Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುಂಡಾಟದಿಂದ ನಲುಗಿದ ಶಿವಮೊಗ್ಗ | Shimoga
    Trending

    ಪುಂಡಾಟದಿಂದ ನಲುಗಿದ ಶಿವಮೊಗ್ಗ | Shimoga

    vartha chakraBy vartha chakraOctober 2, 202325 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.2 – ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಹಾಕಲಾಗಿದ್ದ ಕಟೌಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಮಾತಿನ ಚಕಮಕಿ ಘರ್ಷಣೆಗೆ ತಿರುಗಿ ಕಲ್ಲುತೂರಾಟ ನಡೆದ ಘಟನೆ ಶಿವಮೊಗ್ಗದಲ್ಲಿ (Shimoga) ನಡೆದಿದೆ.
    ನಗರದ ಹೊರವಲಯದ ರಾಗಿಗುಡ್ಡದಲ್ಲಿ ಈದ್‍ಮಿಲಾದ್ ಮೆರವಣಿಗೆಯ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ನಡೆದಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
    ಈದ್‍ಮಿಲಾದ್ ಪ್ರಯುಕ್ತವಾಗಿ ನಿನ್ನೆ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಅಳವಡಿಸಲಾಗಿದ್ದ ಕಟೌಟ್ ಕುರಿತಂತೆ ಅಸಮಾಧಾನಗೊಂಡಿದ್ದ ಕೆಲವರು ಆಯೋಜಕರ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ.

    ಕೆಲವು ಕಿಡಿಗೇಡಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಂತರ ಉಭಯ ಗುಂಪುಗಳ ನಡುವೆ ಕಲ್ಲು ತೂರಾಟ ಹೆಚ್ಚಾಗಿದ್ದು, 7 ಕ್ಕೂ ಹೆಚ್ಚು ಕಾರುಗಳು, ಹಲವು ಮನೆಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಕೆಲವರ ಮನೆಗಳಿಗೆ ನುಗ್ಗಿ ದಾಳಿ ಮಾಡುವ ಪ್ರಯತ್ನ ನಡೆಸಿದ್ದಾರೆ
    ರಾಗಿಗುಡ್ಡದಲ್ಲಿ ಗಲಭೆ ನಡೆಯುತ್ತಿದ್ದ ಮಾಹಿತಿ ತಿಳಿದು ಸ್ಥಳಕ್ಕೆ ನಾಲ್ಕು ಮಂದಿ ಸಿಬ್ಬಂದಿಗಳೊಂದಿಗೆ ಖುದ್ದು ಭೇಟಿ ನೀಡಿದ ಎಸ್‍ಪಿ ಅವರ ಮೇಲೂ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಈ ವೇಳೆ ನಡೆದ ಗುಂಪು ಸಂಘರ್ಷದಲ್ಲಿ ಎಸ್‍ಪಿಯವರ ಗನ್‍ಮ್ಯಾನ್ ಸಿಲುಕಿಕೊಂಡಿದ್ದರು.
    ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ 50 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟುಗಳು ಮುಚ್ಚಿರುವುದರಿಂದ ಪ್ರದೇಶದಲ್ಲಿ ಅಘೋಷಿತ ಬಂದ್‍ನ ವಾತಾವರಣ ನಿರ್ಮಾಣವಾಗಿದೆ‌.

    ತಪ್ಪಿದ ಅನಾಹುತ:
    ಶಿವಮೊಗ್ಗ (Shimoga) ಸೂಕ್ಷ್ಮ ಪ್ರದೇಶವಾಗಿದ್ದು ಅಲ್ಲಿ ಗಲಭೆ ನಡೆಯುವ ಮುನ್ಸೂಚನೆ ಇದ್ದ ಹಿನ್ನೆಲೆಯಲ್ಲಿ ಬಿಗಿ ಬಂದೊಬಸ್ತ್ ಮಾಡಲಾಗಿತ್ತು. ಹೀಗಾಗಿ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
    ಘಟನೆ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಅಹಿತಕರ ಘಟನೆಯನ್ನು ಪೊಲೀಸರು ನಿಯಂತ್ರಿಸಿದ್ದಾರೆ. ಎರಡು ಗುಂಪುಗಳಿಂದಲೂ ತಲಾ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಘಟನೆಯ ಬಗ್ಗೆ ಹೆಚ್ಚಿನ ವಿವರಗಳಿವೆ. ಬಂಧನದ ಬಗ್ಗೆಯೂ ಮಾಹಿತಿ ಇದೆ. ಆದರೆ ಅದನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಈ ರೀತಿ ಹಂಚಿಕೊಳ್ಳಲು ಕಾನೂನಾತ್ಮಕವಾಗಿ ಅವಕಾಶವಿಲ್ಲ ಎಂದರು.

    ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಮರ್ಥರಿದ್ದಾರೆ. ಇದು ಹೊಸದೇನಲ್ಲ. ಶಿವಮೊಗ್ಗದಲ್ಲಿ ಮೊದಲಿನಿಂದಲೂ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ. ಈದ್‍ಮಿಲಾದ್ ಮೆರವಣಿಗೆ ನಡೆಯುವ ವೇಳೆ ಏನು ಬೇಕಾದರೂ ನಡೆಯಬಹುದು ಎಂಬ ಮುನ್ಸೂಚನೆ ಮೊದಲೇ ಇತ್ತು. ಹೀಗಾಗಿ ಅಗತ್ಯವಾದ ಪೊಲೀಸ್ ಬಂದೊಬಸ್ತ್ ಏರ್ಪಡಿಸಿದ್ದೆವು. ನಂತರ ಗಲಾಟೆಯನ್ನು ನಿಯಂತ್ರಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಹೇಳಿದರು.

     

    LATEST KANNADA NEWS || VARTHACHAKRA

    Police ವರ್ಗಾವಣೆ ಗೊಂದಲ ಗಲಭೆಗೆ ಕಾರಣ | Shimoga

    Verbattle
    Verbattle
    Verbattle
    #kannada art Government kannada news Karnataka lic m News NFL Police RBI shimoga Trending Varthachakra ಕಾರು
    Share. Facebook Twitter Pinterest LinkedIn Tumblr Email WhatsApp
    Previous ArticlePolice ವರ್ಗಾವಣೆ ಗೊಂದಲ ಗಲಭೆಗೆ ಕಾರಣ | Shimoga
    Next Article ಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • http://alma59xsh.is-programmer.com/posts/88273.html#comment9352103 on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.