Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy
    Viral

    ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy

    vartha chakraBy vartha chakraOctober 16, 20233 Comments2 Mins Read
    Facebook Twitter WhatsApp Pinterest LinkedIn Tumblr Email
    Sudha Murthy
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.16 – ಪರೋಪಕಾರಿ ಗುಣವನ್ನು ಹೊಂದಿರುವ ಇನ್ಫೋಸಿಸ್ ಮುಖ್ಯಸ್ಥೆ ಡಾ.ಸುಧಾಮೂರ್ತಿಯವರ (Sudha Murthy) ಹೆಸರು ಬಳಸಿ ಸುಳ್ಳು ಭರವಸೆ ನೀಡಿ ವಂಚನೆ ಮಾಡಿದ ಖತರ್ನಾಕ್ ಅರ್ಚಕನನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    ಅರ್ಚಕ‌ ಅರುಣ್ ಕುಮಾರ್ (34) ಬಂಧಿತ ಆರೋಪಿಯಾಗಿದ್ದಾನೆ. ಸುಧಾಮೂರ್ತಿ ಅವರ ಹೆಸರು ಬಳಸಿ ವಂಚನೆ ಪ್ರಕರಣ ಸಂಬಂಧ ಕೆಲ ದಿನಗಳ ಹಿಂದಷ್ಟೇ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿತ್ತು. ಅಚ್ಚರಿ ಎಂದರೆ ಈ ಎರಡೂ ಪ್ರಕರಣದ ಹಿಂದೆ ಆರೋಪಿ ಅರುಣ್ ಮಾಸ್ಟರ್ ಮೈಂಡ್ ಇದೆ ಎಂಬುವುದು ಬಯಲಾಗಿದೆ.
    ಆರೋಪಿ ಅರುಣ್ ಕುಮಾರ್, ತಾನು ಸುಧಾಮೂರ್ತಿ ಅವರ ಸಂಸ್ಥೆಯ ಸಿಬ್ಬಂದಿ ಎಂದು ಸುಳ್ಳು ಹೇಳಿ ಯುಎಸ್ಎ ನಲ್ಲಿ ನಡೆಯಲಿರುವ ಕಾರ್ಯಕ್ರಮಗಳಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದರು. ಆರೋಪಿ ಅರುಣ್ ಕುಮಾರ್ ಜನರಿಂದ 5 ಲಕ್ಷ ರೂ ವಸೂಲಿ ಮಾಡಿದ್ದಾರೆ.

    ಸುಧಾ ಮೂರ್ತಿ (Sudha Murthy) ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಸೆಪ್ಟೆಂಬರ್‌ನಲ್ಲಿ ನೀಡಿದ ದೂರಿನ ಆಧಾರದ ಮೇಲೆ ರಾಜಾಜಿನಗರದ ನಿವಾಸಿ ಅರುಣ್ ಕುಮಾರ್ ಅವರನ್ನು ಬಂಧಿಸಲಾಗಿದೆ.
    ಸುಧಾ ಮೂರ್ತಿಯವರ ಹೆಸರು ಹೇಳಿಕೊಂಡು ವಂಚನೆ ಮಾಡಲಾಗಿರುವ ಎರಡು ಪ್ರಕರಣಗಳು ಬಯಲಾಗಿವೆ. ಮೊದಲು, ಉತ್ತರ ಕ್ಯಾಲಿಫೋರ್ನಿಯಾದ ಕನ್ನಡ ಕೂಟ (ಕೆಕೆಎನ್‌ಸಿ) ತನ್ನ 50 ನೇ ವಾರ್ಷಿಕೋತ್ಸವವನ್ನು ಆಚರಿಸಲು ಕಾರ್ಯಕ್ರಮವನ್ನು ಆಯೋಜಿಸಿತ್ತು. ಹೀಗಾಗಿ ಏಪ್ರಿಲ್ 25 ರಂದು ಸುಧಾ ಮೂರ್ತಿ ಅವರಿಗೆ ಪತ್ರ ಬರೆದು ಕಾರ್ಯಕ್ರಮಕ್ಕೆ ಹಾಜರಾಗುವಂತೆ ಕೋರಿತ್ತು. ಆದರೆ, ಏಪ್ರಿಲ್ 26 ರಂದು ಸುಧಾ ಮೂರ್ತಿ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲ ವೆಂದು ಉತ್ತರಿಸಿದ್ದರು. ನಂತರ, ಸುಧಾ ಮೂರ್ತಿ ಅವರ ಸಿಬ್ಬಂದಿ ಎಂದು ಹೇಳಿಕೊಳ್ಳುವ ಮಹಿಳೆಯೊಬ್ಬರು ಕೆಕೆಎನ್‌ಸಿ ತಂಡವನ್ನು ಸಂಪರ್ಕಿಸಿ ಸುಧಾ ಮೂರ್ತಿಯವರು ಕಾರ್ಯಕ್ರಮಕ್ಕೆ ಬರುತ್ತಾರೆಂದು ಹೇಳಿ 5 ಲಕ್ಷ ರೂ. ಪಡೆದಿದ್ದರು.

    ಎರಡನೇ ಪ್ರಕರಣದಲ್ಲಿ, ಆರೋಪಿ ಅರುಣ್, ಸುಧಾಮೂರ್ತಿಯ ಸಿಬ್ಬಂದಿ ಎಂದು ಹೇಳಿ ಅಮೆರಿಕಾದ ಮಿಲ್ಪಿಟಾಸ್‌ನಲ್ಲಿನ ಸಂಸ್ಥೆಯೊಂದು ಆಯೋಜನೆ ಮಾಡಿದ್ದ ಸಮಾರಂಭಕ್ಕೆ ಸುಧಾಮೂರ್ತಿಯವರು ಬರುತ್ತಾರೆಂದು ಕೇಳಿ ಹಣ ವಸೂಲಿ ಮಾಡಿದ್ದಾನೆ. ಮೀಟ್ ಆ್ಯಂಡ್ ಗ್ರೀಟ್ ವಿಥ್ ಸುಧಾಮೂರ್ತಿ ಎಂಬ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಿ ಪ್ರತಿ ಟಿಕೆಟ್ ಅನ್ನು 40 ಡಾಲರ್​ಗೆ ಮಾರಾಟ ಮಾಡಿದ್ದಾನೆ. ಜಾಹೀರಾತಿನ ಆಧಾರದ ಮೇಲೆ ಸುಧಾ ಮೂರ್ತಿ ಅವರ ಸಿಬ್ಬಂದಿ ಈ ಬಗ್ಗೆ ತನಿಖೆ ನಡೆಸುವಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
    ತನಿಖೆ ವೇಳೆ ಅರುಣ್ ಕುಮಾರ್ ತನ್ನ ಧ್ವನಿಯನ್ನು ಮಹಿಳೆಯಂತೆ ಬದಲಾಯಿಸಿ ಸಂಪರ್ಕಿಸಿ ಹಣ ವಂಚಿಸಿದ್ದಾನೆ ಎಂದು ಬಯಲಾಗಿದ್ದು ಸುಧಾಮೂರ್ತಿಯವರ ಹೆಸರು ಬಳಸಿ ಮಾಡಲಾಗಿದ್ದ ಎರಡೂ ವಂಚನೆಗಳ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಅರುಣ್ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.
    ವಂಚನೆ ಪ್ರಕರಣದಲ್ಲಿ ಇನ್ನೆಷ್ಟು ಮಂದಿ ಶಾಮೀಲಾಗಿದ್ದಾರೆ ಎಂಬುದರ ಕುರಿತು ತನಿಖೆಯನ್ನು ಕೈಗೊಳ್ಳಲಾಗಿದೆ.

    Verbattle
    Verbattle
    Verbattle
    crime Karnataka m News Politics Sudha Murthy Trending
    Share. Facebook Twitter Pinterest LinkedIn Tumblr Email WhatsApp
    Previous Articleರಿಮೋಟ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ | Chitradurga
    Next Article ಪತಿಯ ಅಸಹಜ ನಡವಳಿಕೆ-ಠಾಣೆ ಮೆಟ್ಟಿಲೇರಿದ ಪತ್ನಿ | Bangalore News
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • LarryCax on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Ceswjs on ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ | Ashwath Narayan
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.