
    • Xndnkm on ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.