Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಸವಾಲು
    ಪ್ರಚಲಿತ

    ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಸವಾಲು

    vartha chakraBy vartha chakraJanuary 30, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಜ.30 :
    ರಾಜಕೀಯ ಕಾರಣಗಳಿಗಾಗಿ ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಶೋಷಿತರ ಬಗ್ಗೆ ಕಾಳಜಿಯಿದ್ದಲ್ಲಿ ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ಎ ಮೀಸಲು ವ್ಯಾಪ್ತಿಯಲ್ಲಿ ಸುಮಾರು 108 ಉಪ ಜಾತಿಗಳು ಇವೆ. ಆದರೆ,ಇದರಲ್ಲಿ ಮೀಸಲಾತಿ ಸೌಲಭ್ಯದ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ, ಆಮೇಲೆ ಕಾಂತರಾಜು ವರದಿ, ಇನ್ನೊಂದು ವರದಿಯ ಬಗ್ಗೆ ಮಾತನಾಡಿ ಎಂದು ಆಗ್ರಹಿಸಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂತರಾಜು ವರದಿ ಹಿಡಿದುಕೊಂಡು ಪ್ರತಿದಿನ ಭಾಷಣ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ಬೊಮ್ಮಾಯಿ, ಯಡಿಯೂರಪ್ಪ ಈ ವರದಿಯನ್ನು ಸ್ವೀಕಾರ ಮಾಡಲಿಲ್ಲ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈಗ ನೀವು ಅಧಿಕಾರಕ್ಕೆ ಬಂದು ಒಂದು ವರ್ಷ ಆಯಿತು. ಯಾಕೆ ಆ ವರದಿಯನ್ನು ಸ್ವೀಕಾರ ಮಾಡಿ ಜಾರಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.
    ಕಾಂಗ್ರೆಸ್ ಸರ್ಕಾರಕ್ಕೆ ಪೂರ್ಣ ಬಹುಮತವಿದೆ. ಹೀಗಿರುವಾಗ ಕಾಂತರಾಜು ವರದಿ ಸ್ವೀಕರಿಸಲು ಯಾರು ಅಡ್ಡ ಇದಾರೆ. ನಿಮಗೆ ತಾಕತ್ತು ಇದ್ದರೆ ಆ ವರದಿ ಸ್ವೀಕರಿಸಿ ಜಾರಿ ಮಾಡಿ ಎಂದು ಸವಾಲು ಹಾಕಿದರು.
    ಒಬ್ಬ ಕುರಿ ಕಾಯುವವನ ಮಗ ಸಿಎಂ ಆದ ಅಂತಾ ನನ್ನ ಮೇಲೆ ವಿಷ ಕಾರ್ತಾರೆ ಅಂತ ಅಳಲು ತೋಡಿಕೊಂಡಿದ್ದಾರೆ. ಕುರಿ ಕಾಯುವ ಮಗನನ್ನೇ ಅಂದು ದೇವೇಗೌಡರು ಆರ್ಥಿಕ ಸಚಿವರನ್ನಾಗಿ ಮಾಡಿದ್ದರು. ನಿಮ್ಮ ಇಷ್ಟು ವರ್ಷದ ರಾಜಕೀಯದಲ್ಲಿ ಎಷ್ಟು ಸಲ ಸಚಿವರಾದಿರಿ, ಮುಖ್ಯಮಂತ್ರಿ ಆದಿರಿ, ಉಪ ಮುಖ್ಯಮಂತ್ರಿ ಆದಿರಿ. ಜಾತಿವ್ಯವಸ್ಥೆ, ಶೋಷಣೆ ಅಂತ್ಯ ಮಾಡಲು ಅವಕಾಶ ಇತ್ತು ನಿಮಗೆ, ಯಾಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.
    ಸಮಾಜವನ್ನು ಒಡೆಯುವ ರಾಜಕಾರಣ ನಿಲ್ಲಿಸಿ. ಎಷ್ಟು ದಿನ ಅಧಿಕಾರದಲ್ಲಿ ಇರ್ತೀರಾ? ಕದ್ದುಮುಚ್ಚಿ ನಿಮ್ಮ ಹಾಗೆ ರಾಜಕೀಯ ಮಾಡೋನಲ್ಲ ನಾನು. ನೇರವಾಗಿಯೇ ನಾನು ಬಿಜೆಪಿ ಜತೆ ಕೈ ಜೋಡಿಸಿದ್ದೇನೆ. ನಿಮ್ಮ ಹಾಗೆ ಹೊಂದಾಣಿಕೆ ರಾಜಕಾರಣ ಮಾಡಲ್ಲ ನಾನು. ಜನಪರ ತೀರ್ಮಾನಗಳು ಇದ್ದರೆ ನಾವು ಕೂಡ ಬೆಂಬಲ ಕೊಡುತ್ತೇವೆ. ಕಮೀಷನ್ ಹೊಡೆಯುವುದು ನಿಲ್ಲಿಸಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.
    ಕುಡಿಯುವ ನೀರಿನ ಜಾಗಕ್ಕೆ ಹಸುವನ್ನು ಬಿಟ್ಟರೆ ಅದು ನೀರನ್ನೂ ಕುಡಿದು ಅದನ್ನು ಕಲಕದೇ ಹೋಗುತ್ತದೆ. ಆದರೆ, ಅದೇ ಜಾಗಕ್ಕೆ ಕೋಣವನ್ನು ಬಿಟ್ಟರೆ ನೀರನ್ನು ಕುಡಿದು ಬೇರೆ ಯಾರೂ ಕುಡಿಯದ ರೀತಿ ಆ ನೀರನ್ನು ರಾಡಿ ಎಬ್ಬಿಸಿ ಹೋಗುತ್ತದೆ. ಕಾಂಗ್ರೆಸ್ ಕೋಣದ ರೀತಿ ಎಂದು ಲೇವಡಿ ಮಾಡಿದರು.
    ಈಗ ಎಲ್ಲರೂ ಕಾಂಗ್ರೆಸ್ ಬಿಟ್ಟು ಹೋಗುತ್ತಿದ್ದಾರೆ. ನಿತೀಶ್ ಆಯಿತು, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಯಾರಿಗೂ ಆ ಪಕ್ಷದ ಸಹವಾಸ ಬೇಡವಾಗಿದೆ. ಇವರ ನಡವಳಿಕೆ ನೋಡಿ ಎಲ್ಲರೂ ಬೇಸತ್ತು ಒಬ್ಬೊಬ್ಬರಾಗಿ ಹೋಗ್ತಾ ಇದಾರೆ ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಬೊಮ್ಮಾಯಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿರುದ್ಯೋಗಿಗಳಿಂದ ಪೀಕಿದ್ದು158 ಕೋಟಿ | Fraud
    Next Article ರಾಜ್ಯಸಭೆಗೆ ಸೋನಿಯಾ ಗಾಂಧಿ | Sonia Gandhi
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    1 Comment

    1. Bqmnov on February 13, 2026 2:00 pm

      betmgm IA online casino betmgm play betmgm Delaware

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Everetttup on ವಿಮಾನದಲ್ಲಿ ಬೀಡಿ‌ ಸೇದಿದ‌ ಆಸಾಮಿ | Indigo
    • LinwoodGah on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • https://cse.google.com.bn/url?q=http://booicazzino.com/ on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.