Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಹಿ ಸುದ್ದಿ ಕೊಟ್ಟ ಶಿವಕುಮಾರ್ | Congress
    ಸುದ್ದಿ

    ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಹಿ ಸುದ್ದಿ ಕೊಟ್ಟ ಶಿವಕುಮಾರ್ | Congress

    vartha chakraBy vartha chakraOctober 23, 202396 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.23 – ನಿಗಮ ಮಂಡಳಿಗಳಲ್ಲಿ ಅಧಿಕಾರಕ್ಕಾಗಿ ಚಾತಕ‌ ಪಕ್ಷಿಗಳಂತೆ ಕಾಯುತ್ತಿದ್ದ ಕಾಂಗ್ರೆಸ್ (Congress) ಮುಖಂಡರು ಮತ್ತು ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ.
    ಅಕ್ಟೋಬರ್ 25 ರ ನಂತರ ಮುಖ್ಯಮಂತ್ರಿ ಹಾಗೂ ಪಕ್ಷದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ‌ ನೀಡಲಾಗುವುದು ಎಂದು ಹೇಳಿದರು ಆಯುಧ ಪೂಜೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶಾಸಕರಿಗೆ, ಕಾರ್ಯಕರ್ತರಿಗೆ ಅಧಿಕಾರ ನೀಡಬೇಕು ಎನ್ನುವ ಹಂಬಲ ತೀವ್ರವಾಗಿ ನಮಗೂ ಇದೆ. ನಾನೂ ಒಬ್ಬ ಕಾರ್ಯಕರ್ತನಾಗಿ ಈ ಮಾತನ್ನು ಹೇಳುತ್ತಿದ್ದೇನೆ ಎಂದು ಹೇಳಿದರು.

    ದಸರಾ ಮುಗಿಯುತ್ತಿದ್ದಂತೆ ಈ ಸಂಬಂಧ ಸಭೆ ನಡೆಯಲಿದೆ ಇದರಲ್ಲಿ ಪಕ್ಷಕ್ಕೆ ನೂತನ ಕಾರ್ಯಾಧ್ಯಕ್ಷರ ನೇಮಕಾತಿ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
    ಈ ಸಂಬಂಧ ಈ ತಿಂಗಳ 20 ನೇ ತಾರೀಕಿನಂದು ಸಿಎಂ ಜೊತೆ ಮೊದಲ ಸುತ್ತಿನ ಮಾತುಕತೆ ನಡೆಸಬೇಕು ಎಂದು ಸಮಯ ನಿಗಧಿಯಾಗಿತ್ತು. ಆದರೆ ಆ ದಿನ ಬೇರೆ ಕೆಲಸಗಳ ನಿಮಿತ್ತ ಚರ್ಚೆ ನಡೆಯಲಿಲ್ಲ.ಈಗ ಹಬ್ಬ ಮುಗಿದ ನಂತರ ನಾವಿಬ್ಬರು ಕುಳಿತು ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು
    ದೆಹಲಿಯಿಂದ ಹೈಕಮಾಂಡಿನವರು ಬರುತ್ತಾರೆ. ನಮ್ಮ ರಾಜ್ಯದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳು ರಾಜಸ್ಥಾನ ಸೇರಿದಂತೆ ಇತರೇ ರಾಜ್ಯಗಳ ಟಿಕೆಟ್ ಹಂಚಿಕೆಯಲ್ಲಿ ಇದ್ದಾರೆ. ನಾಳೆ ಟಿಕೆಟ್ ಘೋಷಣೆ ಆಗುವ ಸಾಧ್ಯತೆಯಿದ್ದು, ಅಷ್ಟರಲ್ಲಿ ನಾವು ಸಭೆ ನಡೆಸಿ ಮಾತುಕತೆ ನಡೆಸಿರುತ್ತೇವೆ ಎಂದು ಹೇಳಿದರು ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಜನರ ಸೇವೆ ಮಾಡುವಂತಹ ಭಾಗ್ಯವನ್ನ ಕೊಟ್ಟು, ನಮ್ಮ ಮೇಲೆ ವಿಶ್ವಾಸವನ್ನಿಟ್ಟಿದ್ದಾರೆ. ಬಅಧಿಕಾರವನ್ನ ಬಹಳ ಜವಾಬ್ದಾರಿಯಿಂದ ನಿರ್ವಹಿಸಿ, ನುಡಿದಂತೆ ನಡೆದು, ಉತ್ತಮವಾದ ಆಡಳಿತ ನೀಡುತ್ತಿದ್ದೇವೆ. ರಾಜ್ಯದ ಮುಖ್ಯಮಂತ್ರಿಗಳ, ಶಾಸಕರ, ಸಂಪುಟ ಸಹೋದ್ಯೋಗಿಗಳ ಪರವಾಗಿ ನಾನು ವಿಜಯದಶಮಿಯ ದಿನ ರಾಜ್ಯದ ಜನರಿಗೆ ಉತ್ತಮ‌ ಆಡಳಿತದ ಆಶ್ವಾಸನೆ ನೀಡುತ್ತೇನೆ ಎಂದರು.

    ವಿದ್ಯುತ್ ಖರೀದಿ ಮಾಡಲು, ಈ ಬರಗಾಲದಲ್ಲಿ ವಿದ್ಯುತ್ ಅಭಾವವನ್ನ ಸೃಷ್ಟಿ ಮಾಡಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಯಾರು ಅಂತಹ ಜ್ಞಾನ ಭಂಡಾರದಿಂದ, ಅನುಭವದ ಮಾತುಗಳನ್ನು ಆಡಿಸಿದರೊ ಗೊತ್ತಿಲ್ಲ. ನಮಗೆ ಚಿಂತೆಯಿಲ್ಲ ನಮ್ಮ ಜನರನ್ನು ಕಾಪಾಡುತ್ತೇವೆ, ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಉತ್ಪಾದನೆ ನಿಲ್ಲಬಾರದು ಎಂದು ಸೂಚನೆ ನೀಡಿದ್ದು, ಮಾತು ಕೊಟ್ಟಂತೆ ವಿದ್ಯುತ್ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು
    ಈ ಮೊದಲು ಕೃಷಿ ಪಂಪ್ ಸೆಟ್ಟುಗಳಿಗೆ 6 ಗಂಟೆ ವಿದ್ಯುತ್ ನೀಡಲಾಗುತ್ತಿತ್ತು, 2013 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 7 ಗಂಟೆ ನೀಡಲು ತೀರ್ಮಾನ ಮಾಡಿತು. ಆದರೆ ನಂತರ ಸರ್ಕಾರಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡಲಿಲ್ಲ. ನಾವು ಏನೇ ತೊಂದರೆಯಾದರೂ ರೈತರಿಗೆ 5 ಗಂಟೆಗಳ ಕಾಲ ವಿದ್ಯುತ್ ನೀಡಲೇಬೇಕು ಎಂದು ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

    Congress Government Karnataka News Politics Trending ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಟಿಕೆಟ್ ವಂಚನೆಯ ಮತ್ತೊಂದು ಪ್ರಕರಣ | BJP
    Next Article ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • CharlesKer on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • JosephNoume on ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • video sex việt nam không che on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe