Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಧನ ಮಂತ್ರಿ ಜಾರ್ಜ್ ಅವರ ಕಾಳಜಿ-ಬೆಳಕು ಕಂಡ ಗಡಿಗ್ರಾಮ | KG George
    Viral

    ಇಂಧನ ಮಂತ್ರಿ ಜಾರ್ಜ್ ಅವರ ಕಾಳಜಿ-ಬೆಳಕು ಕಂಡ ಗಡಿಗ್ರಾಮ | KG George

    vartha chakraBy vartha chakraDecember 14, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ನೆರೆಯ ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿರುವ ಬೆಳಗಾವಿ ಜಿಲ್ಲೆಯ ಕುಗ್ರಾಮ ದಾಮನೆ ಎಸ್ ಬೈಲೂರು ಗ್ರಾಮದ ದನಗರವಾಡಿ ವಸತಿ ಪ್ರದೇಶ ಕಗ್ಗತ್ತಲೆಯಿಂದ ಕೂಡಿತ್ತು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಮಯದಲ್ಲೂ‌ ಈ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ಇರಲಿಲ್ಲ.
    ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ವಿಶೇಷ ಕಾಳಜಿಯ ಪರಿಣಾಮವಾಗಿ ‌ಈ ಕುಗ್ರಾಮ ಬೆಳಕು ಕಂಡಿದೆ.ಈ ಗ್ರಾಮಕ್ಕೆ ಇದೇ ಮೊದಲ ಬಾರಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ.

    ಈಬಕ್ಷೇತ್ರದ ಶಾಸಕರೂ ಆಗಿರುವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗಡಿ ಗ್ರಾಮದ ದುಸ್ಥಿತಿಯ ಬಗ್ಗೆ ಸಚಿವ ಜಾರ್ಜ್ ಅವರ ಗಮನ ಸೆಳೆದರು.
    ಜಾರ್ಜ್ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳ ಸಭೆ ನಡೆಸಿ,ಸಮರೋಪಾದಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದರು. ಈ ಪ್ರಯತ್ನದ ಫಲವಾಗಿ ಗ್ರಾಮಕ್ಕೆ ಸೌರ ಹಾಗೂ ಪವನ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಗುರುವಾರ ಇಂದನ ಸಚಿವ ಕೆ.ಜೆ.ಜಾರ್ಜ್ ಅವರು ಗ್ರಾಮಕ್ಕೆ ತೆರಳಿ ವಿದ್ಯುತ್ ಸೌಲಭ್ಯಕ್ಕೆ ಚಾಲನೆ ನೀಡುವ ಮೂಲಕ ಗ್ರಾಮದ ಜನರ ಮೊಗದಲ್ಲಿ ಮಂದಹಾಸ ಮೂಡಿಸಿದರು.

    ಸ್ವಾತಂತ್ರ ಸಿಕ್ಕಿ ಇಷ್ಟು ವರ್ಷಗಳಾದರೂ ಈ ಗ್ರಾಮಕ್ಕೆ ವಿದ್ಯುತ್ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳಕರ್ ಗಮನಕ್ಕೆ ತಂದರು. ತಕ್ಷಣ ನಮ್ಮ ಅಧಿಕಾರಿಗಳೊಂದಿಗೆ ಚರ್ಚಿಸಿ, ನಮಗೆ ಸಿಕ್ಕಿರುವ ಅವಕಾಶದಿಂದ ಗ್ರಾಮದ ಸೇವೆ ಮಾಡಬೇಕೆಂದು ನಿರ್ಧರಿಸಿ ಕ್ರಮ ತೆಗೆದುಕೊಂಡಿದ್ದೇವೆ. ದೊಡ್ಡ ದೊಡ್ಡ ಕೆಲಸವನ್ನು ಎಲ್ಲರೂ ಮಾಡಬಹುದು. ಆದರೆ ಇಲ್ಲಿನ ಜನ ಕಷ್ಟದಲ್ಲಿದ್ದಾರೆ. ಈ ಒಂದು ಸಣ್ಣ ಕೆಲಸದಿಂದ ಜನರ ಮುಖದಲ್ಲಿ ನಗು ನೋಡಬಹುದು ಎನ್ನುವ ಕಾರಣಕ್ಕಾಗಿ ಈ ಯೋಜನೆ ರೂಪಿಸಲಾಯಿತು ಎಂದು ಜಾರ್ಜ್ ಈ ಸಂದರ್ಭದಲ್ಲಿ ತಿಳಿಸಿದರು.
    ಇದರ ಜೊತೆಗೆ, ಶಾಶ್ವತವಾಗಿ ಗ್ರಾಮಕ್ಕೆ ವಿದ್ಯುತ್ ಕಲ್ಪಿಸುವ ಕೆಲಸವನ್ನೂ ಆದಷ್ಟು ಶೀಘ್ರವಾಗಿ ಮಾಡಲಾಗುವುದು. ಅರಣ್ಯ ಇಲಾಖೆಯಿಂದ ಅನುಮತಿ ಪಡೆದು ಲೈನ್ ಹಾಕಿ ನಿರಂತರ ವಿದ್ಯುತ್ ನೀಡುವ ಕೆಲಸ ಮಾಡಲಾಗುವುದು ಎಂದೂ ಸಚಿವರು ಭರವಸೆ ನೀಡಿದರು.


    ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚುನಾವಣೆಗೂ ಪೂರ್ವ ನಾನು ಗ್ರಾಮ ಜನರಿಗೆ ಭರವಸೆ ನೀಡಿದ್ದೆ. ಅದರಂತೆ ಎಷ್ಟೇ ಕಷ್ಟವಾದರೂ ಬಿಡದೆ ಗರಾಮಕ್ಕೆ ಬೆಳಕು ನೀಡುವ ಕೆಲಸ ಮಾಡಿದ್ದೇನೆ. ನಿಮ್ಮ ಮುಖದಲ್ಲಿ ನಗು ಕಂಡರೆ ನನಗೆ ಅದಕ್ಕಿಂತ ಖುಷಿಯ ವಿಚಾರ ಬೇರೆ ಇಲ್ಲ ಎಂದರು.
    ಇಲ್ಲಿನ ಜನರು ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಳೆಸಿದ್ದಾರೆ. ಹಾಗಾಗಿ ಜನರ ಪ್ರತಿಯೊಂದು ಕೆಲಸವನ್ನೂ ಕಾಳಜಿಯಿಂದ ಮಾಡುತ್ತಿದ್ದೇನೆ. ಇಲ್ಲಿನ ಜನರ ಸೇವೆ ಮಾಡುವುದನ್ನು ನೋಡಿ ಪಕ್ಕದ ಮಹಾರಾಷ್ಟ್ರದ ಜನರೂ ನಮಗೂ ಇಂತಹ ಶಾಸಕರು ಇರಬೇಕು ಎನ್ನುತ್ತಿದ್ದಾರೆ. ಜನರ ಸಹಕಾರಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದರು.
    ನನ್ನ ಬೇಡಿಕೆಗೆ ಸ್ಪಂದಿಸಿ ಇಲ್ಲಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಿದ ಹಿರಿಯ ಸಚಿವರಾದ ಕೆ.ಜೆ.ಜಾರ್ಜ್ ಮತ್ತು ಎಲ್ಲ ಅಧಿಕಾರಿಗಳಿಗೆ ಗ್ರಾಮದ ಜನರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದೂ ಹೆಬ್ಬಾಳಕರ್ ತಿಳಿಸಿದರು.
    ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹ್ಮದ್ ರೋಷನ್, ಮುಖ್ಯ ಎಂಜಿನಿಯರ್ ಪ್ರಕಾಶ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಇದ್ದರು.

    Verbattle
    Verbattle
    Verbattle
    Government kj george News Politics Trending Varthachakra Election ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆ ವಿವಸ್ತ್ರ ಪ್ರಕರಣ: ಹೈಕೋರ್ಟ್ ಕೆಂಡಾಮಂಡಲ | Belagavi
    Next Article ರಾಜ್ಯದಲ್ಲಿ ಮುಂದಿನ ವರ್ಷವೂ ಬರ | Drought
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    1 Comment

    1. Btglwo on February 11, 2026 11:46 pm

      mgm grand online betting betmgm-play betmgm New Mexico

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Gnkcju on ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    • Mcxyri on ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.