Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ ಶಾಸಕ
    Trending

    ಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ ಶಾಸಕ

    vartha chakraBy vartha chakraDecember 13, 202326 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.13- ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಯಾವುದೇ ಹೊಸ ಯೋಜನೆ ಜಾರಿಯಾಗುತ್ತಿಲ್ಲ. ಈಗ ಘೋಷಣೆ ಮಾಡಿರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ವಿಧಾನಸಭೆಯಲ್ಲಿಬಆಡಳಿತ ಪಕ್ಷದ ಕೆಲ ಶಾಸಕರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
    ಸ್ವಪಕ್ಷೀಯ ಶಾಸಕರ ಈ ನಡವಳಿಕೆ ಸರ್ಕಾರ ಹಾಗೂ ಸಚಿವರನ್ನು ಮುಜುಗರಕ್ಕೆ ಸಿಲುಕಿಸಿತು.
    ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು.ವಿ.ಶಿವಗಂಗಾ ಪ್ರಶ್ನೋತ್ತರ ಕಲಾಪಕ್ಕೆ ತಡವಾಗಿ ಬಂದರು. ಅಡಳಿತ ಪಕ್ಷದ ಶಾಸಕರ ಸದನಕ್ಕೆ ತಡವಾಗಿ ಬಂದಿದ್ದನ್ನು ಕಂಡ ಸಭಾಧ್ಯಕ್ಷ ಖಾದರ್ ಅವರು, ವಿಳಂಬಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.
    ಅದಕ್ಕೆ ಉತ್ತರಿಸಿದ ಬಸವರಾಜು.ವಿ.ಶಿವಗಂಗಾ ನಾನು ಬಿಳಿ ಶರ್ಟ್ ಧರಿಸಿ ಸದನಕ್ಕೆ ಬಂದಿದ್ದೆ.ಆದರೆ ಹಿಂದುಳಿದ ವರ್ಗಗಳ ಇಲಾಖೆ ನಿಷ್ಕ್ರಿಯವಾಗಿದೆ.ಎಂಬುದನ್ನು ತೋರಿಸಬೇಕು ಹಾಗೂ ಅದರ ವಿರುದ್ಧ ಪ್ರತಿಭಟನೆ ನಡೆಸುವ ಸಲುವಾಗಿ ಕಪ್ಪು ಬಣ್ಣದ ಶರ್ಟ್ ಧರಿಸಿ ಬರಲು ಹೊರಗೆ ಹೋದೆ,ಇದಕ್ಕಾಗಿ ವಿಳಂಬವಾಯಿತು ಎಂದು ಸಮಜಾಯಿಷಿ ನೀಡಿದರು.

    ಅದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷರು,ಆ ರೀತಿಯೆಲ್ಲಾ ಕಪ್ಪು ಧರಿಸುವಂತಿಲ್ಲ. ಆದರೂ ಪರವಾಗಿಲ್ಲ ನಿಮಗೆ ಕಪ್ಪು ಬಟ್ಟೆ ಚೆನ್ನಾಗಿ ಕಾಣುತ್ತಿದೆ ಎಂದರು ಇದಾದ ನಂತರ ತಮ್ಮ ಅಸಮಾಧಾನ ಹೊರಹಾಕಿದ ಬಸವರಾಜ್ ವಿ.ಶಿವಗಂಗಾ,  ಹಿಂದುಳಿದ ವರ್ಗಗಳ ಇಲಾಖೆಗೆ ಬರುವ ವಿವಿಧ ಅಭಿವೃದ್ಧಿ ನಿಗಮಗಳ ಸಾಲ ಸೌಲಭ್ಯಕ್ಕೆ ಭೌತಿಕ ಗುರಿ ಈಡೇರದೆ ಬಡವರಿಗೆ ಸೌಲಭ್ಯ ವಂಚಿತವಾಗುತ್ತಿದೆ ಎಂದು ಆರೋಪಿಸಿದರು.
    ಹಿಂದುಳಿದ ವರ್ಗಗಳ ಇಲಾಖೆಯ ಸೌಲಭ್ಯಕ್ಕೆ ಸಾವಿರಾರು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ 12, ಸ್ವಯಂ ಉದ್ಯೋಗಕ್ಕಾಗಿ 4, ಸ್ವಾವಲಂಬಿ ಸಾರಥಿ ಯೋಜನೆಯಡಿ 2ಫಲಾನುಭವಿಗಳಿಗೆ ಮಾತ್ರ ಮಂಜೂರಾತಿ ಸಿಕ್ಕಿದೆ.
    ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕಾರ್ಯದರ್ಶಿಯೊಬ್ಬರು ನಿಮ್ಮದೇ ಸರ್ಕಾರ, ಹೋಗಿ ಮುಖ್ಯಮಂತ್ರಿಯವರನ್ನೇ ಕೇಳಿ ಎಂದು ಉದ್ಧಟತನದಿಂದ ಉತ್ತರಿಸುತ್ತಾರೆ. ನಾನು ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ ಸದಸ್ಯನಾಗಿದ್ದೇನೆ. ಇಲಾಖೆ ಅಧಿಕಾರಿಗಳು ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

