Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚನ್ನಗಿರಿಯಲ್ಲಿ‌ ಸಾಮಾನ್ಯರ ಮನೇಲೂ ನಾಲ್ಕೈದು ಕೋಟಿ ಇರುತ್ತೆ!
    ರಾಜ್ಯ

    ಚನ್ನಗಿರಿಯಲ್ಲಿ‌ ಸಾಮಾನ್ಯರ ಮನೇಲೂ ನಾಲ್ಕೈದು ಕೋಟಿ ಇರುತ್ತೆ!

    vartha chakraBy vartha chakraMarch 7, 2023Updated:March 7, 20237 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ಜನರ ತಲಾ ಆದಾಯ ಕೆಲವೇ ಸಾವಿರ ರೂಪಾಯಿಗಳು ‌ಮಾತ್ರ.‌ಈ ತಲಾ ಆದಾಯವನ್ನು ಲೆಕ್ಕಾಚಾರ ಹಾಕುವುದು‌ ಹೇಗೆಂದರೆ ನಿರ್ಧಿಷ್ಟ ವರ್ಷದಲ್ಲಿ ಆಯ ಜಿಲ್ಲೆಯು ಪ್ರತಿ ವ್ಯಕ್ತಿ ಗಳಿಸಿದ ಸರಾಸರಿ ಆದಾಯವನ್ನು ಅಳೆಯಲಾಗುತ್ತದೆ. ಆ ಪ್ರದೇಶದ ಒಟ್ಟು ಆದಾಯವನ್ನು ಅದರ ಒಟ್ಟು ಜನಸಂಖ್ಯೆಯಿಂದ ಭಾಗಿಸುವ ಮೂಲಕ ಇದನ್ನು ಲೆಕ್ಕ ಹಾಕಲಾಗುತ್ತದೆ. ಜನರ ಜೀವನ ಮಟ್ಟವನ್ನು ಅಳೆಯಲು ತಲಾ ಆದಾಯ ಲೆಕ್ಕ ಹಾಕಲಾಗುತ್ತದೆ.
    ಈ ಲೆಕ್ಕಾಚಾರದ ‌ಪ್ರಕಾರ ರಾಜ್ಯದ 30 ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು ನಗರ(Bengaluru City) 5,41,638 ಹೊಂದಿ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ 71,771 ಹೊಂದಿ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆ ಜನರ ತಲಾ ಆದಾಯ ಬರೋಬ್ಬರಿ 2,97,524 ಪಡೆದು ಮೂರನೇ ಸ್ಥಾನದಲ್ಲಿದೆ.
    ನಂತರದಲ್ಲಿ ಇತರೆ ಜಿಲ್ಲೆಗಳಿವೆ.ಯಾಕೆ‌‌ ಈ ವಿಷಯ ಈಗ ಹೇಳ್ತಾ‌ ಇದೀವಿ ಅಂದರೆ, ಚನ್ನಗಿರಿ ಕ್ಷೇತ್ರದಲ್ಲಿ ಯಾವುದೇ ಸಾಮಾನ್ಯರ‌ ಮನೆಯಲ್ಲಿ ಹುಡುಕಿದರೂ ನಾಲ್ಕು ‌ಕೋಟಿ ರೂಪಾಯಿ ಸಿಗಲಿದೆಯಂತೆ, ಯಾಕೆಂದರೆ ಇಲ್ಲಿರುವರೆಲ್ಲಾ ಅಡಿಕೆ‌ ಕೃಷಿ ಮಾಡುತ್ತಾರೆ ಹೀಗಾಗಿ ಇಷ್ಟು ಹಣ ಇದ್ದೇ ಇರುತ್ತೆ.ಹೀಗಂತಾ ಹೇಳಿದ್ದು ಬೇರಾರೂ ಅಲ್ಲ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳು ವಿರೂಪಾಕ್ಷಪ್ಪ.
    ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ನ‌ ಗುತ್ತಿಗೆ ಕಾರ್ಯಾದೇಶ ನೀಡಲು ಲಂಚ ಪಡೆಯುವ ವೇಳೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಪೊಲೀಸ್ ಬಲೆಗೆ‌ ಬಿದ್ದಿದ್ದಾರೆ‌. ಈ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಮಾಡಾಳು ವಿರೂಪಾಕ್ಷಪ್ಪ ಅವರನ್ನು ಆರೋಪಿ ನಂಬರ್ ಒಂದು ಎಂದು ‌ಹೆಸರಿಸಿದ್ದಾರೆ. ಹೀಗಾಗಿ ಬಂಧನ ಭೀತಿಯಲ್ಲಿದ್ದ ಮಾಡಾಳು ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಪಡೆದು ತಮ್ಮ ಊರಿನಲ್ಲಿ ಪ್ರತ್ಯಕ್ಷವಾದರು.
    ಇವರಿಗೆ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ‌ ಕೋರಿದರು.‌ ಗ್ರಾಮದಲ್ಲಿ ರೋಡ್ ಶೋ‌ ಮಾಡಿ ಪಟಾಕಿ‌ ಸಿಡಿಸಿ‌ ಸಂಭ್ರಮಿಸಿದರು.ಜಯಘೋಷ ಮುಗಿಲು‌‌ ಮುಟ್ಟಿತ್ತು.
    ಕಾರ್ಯಕರ್ತರ ಅದ್ದೂರಿ ಸ್ವಾಗತದಿಂದ ಪುಳಕಿತರಾದ ಶಾಸಕ ಮಾಡಾಳು ಸುದ್ದಿಗಾರರೊಂದಿಗೆ ಮಾತನಾಡಿ, ಚನ್ನಗಿರಿ ಅಡಿಕೆ ನಾಡು ಅಂತಾರೆ. ಇಲ್ಲಿ ಅಡಿಕೆ ತೋಟ ಇರುವ ಯಾವುದೇ ಮನೆಯವರ ಬಳಿಯೂ 5-6 ಕೋಟಿ ರೂ. ಇದ್ದೇ ಇರುತ್ತೆ. ನಮ್ಮ ಬಳಿ 125 ಎಕರೆ ಅಡಿಕೆ ತೋಟ ಇದೆ. 2 ಕ್ರಶರ್‌ಗಳಿವೆ, ಅಡಿಕೆ ಮಂಡಿ ಇದೆ. ಇನ್ನೂ ಅನೇಕ ವ್ಯವಹಾರಗಳಿವೆ. ನನ್ನ ಮಗ ಪ್ರಶಾಂತ್ ಬಳಿ ಸಿಕ್ಕಿರೋದು ನಮ್ಮ ಕುಟುಂಬಕ್ಕೆ ಸೇರಿದ ಹಣವೇ ಹೊರತು, ಲಂಚದ ಹಣವಲ್ಲ. ಲೋಕಾಯುಕ್ತಕ್ಕೆ ಸೂಕ್ತ ದಾಖಲೆ ನೀಡಿ ಹಣವನ್ನು ವಾಪಸ್ ಪಡೆದೇ ಪಡೆಯುತ್ತೇನೆ ಎಂದು ಹೇಳಿದರು.
    ನನ್ನ ಮಗ ಪ್ರಶಾಂತ್ ಸುಮ್ಮನೇ ಕೂತಿದ್ದ. ಯಾರೋ ಇಬ್ಬರು ಬಂದು ದುಡ್ಡು ಕೊಟ್ಟು ಹೋದ್ರು, ನಂತರ ಲೋಕಾಯುಕ್ತದವರು ಬಂದು ಹಣದ ಮೇಲೆ ಕೈ ಹಿಡಿಸಿ ಸೀಜ್ ಮಾಡಿಕೊಂಡು ಹೋದ್ರು. ಆ ಹಣವನ್ನ ನಮ್ಮ ಪಾನ್ ಮಸಾಲ ಕಂಪನಿಗಾಗಿ ಕೊಡಲು ಬಂದಿರಬಹುದು ಎಂದು ತಿಳಿಸಿದರು.
    ನಾನು ಸರಳ, ಸಜ್ಜನ ರಾಜಕಾರಣಿ ನನ್ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ನನ್ನ ಕ್ಷೇತ್ರದ ಜನರೇ ಹೇಳ್ತಾರೆ. ನ್ಯಾಯಾಲಯದಿಂದ ನಿಷ್ಪಕ್ಷಪಾತ ತೀರ್ಪು ಸಿಗುತ್ತದೆಂದು ನಾನು ಭಾವಿಸುತ್ತೇನೆ ಎಂದರು.
    ನನ್ನನ್ನ ಯಾರೂ ಟ್ರ್ಯಾಪ್‌ ಮಾಡೋಕೆ ಬಂದಿಲ್ಲ. ಆದ್ರೆ ಯಾರೋ ದುರುದ್ದೇಶದಿಂದ ಈ ಕೆಲಸ ಮಾಡಿದ್ದಾರೆ. ಹಿಂದಿನ Electionಯಲ್ಲಿ ನನ್ನ ಮೇಲೆ ಆದಾಯ ತೆರಿಗೆ ಇಲಾಖೆ ರೇಡ್ ಮಾಡಿಸಿದ್ದರು. ಅದಕ್ಕೂ ಹಿಂದಿನ ಚುನಾವಣೆಯಲ್ಲಿ ಇನ್ನೇನೋ ಮಾಡಿಸಿದ್ದರು, ಇದೀಗ ಲೋಕಾಯುಕ್ತ ದಾಳಿ ಮಾಡಿಸಿದ್ದಾರೆ ಎಂದು ‌ವಿವರಿಸಿದರು.
    ಶಾಸಕರ‌ ಈ ಹೇಳಿಕೆ ಹಾಗೂ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ನಡೆ ವ್ಯಾಪಕ ಟೀಕೆಗೆ‌ ಗ್ರಾಮವಾಗಿದೆ.
    ಚನ್ನಗಿರಿ ಕ್ಷೇತ್ರ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವ ಸ್ವಯಂ ‌ಸೇವಾ ಸಂಸ್ಥೆ ‌ಸಮೂಹ‌ಶಕ್ತಿ ಇಡೀ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿದೆ.
    ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲದೆ ಜನ ಸಾಮಾನ್ಯರಲ್ಲಿ ರಾಜಕೀಯ ಅರಿವು ‌ಮೂಡಿಸುವ ಜೊತೆಗೆ ಹಲವು ಜನಪರ ಕೆಲಸದಲ್ಲಿ ‌ನಿರತವಾಗಿರುವ ಈ ಸಂಘಟನೆ ಶಾಸಕರನ್ನು‌ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವೈಖರಿ ನಾಚಿಕೆಗೇಡು ಎಂದು ಹೇಳಿದೆ.
    ಶಾಸಕ‌ ಮಾಡಾಳು ‌ಯಾವುದೋ‌ ದೊಡ್ಡ ಜನಪರ ಕೆಲಸ ಮಾಡಿ ಬಂಧನದ ಭೀತಿಗೆ ಸಿಲುಕಿರಲಿಲ್ಲ. ಇವರ ಪುತ್ರ ಇವರ ಸಲಹೆಯಂತೆ ಗುತ್ತಿಗೆ ಕಾರ್ಯಾದೇಶ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.ಇಂತಹ ಭ್ರಷ್ಟಾಚಾರ ಆರೋಪದ ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ನೀಡಿದ ಸ್ವಾಗತದಿಂದ ಕ್ಷೇತ್ರದ ಪ್ರಜ್ಞಾವಂತರು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು‌ ಹೇಳಿದೆ.
    ಕ್ಷೇತ್ರದ ವ್ಯಾಪ್ತಿಯಲ್ಲಿ ನಿರುದ್ಯೋಗ ಮಾಮೂಲು, ಅತಿ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಕೂಲಿ ಕಾರ್ಮಿಕರಿದ್ದಾರೆ.ಸಾವಿರಾರು ಜನ ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ಇತರೆ ಪಟ್ಟಣಗಳಿಗೆ ವಲಸೆ ಹೋಗಿದ್ದಾರೆ. ಇರುವ ಕೃಷಿಕರು ಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದಾರೆ.ಅಡಿಕೆ ಬೆಳೆಗಾರರು ಕೂಡ ಸಂಕಷ್ಟದಲ್ಲಿದ್ದಾರೆ.ಆದರೆ ಶಾಸಕ ‌ಮಾಡಾಳು‌ ಕ್ಷೇತ್ರದ ಅಡಿಕೆ ಬೆಳೆಗಾರರ ಮನೆಯಲ್ಲಿ ನಾಲ್ಕೈದು ಕೋಟಿ ರೂಪಾಯಿ ಇರುವುದು ಮಾಮೂಲು ಎನ್ನುತ್ತಾರೆ ಈ ಹೇಳಿಕೆ ಮೂರ್ಖತನದ ಪರಮಾವಧಿ. ಇವರು ಹೇಳುವುದು ಸತ್ಯವಾದರೆ‌‌ ಕ್ಷೇತ್ರದ ಜನರ ತಲಾ ಆದಾಯ ಎಷ್ಟಿರಬೇಕು‌‌ ಎಂದು ಪ್ರಶ್ನಿಸಿದೆ.

    Bengaluru ಉಡುಪಿ Election ನ್ಯಾಯ ರಾಜಕೀಯ ಲಂಚ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleMandya ಕಾಂಗ್ರೆಸ್ ನಲ್ಲಿ ಧಗಧಗಿಸುತ್ತಿರುವ ಭಿನ್ನಮತ #mandya #congress
    Next Article ಯಡಿಯೂರಪ್ಪ ‌ಕಾಯೋ ತಂದೆ! #yediyurappa #bjp
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    7 Comments

    1. x0sff on June 3, 2025 5:06 pm

      where to buy generic clomid without dr prescription clomiphene price at clicks can you get cheap clomid pills cost of generic clomiphene pills can i get generic clomiphene pills how to get generic clomiphene can i buy generic clomid no prescription

      Reply
    2. shkaf v parking_lcpi on June 8, 2025 11:29 pm

      купить шкаф в паркинг купить шкаф в паркинг .

      Reply
    3. cialis tadalafil tablets on June 10, 2025 2:59 am

      I am in fact happy to coup d’oeil at this blog posts which consists of tons of useful facts, thanks object of providing such data.

      Reply
    4. does flagyl affect birth control pills on June 11, 2025 9:20 pm

      More posts like this would bring about the blogosphere more useful.

      Reply
    5. p2htv on June 19, 2025 9:19 am

      order inderal 20mg sale – buy clopidogrel 150mg online cheap buy methotrexate 5mg

      Reply
    6. tz81b on June 22, 2025 5:42 am

      amoxil us – cheap amoxicillin generic purchase combivent

      Reply
    7. f759m on June 24, 2025 8:41 am

      zithromax price – buy tinidazole 500mg generic nebivolol 20mg for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    • q0rpc on ಕಳಪೆ ಔಷಧ ತಡೆಗಟ್ಟಲು ಕ್ರಮ.
    • KennethSOYNC on ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe