Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Viral

    ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa

    vartha chakraBy vartha chakraDecember 13, 20233 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ, ಡಿ.13- ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡರ ನಂತರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ  ಜ್ವಲಂತ ಸಮಸ್ಯೆಗಳ ಕುರಿತಂತೆ ಮಾತನಾಡಿದ ಬಿ.ವೈ.ವಿಜಯೇಂದ್ರ,ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (Yediyurappa) ಅವರ ಅನುಕರಣೆಯ ಮೂಲಕ ಗಮನಸೆಳೆದರು.
    ರಾಜ್ಯದಲ್ಲೂ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ 50 ವರ್ಷದಲ್ಲಿ ಕಂಡು ಕೇಳದ ಬರಗಾಲ ಬಂದಿದ್ದು ತಕ್ಷಣವೇ ರೈತರು ಜನಸಾಮಾನ್ಯರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿದ ಅವರ ಮಾತಿನ ಶೈಲಿ ಹಾಗೂ ಸರ್ಕಾರದ ವಿರುದ್ಧದ ಟೀಕೆಯಲ್ಲಿ ಯಡಿಯೂರಪ್ಪ ಅವರ ಅನುಕರಣೆ ಎದ್ದು‌ ಕಾಣುತ್ತಿತ್ತು.
    ಭಾಷಣದುದ್ದಕ್ಕೂ ಸರ್ಕಾರದ ಕಾರ್ಯವೈಖರಿ ಟೀಕಿಸುತ್ತಲೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ನೇತೃತ್ವದ ಸರ್ಕಾರ ನೀಡಿದ್ದ ಕೊಡುಗೆಗಳನ್ನು ಪ್ರಸ್ತಾಪಿಸಿದರು. ಅಂದಿನ ಸರ್ಕಾರದೊಂದಿಗೆ ಇಂದಿನ ಸರ್ಕಾರವನ್ನು ಸಮೀಕರಿಸಿ ಮಾತನಾಡಿದ ಅವರು ಯಡಿಯೂರಪ್ಪ ನೇತೃತ್ವದ ಆಡಳಿತ ಕರ್ನಾಟಕದ ಪಾಲಿಗೆ ಸುವರ್ಣಯುಗದಂತಿತ್ತು ಎಂಬ ರೀತಿಯಲ್ಲಿ ಬಣ್ಣಿಸಿದರು.

    ಭೀಕರ ಬರಗಾಲದಿಂದ ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಎಳೆ ಏಳೆಯಾಗಿ ಬಿಚ್ಚಿಡುತ್ತಾ ಬರದಿಂದ ತತ್ತರಿಸಿರುವ ರೈತರು ಸರ್ಕಾರದತ್ತ ಮುಖ ಮಾಡಿ ನೆರವಿಗಾಗಿ ಎದುರು ನೋಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಅನುಭವಿ ನಾಯಕರಲ್ಲಿ ಒಬ್ಬರಾಗಿದ್ದು ಎಸ್ ಎಂ ಕೃಷ್ಣ ನಂತರ ಒಂದು ಪೂರ್ಣಾವಧಿಗೆ ರಾಜ್ಯವನ್ನು ನಡೆಸಿದವರು ಮತ್ತು ಇದುವರೆಗೆ ದಾಖಲೆಯ 14 ಬಜೆಟ್ ಗಳನ್ನು ಮಂಡಿಸಿರುವ ಹೆಗ್ಗಳಿಕೆಯುಳ್ಳವರಾಗಿದ್ದು ರೈತರ ಸಂಕಷ್ಟ ಅರಿಯಬೇಕಿತ್ತು.ಆದರೆ ಹೀಗಾಗಲಿಲ್ಲ ಎಂದು ವಿಷಾದಿಸಿದರು.
    ಈ ವೇಳೆ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಸದನದಲ್ಲಿ ಬರಗಾಲ ಬಗ್ಗೆ ಚರ್ಚೆ ನಡೆಸಲು ಮುಂದಾದರೆ ಸರ್ಕಾರ ಅದಕ್ಕೆ ಸಿದ್ಧವಿದೆ ಎಂದು ಹೇಳಿದರು.ಇದನ್ನು ಸ್ವಾಗತಿಸಿ ಮಾತನಾಡಿದ ವಿಜಯೇಂದ್ರ ರೈತರು ಸಾಕಷ್ಟು ನಿರೀಕ್ಷೆಯಲ್ಲಿದ್ದು, ಅವರ ನೆರವಿನ ನಿರೀಕ್ಷೆಯನ್ನು ಹುಸಿ ಮಾಡಬೇಡಿ ಎಂದು ಹೇಳಿದರು.

    ಹಿಂದಿನ ಮುಖ್ಯಮಂತ್ರಿ ರೈತ ನಾಯಕ ಯಡಿಯೂರಪ್ಪ ನವರು ಉತ್ತರ ಕರ್ನಾಟಕ ಭಾಗದಲ್ಲಿ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಚರ್ಚೆ ಅಭಿವೃದ್ಧಿಯು ಕಾಲಮಿತಿಯಲ್ಲಿ ನಡೆಯಬೇಕು ಎನ್ನುವ ಉದ್ದೇಶ ದಿಂದ ಸುವರ್ಣ ಸೌಧವನ್ನು ನಿರ್ಮಾಣ ಮಾಡಿದ್ದಾರೆ.ಅದರ ಸದುಪಯೋಗವಾಗಬೇಕಿದೆ ಎಂದರು.
    ರಾಜ್ಯದಲ್ಲಿ ಸುಮಾರು 60 ರಿಂದ 80 ಮೆಟ್ರಿಕ್ ಟನ್ ಭತ್ತ, 40 ರಿಂದ 5೦ ಮೆಟ್ರಿಕ್ ಟನ್ ಜೋಳ,10 ಲಕ್ಷ ಮೆಟ್ರಿಕ್ ಟನ್ ತೊಗರಿ, ಕಬ್ಬು,ದ್ರಾಕ್ಷಿ ಬೆಳೆಯುವ ರೈತರಿದ್ದಾರೆ. ಎಲ್ಲವು ಬರಗಾದಿಂದ ಸಂಪೂರ್ಣವಾಗಿ ಬೆಲೆ ನಾಶವಾಗಿದೆ. ವಿದ್ಯುತ್ ಅಭಾವದಿಂದ ಬೋರ್ ವೆಲ್ ನೀರು ಹರಿಸಲಾಗದೆ ತೊಂದರೆಗೆ ಸಿಲುಕಿದ್ದಾರೆ ಎಂದು ಗಮನ ಸೆಳೆದರು.
    ರಾಜ್ಯದ ಜನತೆ ಹೊಸ ಸರ್ಕಾರದ ಮೇಲೆ ಸಾಕಷ್ಟು ಭರವಸೆ ಇಟ್ಟಿದ್ದರು ಸರ್ಕಾರ ರೈತರ ಸಾಲ ಮನ್ನಾ ಮಾಡಲಿದೆ, ಸಾಲ ವಸೂಲಾತಿಗೆ ತಡೆ ನೀಡಿ ಹೊಸ ಸಾಲ ನೀಡಲಿದೆ ಎಂಬ ನಿರೀಕ್ಷೆ ಇತ್ತು ಆದರೆ ಎಲ್ಲವೂ ಹುಸಿಯಾಗಿದೆ ಎಂದು ಆಪಾದಿಸಿದರು.

    BJP ED Government Karnataka News Politics Trending yediyurappa ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach
    Next Article ಸಂಸತ್ ಮೇಲೆ ದಾಳಿಗೆ ಮೈಸೂರಿನಲ್ಲಿ ಸ್ಕೆಚ್ | Lok Sabha Security Breach
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    3 Comments

    1. https://muzkartalygb.ru/allergiya-v-detskom-sadu.html on November 19, 2025 2:12 pm

      Особенно можно применять фонофорез при проблемах с суставами, так,
      чтобы процедура усиливает кровообращение, как
      следствие, в тканях.

      Here is my webpage: https://muzkartalygb.ru/allergiya-v-detskom-sadu.html

      Reply
    2. XRumer23tow on November 19, 2025 3:07 pm

      Putting my first-hand opinion on that gaming site. I outline casino promos, financial side, and total experience. Discussing mostly promotions and processing time. Explaining how the gameplay responds and sends money. Highlighting main takeaways I’ve noticed. Writing about what I enjoyed and what didn’t impress me. You can learn more by checking out the full article Crowngreen

      Reply
    3. http://ev-gateway.com/ on November 19, 2025 4:11 pm

      Greate pieces. Keep posting such kind of information on your page.

      Im really impressed by your site.
      Hello there, You’ve performed an incredible job.
      I will certainly digg it and in my opinion recommend to my friends.
      I am confident they’ll be benefited from this site.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • read here on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BThomasobjelo on ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • psychiatrmskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe