Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » HSRP ಅವಧಿ ವಿಸ್ತರಿಸಿದ ಸಚಿವ ರಾಮಲಿಂಗಾರೆಡ್ಡಿ | HSRP Number Plate
    Trending

    HSRP ಅವಧಿ ವಿಸ್ತರಿಸಿದ ಸಚಿವ ರಾಮಲಿಂಗಾರೆಡ್ಡಿ | HSRP Number Plate

    vartha chakraBy vartha chakraFebruary 14, 202453 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.14- ವಾಹನಗಳ ಸುರಕ್ಷತೆಯ ದೃಷ್ಟಿಯಿಂದ ರೂಪಿಸಲಾಗಿರುವ ಅತಿ ಭದ್ರತೆಯುಳ್ಳ ನೊಂದಣಿ ಫಲಕ( ಹೆಚ್ ಎಸ್ ಆರ್ ಪಿ – HSRP Number Plate) ಪಡೆಯಲು ಪರದಾಡುತ್ತಿರುವ ವಾಹನ ಮಾಲೀಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
    ಸರ್ವರ್ ಸಮಸ್ಯೆ ಸೇರಿದಂತೆ ಹಲವಾರು ತಾಂತ್ರಿಕ ಕಾರಣಗಳಿಂದ ವಾಹನ ಮಾಲೀಕರು ತಮ್ಮ
    ವಾಹನಗಳಿಗೆ ನಿಗದಿತ ಸಮಯದಲ್ಲಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಪಡೆಯಲು ಸಾಧ್ಯವಾಗಿಲ್ಲ.ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದ ಬೇಡಿಕೆ ಆಧರಿಸಿ ಹೆಚ್ ಎಸ್ ಆರ್ ಪಿ ಅಳವಡಿಸುವುದಕ್ಕೆ ಇನ್ನೂ ಮೂರು ತಿಂಗಳ‌ ಕಾಲಾವಕಾಶ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ತಿನಲ್ಲಿ ಪ್ರಕಟಿಸಿದರು.

    ರಾಜ್ಯದಲ್ಲಿ ಈಗಾಗಲೇ 18 ಲಕ್ಷ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್  ಅಳವಡಿಕೆ ಮಾಡಲಾಗಿದೆ.ಉಳಿದ ವಾಹನಗಳಿಗೂ ಈ ನಂಬರ್ ಪ್ಲೇಟ್ ಅಳವಡಿಸಲು ಮೂರು ತಿಂಗಳ‌ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
    ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸುವುದು ಅನ್ ಲೈನ್ ನಲ್ಲಿ‌ ನೊಂದಣಿ ಮಾಡಿಕೊಳ್ಳುವ ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿದೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ನ ಮಧು ಜಿ. ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.
    ಹೈಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸುವ ಕುರಿತಂತೆ ತಲೆ ಎತ್ತಿರುವ ಕೆಲವು ನಕಲಿ‌ ವೆಬ್ ಸೈಟ್ ಗಳ‌ ಬಗ್ಗೆ ನಿಗಾ ವಹಿಸಲಾಗಿದ್ದು,ಅಂತಹವುಗಳ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

    ಅತಿ ಸುರಕ್ಷತಾ ನೋಂದಣಿ ಫಲಕಗಳ ಯೋಜನೆಯನ್ನು ಭದ್ರತೆಯ ದೃಷ್ಟಿಯಿಂದ ಜಾರಿಗೊಳಿಸಲಾಗಿದೆ. ಇದರಿಂದಾಗಿ ವಾಹನಗಳನ್ನು ಬಳಸಿಕೊಂಡು ಎಸಗುವ ಅಪರಾಧಗಳನ್ನು ತಡೆಗಟ್ಟುವುದು ಮತ್ತು ರಸ್ತೆಯ ಮೇಲೆ ಸಂಚರಿಸುವ ಎಲ್ಲಾ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತದೆ.ಅಲ್ಲದೆ, ನೋಂದಣಿ ಫಲಕಗಳನ್ನು ವಿರೂಪಗೊಳಿಸುವ ಮತ್ತು ನಕಲಿ ನೋಂದಣಿ ಫಲಕಗಳನ್ನು ನಿಯಂತ್ರಿಸಲು ಸಹಾಯಕವಾಗುತ್ತದೆ.

    ನೋಂದಣಿ ಫಲಕವು ಅಲ್ಯೂಮಿನಿಯಂನಿಂದ ನಿರ್ಮಿತವಾದ “ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ರೇಟ್” ಆಗಿದ್ದು, ಮರುಬಳಕೆ ಮಾಡಲಾಗದ ಎರಡು ಲಾಕ್‌ಗಳನ್ನು ಬಳಸಿಕೊಂಡು ವಾಹನದ ಮೇಲೆ ಸ್ಥಿರವಾಗಿ ಅಳವಡಿಸಲಾಗುತ್ತದೆ. ನಕಲಿನಿಂದ ರಕ್ಷಿಸಲು 20 ಎಂಎಂ x 20 ಎಂಎಂ ಗಾತ್ರದ ಚಕ್ರದ ಕ್ರೋಮಿಯಂ ಆಧಾರಿತ ಹೊಲೊಗ್ರಾಮ್ ಅನ್ನು ಮುಂಭಾಗ ಮತ್ತು ಹಿಂಭಾಗದ ಎರಡೂ ಪ್ಲೇಟ್‌ಗಳ ಮೇಲಿನ ಎಡ ಮೂಲೆಯಲ್ಲಿ ಬಿಸಿ ಸ್ಯಾಂಪಿಂಗ್ ಮೂಲಕ ಅಳವಡಿಸಲಾಗುತ್ತದೆ ಎಂದು ವಿವರಿಸಿದರು.
    ಕೇಂದ್ರ ಸರ್ಕಾರದ ಆದೇಶದನ್ವಯ ಎಲ್ಲಾ ರಾಜ್ಯಗಳಲ್ಲಿಯೂ ಅತಿ ಸುರಕ್ಷತಾ ನೋಂದಣಿ ಫಲಕಗಳನ್ನು ಅಳವಡಿಸಲಾಗುತ್ತಿದ್ದು, ಅದೇ ರೀತಿಯಾಗಿ ರಾಜ್ಯದಲ್ಲಿಯೂ ಸಹ ಫಲಕಗಳನ್ನು ಅಳವಡಿಸಲು ಆದೇಶಿಸಲಾಗಿರುತ್ತದೆ.
    ರಾಜ್ಯದಲ್ಲಿ ಏಪ್ರಿಲ್ 2019ಕ್ಕಿಂತ ಮೊದಲು ಅಂದಾಜು 2.45 ಕೋಟಿ ವಾಹನಗಳು ನೋಂದಣಿಯಾಗಿದ್ದು, ಸುಮಾರು 2 ವಾಹನಗಳು ಅಸ್ತಿತ್ವದಲ್ಲಿವೆ ಎಂದು ಉತ್ತರಿಸಿದರು.

    m ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    Next Article ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • FobertCaR on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • 1win suretli qeydiyyat on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe