Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಓಲಾ,ಊಬರ್ ಸೇರಿ ಎಲ್ಲಾ ಟ್ಯಾಕ್ಸಿಗಳಿಗೆ ಏಕರೂಪ ಶುಲ್ಕ | Cab Fares
    Trending

    ಓಲಾ,ಊಬರ್ ಸೇರಿ ಎಲ್ಲಾ ಟ್ಯಾಕ್ಸಿಗಳಿಗೆ ಏಕರೂಪ ಶುಲ್ಕ | Cab Fares

    vartha chakraBy vartha chakraFebruary 5, 202424 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಓಲಾ,ಊಬರ್ ಸೇರಿದಂತೆ ಎಲ್ಲಾ ಆ್ಯಪ್ ಆಧಾರಿತ ಟ್ಯಾಕ್ಸಿಗಳು ಮತ್ತು ರೇಡಿಯೋ ಟ್ಯಾಕ್ಸಿಗಳು ಹವಮಾನದ ವ್ಯತ್ಯಾಸ ಮತ್ತು ದಟ್ಟಣೆ ಹೆಸರಲ್ಲಿ ಪ್ರಯಾಣ ದರ ಏರಿಕೆ, ಇಳಿಕೆ ಮಾಡುವುದಾಗಿ ಹೇಳುತ್ತಾ ಜನ ಸಾಮಾನ್ಯರಿಗೆ ಹೊರೆ ಹಾಕುವ ಕುರಿತಂತೆ ಪುಂಖಾನುಪುಂಖವಾಗಿ ಕೇಳಿ ಬರುತ್ತಿದ್ದ ದೂರುಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ.

    ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ವಿಶೇಷ ಸೂಚನೆ ಮೇರೆಗೆ ಸಾರಿಗೆ ಇಲಾಖೆ ಇದೀಗ
    ಸಿಟಿ ಟ್ಯಾಕ್ಸಿಗಳು ಮತ್ತು ಆ್ಯಪ್‌ ಆಧಾರಿತ ಟ್ಯಾಕ್ಸಿಗಳು ಹವಮಾನದ ವ್ಯತ್ಯಾಸ ಮತ್ತು ಜನದಟ್ಟಣೆಗೆ ಅನುಗುಣವಾಗಿ ಪ್ರಯಾಣ ದರ ಏರಿಕೆ, ಇಳಿಕೆ ಮಾಡುತ್ತಿರುವುದನ್ನು ತಪ್ಪಿಸಲು ಏಕರೂಪದ ದರ ನಿಗದಿಪಡಿಸಿ ಹೊರಡಿಸಿದೆ.

    ಓಲಾ, ಉಬರ್‌ ಸಹಿತ ಎಲ್ಲ ಟ್ಯಾಕ್ಸಿಗಳಿಗೆ ಈ ನಿಯಮ ಅನ್ವಯ ಆಗಲಿದೆ.ಟ್ಯಾಕ್ಸಿ ಬಳಕೆದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಮಳೆ ಬಂದಾಗ ದರ ಹೆಚ್ಚಳ ಮಾಡುವುದು, ಜನರು ಕಚೇರಿಗೆ, ಕೆಲಸಕ್ಕೆ ತೆರಳುವ ಸಮಯದಲ್ಲಿ ದಟ್ಟಣೆ ಹೆಸರಲ್ಲಿ
    ದರ ಹೆಚ್ಚಿಸುವುದು ಮಾಮೂಲಾಗಿತ್ತು.ಇದರ ವಿರುದ್ಧ ಪ್ರಯಾಣಿಕರು ಸಾಕಷ್ಟು ಬಾರಿ ದೂರು ನೀಡಿದ್ದರು.