    ಕೋಟ್ಯಂತರ ರೂ. ಖರ್ಚು ಮಾಡಿ ಸಮಾವೇಶ ಮಾಡಲಾಗುತ್ತದೆ, ಬಡವರಿಗೆ ಸೌಲಭ್ಯ ನೀಡಲು ಹಣವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದಾಗ  ಸಭಾಧ್ಯಕ್ಷರು ಕೋಟ್ಯಂತರ ರೂ. ಖರ್ಚು ಮಾಡಿ ಶಾಸಕರಾಗಲು ಸಾಧ್ಯವಾಗಿರುವಾಗ ಬಡವರಿಗೆ ಕೊಡಲು ಹಣವಿಲ್ಲವೇ ಎಂದು ತಿರುಗೇಟು ನೀಡಿದರು.
    ಶಾಸಕ ನರೇಂದ್ರಸ್ವಾಮಿ ಕೂಡ ಇಲಾಖೆಯ ಕಾರ್ಯದರ್ಶಿ ವಿರುದ್ಧ ಆಕ್ರೋಶ ಹೊರಹಾಕಿದರು.ಆಡಳಿತ ಪಕ್ಷದ ಶಾಸಕರ ಅಸಮಾಧಾನಕ್ಕೆ ಧ್ವನಿಗೂಡಿಸಿದ ಬಿಜೆಪಿ ಶಾಸಕ ಶರಣು ಸಲಗಾರ, ಆಡಳಿತ ಪಕ್ಷದ ಶಾಸಕರೇ ಈ ಸರ್ಕಾರ ದಿವಾಳಿಯಾಗಿದೆ, ನಿಷ್ಕ್ರಿಯವಾಗಿದೆ ಎಂದು ಹೇಳುತ್ತಿದ್ದಾರೆ ಎಂದು ಕಿಚಾಯಿಸಿದರು.

    ಆಗ ಕಾಂಗ್ರೆಸ್‌ ನ ರೂಪಾ ಶಶಿಧರ್, ಶರತ್ ಬಚ್ಚೇಗೌಡ, ಕೋನರೆಡ್ಡಿ ಮತ್ತಿತರರು ಇದು ಆರು ತಿಂಗಳ ಸಮಸ್ಯೆಯಲ್ಲ,ಮೊದಲಿನಿಂದಲೂ ನಡೆದುಕೊಂಡು ಬಂದಿದೆ ಎಂದು ಸಮಜಾಯಿಷಿ ನೀಡಲು ಹೊರಟಾಗ ಸಚಿವ ಶಿವರಾಜ ತಂಗಡಗಿ , ಅರ್ಜಿ ಸಲ್ಲಿಸಿದ ಎಲ್ಲರಿಗೂ ಸೌಲಭ್ಯಗಳನ್ನು ಒದಗಿಸಬೇಕೆಂಬುದು ನಮ್ಮ ಅಭಿಲಾಷೆ ಕೂಡ. ಆದರೆ ಹಣಕಾಸಿನ ಇತಿಮಿತಿಗಳು ಅದಕ್ಕೆ ಸಹಕರಿಸುವುದಿಲ್ಲ ಲಭ್ಯತೆ ಆಧರಿಸಿ ಆದ್ಯತೆ ಮೇರೆಗೆ ಸೌಲಭ್ಯ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
    ಇದಕ್ಕೆ ಉತ್ತರಿಸಿದ ‌ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಶಾಸಕರು ಪ್ರಸ್ತಾಪಿಸಿದಂತೆ ನಮ್ಮಲ್ಲಿ ಹಾಸ್ಟೆಲ್ ವಾರ್ಡ್ ಗಳ ಕೊರತೆ ಇರುವುದು ನಿಜ. ಒಬ್ಬೊಬ್ಬರಿಗೆ ನಾಲ್ಕು-ಐದು ಹಾಸ್ಟೆಲ್ ಗಳ ಉಸ್ತುವಾರಿ ವಹಿಸಲಾಗಿದೆ. ಬೇರೆ ಇಲಾಖೆಗಳಿಂದಲೂ ಕೂಡ ಅಧಿಕಾರಿಗಳನ್ನು ಎರವಲು ಸೇವೆಯ ಮೇಲೆ ಕರೆಸಿಕೊಳ್ಳಲಾಗಿದೆ ಎಂದು ಹೇಳಿದರು.
    ಕಾರ್ಯದರ್ಶಿ ದೂರಿನ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಹಣಕಾಸು ಲಭ್ಯತೆ ಹಿನ್ನೆಲೆಯಲ್ಲಿ ಕೆಲವು ವೇಳೆ ಶಾಸಕರಿಗೆ ನೋವಾಗುವಂತಹ ಘಟನೆಗಳು ನಡೆದಿವೆ ಎಂದು ಸಚಿವರು ವಿಷಾದಿಸಿದರು.

    Congress News Politics Trending Varthachakra ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ Wife Swap ಪ್ರಕರಣ
    Next Article ಜನವರಿಯಿಂದ ಯುವನಿಧಿ ಆರಂಭ | Yuvanidhi
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • psychiatrmskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • australia cigerettes deliery on ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    • ColleenTah on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe