ಬೆಂಗಳೂರು.,ಜೂ.14- ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ನೀಡಿದ ಐದು ಗ್ಯಾರಂಟಿಗಳ ಭರವಸೆಯನ್ನು ರಾಜ್ಯ ಸರ್ಕಾರ ಈಡೇರಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ತೀವ್ರಗೊಂಡಿದೆ.
ರಾಜ್ಯ ಸರ್ಕಾರದ 5 ಗ್ಯಾರಂಟಿಗಳನ್ನು ಬಿಜೆಪಿ ತೀವ್ರ ರೀತಿಯಲ್ಲಿ ಖಂಡಿಸುತ್ತಿದೆ ಇದಕ್ಕೆ ತಿರುಗೇಟು ನೀಡುವ ಕಾಂಗ್ರೆಸ್ ಜನರಿಗೆ ಸರ್ಕಾರ ಹಲವು ಭಾಗ್ಯಗಳನ್ನು ನೀಡಿದೆ ಅದೇ ರೀತಿ ಬಿಜೆಪಿಗೆ ಬೇಕಾದರೆ ಬರ್ನಾಲ್ ಭಾಗ್ಯ ನೀಡುವುದಾಗಿ ತಿಳಿಸಿದೆ.
ಮಹಿಳೆಯರಿಗೆ ಉಚಿತ ಯೋಜನೆ ಜಾರಿಯಾದ ಮರುದಿನವೇ ಬಾಲಕಿಯೊಬ್ಬಳು ಸರ್ಕಾರಿ ಬಸ್ ನಿಂದ ಬಿದ್ದು ಸಾವನ್ನಪ್ಪಿದ ಪ್ರಕರಣವನ್ನು ಉಲ್ಲೇಖಿಸಿ ಬಿಜೆಪಿ ಮಾಡಿದ ಟ್ವೀಟ್ ಗೆ ಕಾಂಗ್ರೆಸ್ ಈ ರೀತಿಯಾಗಿ ಪ್ರತಿಕ್ರಿಯಿಸಿದೆ.
ಬಿಜೆಪಿ ಪಕ್ಷದ ಉರಿ, ನೋವು ನಮಗೆ ಅರ್ಥವಾಗುತ್ತದೆ, ಬಿಜೆಪಿಯ ಉರಿ ಶಮನಕ್ಕಾಗಿ “ಬರ್ನಾಲ್ ಭಾಗ್ಯ” ಕೊಡುವ ಬಗ್ಗೆ ಚಿಂತಿಸುತ್ತೇವೆ. ಪೂರ್ವಸಿದ್ಧತೆ ಇಲ್ಲದೆ ಲಾಕ್ ಡೌನ್ ಮಾಡಿ, ನೋಟು ನಿಷೇಧ ಮಾಡಿ ಸತ್ತ ನೂರಾರು ಮಂದಿಯ ಬಗ್ಗೆ ಈ ಕಾಳಜಿ ಇರಲಿಲ್ಲವೇಕೆ?
ಹೆಚ್ಚುವರಿ ಬಸ್ ಗಳನ್ನು ಖರೀದಿಸಲು ಚಿಂತಿಸುತ್ತಿದ್ದೇವೆ, ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಹುನ್ನಾರ ನಡೆಸಿದ ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
Previous Articleಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!
Next Article ರಾಜ್ಯದಲ್ಲಿ ಈಗ rice politics!

2 Comments
mgm grand betting app https://betmgm-play.com/ mgmbetting
Revel in the diversity of gaming options tailored for all levels. crowncoinscasino ensures quick verifications and hassle-free withdrawals. Experience joy in every game!