Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಲುವ ಭೀತಿ- ಕೇಂದ್ರ ಮಂತ್ರಿ ರಾಜಕೀಯ ನಿವೃತ್ತಿ? | Chitradurga
    Trending

    ಸೋಲುವ ಭೀತಿ- ಕೇಂದ್ರ ಮಂತ್ರಿ ರಾಜಕೀಯ ನಿವೃತ್ತಿ? | Chitradurga

    vartha chakraBy vartha chakraJanuary 31, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.31: ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿವೆ.
    ಬಹುತೇಕ ಹಾಲಿ ಸಂಸದರು ಮರು ಆಯ್ಕೆ ಬಯಸಿದ್ದು ಪಕ್ಷದ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಸೋಲುವ ಭೀತಿಯಿಂದ ಕೇಂದ್ರ ಮಂತ್ರಿಯೊಬ್ಬರು ಸಕ್ರಿಯ ರಾಜಕಾರಣದಿಂದ ದೂರ ಸರಿಯಲು ತೀರ್ಮಾನಿಸಿದ್ದಾರೆ ಎಂದು ಗೊತ್ತಾಗಿದೆ.

    ಚಿತ್ರದುರ್ಗ (Chitradurga) ಮೀಸಲು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ ನಾರಾಯಣಸ್ವಾಮಿ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಸಕ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಇವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಿ ಕೆಲಸ ಮಾಡಲು ಅವಕಾಶ ನೀಡಲಾಗಿತ್ತು. ಅದರಂತೆ ಇಲಾಖೆಯಲ್ಲಿ ಅತ್ಯುತ್ತಮ ಕೆಲಸ ಮಾಡುವ ಮೂಲಕ ಕ್ರಿಯಾಶೀಲ ಮಂತ್ರಿ ಎಂದೆ ಖ್ಯಾತಿ ಪಡೆದಿದ್ದರು.
    ಇವರ ಕಾರ್ಯಶೀಲತೆಯನ್ನು ಮೆಚ್ಚಿದ ನಾಯಕತ್ವ ಇವರಿಗೆ ರಾಜ್ಯ ಬಿಜೆಪಿಯ ನಾಯಕತ್ವದ ಪಟ್ಟ ಕಟ್ಟಲು ಚಿಂತನೆ ನಡೆಸಿತ್ತು. ಆದರೆ, ಜಾತಿವಾರು ಲೆಕ್ಕಾಚಾರ ಮಾಡಿದ ಹೈಕಮಾಂಡ್ ಈ ಪ್ರಸ್ತಾಪ ಕೈಬಿಟ್ಟಿತ್ತು.
    ಹೈಕಮಾಂಡ್ ವಿಶ್ವಾಸಗಳಿಸಿದ ನಾರಾಯಣಸ್ವಾಮಿ ಕ್ಷೇತ್ರದಲ್ಲಿ ಮಾತ್ರ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣರಾಗಿದ್ದಾರೆ ಎನ್ನಲಾಗಿದೆ.

    ಬೆಂಗಳೂರು ಹೊರವಲಯದ ಆನೇಕಲ್ ನಿವಾಸಿಯಾದ ನಾರಾಯಣಸ್ವಾಮಿ ಅವರಿಗೆ ಚಿತ್ರದುರ್ಗದ ಜೊತೆ ಸಂಪರ್ಕ ಕಡಿಮೆ. ಹೀಗಿದ್ದರೂ ಹೈಕಮಾಂಡ್ ಹಲವಾರು ಲೆಕ್ಕಾಚಾರ ಮಾಡಿ ಚಿತ್ರದುರ್ಗ ಕ್ಷೇತ್ರದಿಂದ ಕಣಕ್ಕಿಳಿಸಿತು.ಬಿಜೆಪಿ ಅಭ್ಯರ್ಥಿ ಎಂಬ ಕಾರಣಕ್ಕೆ ಎಲ್ಲಾ ರೀತಿಯ ಶ್ರಮಹಾಕಿ ಅವರನ್ನು ಗೆಲ್ಲಿಸಲಾಯಿತು.ಆದರೆ ಗೆದ್ದ ನಂತರ ಅವರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಯ ಕಡೆ ಗಮನ ಕೊಡಲಿಲ್ಲ ಎಂದು ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
    ಅದರಲ್ಲೂ ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕೇಂದ್ರ ಮಂತ್ರಿಯಾಗಿ ನಾರಾಯಣಸ್ವಾಮಿ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಯಾವುದೇ ಪ್ರಯತ್ನ ನಡೆಸಲಿಲ್ಲ ಎಂದು ಸೋತ ಅಭ್ಯರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ. ಪ್ರಮುಖವಾಗಿ ಜಿಲ್ಲೆಯಲ್ಲಿ ಗೆದ್ದಿರುವ ಏಕೈಕ ಅಭ್ಯರ್ಥಿ ಹೊಳಲ್ಕೆರೆ ಚಂದ್ರಪ್ಪ ಸೋತಿರುವ ತಿಪ್ಪಾರೆಡ್ಡಿ,ತಿಪ್ಪೇಸ್ವಾಮಿ, ರಾಜೇಶ್ ಗೌಡ ಗೂಳಿಹಟ್ಟಿ ಶೇಖರ್ ಸೇರಿದಂತೆ ಹಲವರು ನಾರಾಯಣಸ್ವಾಮಿ ನಾಯಕತ್ವದ ವಿರುದ್ಧ ಸಿಡಿದೆದಿದ್ದಾರೆ ಎಂದು ಗೊತ್ತಾಗಿದೆ.

    ಕ್ಷೇತ್ರದಲ್ಲಿ ಇವರ ಸಮುದಾಯಕ್ಕೆ ಸೇರಿದ ಮತದಾರರ ಪ್ರಮಾಣ ಗಣನೀಯ ಸಂಖ್ಯೆಯಲ್ಲಿದ್ದರೂ,ಚುನಾವಣೆ ಸಮಯದಲ್ಲಿ ಈ ಮತಗಳನ್ನು ಬಿಜೆಪಿಗೆ ಸೆಳೆಯಲು ಯಾವುದೇ ಪ್ರಯತ್ನ ಮಾಡಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
    ಪಕ್ಷದ ವರಿಷ್ಠರಿಗೆ ಯಾವುದೇ ಕಾರಣಕ್ಕೂ ಈ ಬಾರಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಕೊಡಬೇಡಿ ಮತ್ತೆ ಅವರು ಕಣಕ್ಕಿಳಿದಿದ್ದೆ ಆದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದು ಪಕ್ಷದ ನಾಯಕತ್ವ ಅಭ್ಯರ್ಥಿ ಬದಲಾವಣೆಯಚಿಂತನೆ ಆರಂಭಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಒಂದು ವೇಳೆ ಪಕ್ಷ ಟಿಕೆಟ್ ನಿರಾಕರಿಸಿದರೆ ಅನಗತ್ಯವಾಗಿ ಮುಜುಗರಕ್ಕೀಡಾಗಬಹುದು ಎಂದು ಭಾವಿಸಿರುವ ನಾರಾಯಣಸ್ವಾಮಿ ಇದೀಗ ಚುನಾವಣೆ ರಾಜಕಾರಣದಿಂದ ನಿವೃತ್ತಿಯಾಗುವ ಚಿಂತನೆ ಆರಂಭಿಸಿದ್ದಾರೆ ಈ ಕುರಿತಂತೆ ತಮ್ಮ ಬೆಂಬಲಿಗರು ಮತ್ತು ಆಪ್ತರೊಂದಿಗೆ ಸಮಾಲೋಚನೆ ನಡೆಸಿರುವ ಅವರು ಸದ್ಯದಲ್ಲೇ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Election ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಹುಲ್ಲು ತಿಂದು ಕೊಳಚೆ ನೀರು ಕುಡಿದು ಬದುಕುತ್ತಿರುವ ಪೆಲೆಸ್ತೀನಿಯರು | Palestine
    Next Article ಮಾಡಬಾರದ್ದನ್ನು ಮಾಡಿ ತಗಲಾಕ್ಕೊಂಡ | RPC Layout
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    2 Comments

    1. Kouqob on February 11, 2026 5:01 pm

      mgm sportsbook promos betmgm-play mgm bet promo

      Reply
    2. Ytusvq on February 19, 2026 6:28 am

      Savor the essence of casino elegance online. crown coins login offers high-definition streams for immersive experiences. Elegance meets excitement here!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LeonardReawn on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.