    ಇದನ್ನು ತಪ್ಪಿಸಲು ಸಚಿವ ರಾಮಲಿಂಗಾರೆಡ್ಡಿ ಅವರು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ನಿರ್ದೇಶನದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಅಧಿಕಾರಿಗಳು,ಹಲವಾರು ಸುತ್ತಿನಲ್ಲಿ ಸಭೆ ನಡೆಸಿ‌ ಈ ಆದೇಶ ಹೊರಡಿಸಿದ್ದಾರೆ.
    ಇಲ್ಲಿವರೆಗೆ ಸಿಟಿ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಅಗ್ರಿಗೇಟರ್‌ ಟ್ಯಾಕ್ಸಿಗಳ ದರ ಬೇರೆ ಬೇರೆಯಾಗಿದ್ದವು. ಈಗ ಹೊರಡಿಸಿರುವ ಅಧಿಸೂಚನೆ ಪ್ರಕಾರ ದರಗಳನ್ನು ಒಂದೇ ಮಾದರಿಯಲ್ಲಿ ನಿಗದಿಪಡಿಸಲಾಗಿದೆ. ಏಕರೂಪ ಮತ್ತು ಪರಿಷ್ಕೃತ ದರಗಳು ಬೆಂಗಳೂರು ನಗರ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗಲಿವೆ.

    ಸದ್ಯ ಜಾರಿಗೊಂಡಿರುವ ಆದೇಶದಲ್ಲಿ ವಾಹನಗಳ ಮೌಲ್ಯಗಳನ್ನು ಆಧರಿಸಿ ಮೂರು ವಿಭಾಗಗಳನ್ನಾಗಿ ಮಾಡಲಾಗಿದೆ. ಈ ವಿಭಾಗಗಳಿಗೆ ನಿಗದಿತ ದರ ನಿಗದಿ ಮಾಡಲಾಗಿದೆ. ವೈಯಕ್ತಿಕ ಲಗೇಜ್‌ ದರವು 120 ಕೆ.ಜಿ. ವರೆಗೆ ಉಚಿತವಾಗಿದೆ. ನಂತರದ ಪ್ರತಿ 30 ಕಿಲೋ ಗ್ರಾಂ ವರೆಗೆ 7ರೂಪಾಯಿ ನಿಗದಿ ಮಾಡಲಾಗಿದೆ.
    ಕಾಯುವಿಕೆ ದರವು ಮೊದಲ 5 ನಿಮಿಷಗಳವರೆಗೆ ಉಚಿತವಾಗಿದ್ದು, ಬಳಿಕದ ಪ್ರತಿ ನಿಮಿಷಕ್ಕೆ 1ರೂಪಾಯಿ ನೀಡಬೇಕಾಗುತ್ತದೆ. ರಾತ್ರಿ 12ರಿಂದ ಬೆಳಿಗ್ಗೆ 6ರವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ ಶೇ 10ರಷ್ಟು ಹೆಚ್ಚುವರಿ ದರ ನಿಗದಿ ಮಾಡಲಾಗಿದೆ.

    ನಗರ ಟ್ಯಾಕ್ಸಿಯವರು, ಅಗ್ರಿಗೇಟರ್‌ಗಳು ಜಿಎಸ್‌ಟಿ ಮತ್ತು ಟೋಲ್‌ ಶುಲ್ಕವನ್ನು ಪ್ರಯಾಣಿಕರಿಂದ ವಸೂಲಿ ಮಾಡಬಹುದು. ಸಮಯಕ್ಕೆ ಅನುಗುಣವಾಗಿ ಏರಿಕೆ ಮಾಡದೆ, ಕಿಲೋ ಮೀಟರ್‌ ಆಧಾರದಲ್ಲಿ ನಿಗದಿಪಡಿಸಿರುವ ದರಗಳನ್ನು ಮಾತ್ರ ವಸೂಲಿ ಮಾಡಬೇಕು. ಅನಧಿಕೃತವಾಗಿ ಯಾವುದೇ ದರಗಳನ್ನು ಪ್ರಯಾಣಿಕರಿಂದ ಪಡೆಯಬಾರದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ | Lok Sabha 2024
    Next Article Plastic ಬಳಕೆ ಬೇಡ ಎಂದ ಈಶ್ವರ ಖಂಡ್ರೆ | Eshwar Khandre
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TristanJidly on May 3, 2023 51st Year Free Mass Marriage at Sri Kshetra Dharmasthala
    • australia cheap tobacco on ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    • australia cigerettes on ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe