Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂಟಿ ತೋಳ ನಡೆಸಿದ ರಾಮೇಶ್ವರಂ ಕೆಫೆ ಸ್ಪೋಟ
    Trending

    ಒಂಟಿ ತೋಳ ನಡೆಸಿದ ರಾಮೇಶ್ವರಂ ಕೆಫೆ ಸ್ಪೋಟ

    vartha chakraBy vartha chakraMarch 3, 202470 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.3- ವೈಟ್‌ ಫೀಲ್ಡ್‌ ನ ಬ್ರೂಕ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟವನ್ನು ನಡೆಸಿರುವುದು ಒಬ್ಬನೇ ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಕಳೆದ 10 ವರ್ಷಗಳಲ್ಲಿ ರಾಜ್ಯದಲ್ಲಿ ಮೂರು ಪ್ರಮುಖ ಸ್ಫೋಟಗಳು ಸಂಭವಿಸಿದ್ದು, ಮೂರೂ ಪ್ರಕರಣಗಳಲ್ಲಿ ಒಬ್ಬನೇ ಭಾಗಿಯಾಗಿದ್ದು, ಇದನ್ನು ಒಂಟಿ ತೋಳ ದಾಳಿ ಎಂದು ವ್ಯಾಖ್ಯಾನಿಸಲಾಗಿದೆ.
    ಕಳೆದ 2014ರ ಡಿಸೆಂಬರ್‌ 28ರಂದು ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿರುವ ಕೋಕೊನಟ್‌ ಗ್ರೋವ್‌ ರೆಸ್ಟೋರೆಂಟ್‌ ಪಾದಚಾರಿ ರಸ್ತೆಯ ಹೂವಿನ ಕುಂಡದಲ್ಲಿ ಬಾಂಬ್‌ ಇಟ್ಟು ಸ್ಫೋಟಿಸಲಾಗಿತ್ತು. ಅದರಲ್ಲಿ ಭವಾನಿ ಎಂಬ 37 ವರ್ಷದ ಮಹಿಳೆ ಮೃತಪಟ್ಟಿದ್ದರು. ಅಂದು ಈ ಕೃತ್ಯವನ್ನು ನಡೆಸಿದ್ದು ಒಬ್ಬನೇ ಎನ್ನುವುದು ತನಿಖೆಯಲ್ಲಿ ‌ ಗೊತ್ತಾಗಿತ್ತು.

    2022ರ ನವೆಂಬರ್‌ 19ರಂದು ಮಂಗಳೂರಿನ ಗರೋಡಿಯಲ್ಲಿ ರಿಕ್ಷಾದಲ್ಲಿ ಹೋಗುತ್ತಿದ್ದಾಗ ಕುಕ್ಕರ್‌ ಬಾಂಬ್‌ ಸ್ಫೋಟ ಸಂಭವಿಸಿತ್ತು. ಅದನ್ನು ನಡೆಸಿದ್ದು ಶಿವಮೊಗ್ಗದ ತೀರ್ಥಹಳ್ಳಿಯ ಮೊಹಮ್ಮದ್‌ ಶಾರಿಖ್‌. ಈ ಪ್ರಕರಣದಲ್ಲಿ ಕೂಡಾ ಒಬ್ಬನೇ ಭಾಗಿಯಾಗಿದ್ದ.
    ಇದೇ ರೀತಿ ರಾಮೇಶ್ವರಂ ಕೆಫೆ ಸ್ಫೋಟದಲ್ಲೂ ಒಬ್ಬನೇ ವ್ಯಕ್ತಿ ಒಂಟಿ ತೋಳದ ರೀತಿಯಲ್ಲಿ ಈ ದಾಳಿ ನಡೆಸಿದ್ದಾನೆ ಎಂದು ಹೇಳಲಾಗಿದೆ. ಅಂದರೆ ಈ ಕೃತ್ಯದ ಹಿಂದೆ ಎಷ್ಟೇ ಜನರು ಇರಬಹುದು. ಆದರೆ, ಒಟ್ಟಾರೆ ಕೃತ್ಯವನ್ನು ಹ್ಯಾಂಡಲ್‌ ಮಾಡಿದ್ದು ಒಬ್ಬನೇ ವ್ಯಕ್ತಿ ಎನ್ನುವುದು ಈಗ ಬಯಲಾಗಿದೆ.

    ಚರ್ಚ್‌ ಸ್ಟ್ರೀಟ್‌ ಮತ್ತು ಮಂಗಳೂರು ಕುಕ್ಕರ್‌ ಬಾಂಬ್‌‌ ಸ್ಫೋಟದ ಹೊಣೆಯನ್ನು ಅಂದು ಐಸಿಸ್‌ ತಾನು ಹೊತ್ತುಕೊಂಡಿತ್ತು. ಆದರೆ, ರಾಮೇಶ್ವರಂ ಕೆಫೆ ವಿಚಾರದಲ್ಲಿ ಮೌನವಾಗಿದೆ.
    ಏನಿದು ಒಂಟಿ ತೋಳ:
    ರಾಮೇಶ್ವರಂ ಕೆಫೆ ದಾಳಿ ಪ್ರಕರಣವನ್ನು ನಾನಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ಪ್ರತ್ಯೇಕ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಇಲ್ಲಿ ನಡೆದಿರುವ ದಾಳಿಯನ್ನು ಒಂಟಿ ತೋಳ ದಾಳಿ ಎಂಬ ಮಾದರಿ ಎಂದು ಉಲ್ಲೇಖಿಸಲಾಗಿದೆ.
    ಒಬ್ಬನೇ ವ್ಯಕ್ತಿ ಬಾಂಬ್ ತಯಾರಿಸಿ, ಆತನೇ ಸ್ಫೋಟಿ ಸುವ ಸಂಪೂರ್ಣ ಜವಾಬ್ದಾರಿ ಹೊಂದಿದ್ದರೆ ಒಂಟಿ ತೋಳ ಭಯೋತ್ಪಾದಕ ಎಂದು ಹೆಸರು ನೀಡಲಾಗುತ್ತದೆ. ಈ ಹೆಸರನ್ನು ಮೊದಲು ನೀಡಿದ್ದು ಅಮೆರಿಕ ರಾಷ್ಟ್ರವಾಗಿದೆ.

    ಹೊರರಾಜ್ಯಗಳಿಗೆ ತಂಡ:
    ಈ ನಡುವೆ, ರಾಮೇಶ್ವರಂ ಕೆಫೆಯಲ್ಲಿ ಕೃತ್ಯ ನಡೆಸಿ ಪರಾರಿಯಾಗಿರುವ ಈತನಿಗಾಗಿ ಎಲ್ಲ ಕಡೆ ಹುಡುಕಾಟ ನಡೆಯುತ್ತಿದೆ. ರಾಜ್ಯದ ಪೊಲೀಸರು ಮಹಾರಾಷ್ಟ್ರ ಹಾಗೂ ತೆಲಂಗಾಣದ ಎಟಿಸಿ ಹಾಗೂ ಕೌಂಟರ್ ಇಂಟೆಲಿಜೆನ್ಸ್ ಸೆಲ್ ಟೀಂ ಸಂಪರ್ಕದಲ್ಲಿದ್ದಾರೆ.
    ಕೌಂಟರ್ ಇಂಟಲಿಜೆನ್ಸ್ ಸೆಲ್‌ಗಳು ಬಾಂಬ್ ಸ್ಫೋಟ ಪ್ರಕರಣಗಳು ಉಗ್ರ ಕೃತ್ಯಗಳ ತನಿಖೆಯಲ್ಲಿ ಖ್ಯಾತಿ ಗಳಿಸಿದೆ. ನಗರ ಪೊಲೀಸರು ತಮಿಳುನಾಡು, ಕೇರಳ ಹಾಗೂ ತೆಲಂಗಾಣದಲ್ಲಿ ಬೀಡುಬಿಟ್ಟಿದ್ದಾರೆ.
    ಗಡಿ ದಾಟಿದ ಕಿರಾತಕ:
    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಿಎಂಟಿಸಿ ಬಸ್‌ನಲ್ಲಿ ಬಂದಿದ್ದ. ಬ್ಯಾಗ್‌ ಹಾಕಿಕೊಂಡು ರಾಮೇಶ್ವರ ಕೆಫೆಗೆ ಬಂದು ಇಡ್ಲಿ ತಿಂದು ಅಲ್ಲೇ ಬ್ಯಾಗ್‌ ಇಟ್ಟು ಹೋಗಿದ್ದ ಆತ ಅಲ್ಲಿಂದ ಮತ್ತೆ ಬಸ್‌ನಲ್ಲೇ ಹೋಗಿದ್ದ.

    ಆತ ಹಲವು ಬಸ್‌ಗಳಲ್ಲಿ ಪ್ರಯಾಣ ಮಾಡಿರುವ ಬಗ್ಗೆ ಮಾಹಿತಿ ಇದೆ. ಒಂದು ಬಸ್ ನಲ್ಲಿ ಒಂದೇ ಸ್ಟಾಪ್ ಪ್ರಯಾಣ ಮಾಡಿ 15ಕ್ಕೂ ಅಧಿಕ ಬಸ್ ಗಳಲ್ಲಿ ಪ್ರಯಾಣ ಮಾಡಿರುವ ಮಾಹಿತಿ ಇದೆ. ಹೀಗೆ ಮಾಡುವ ಮೂಲಕ ತನ್ನನ್ನು ಯಾರೂ ಟ್ರ್ಯಾಕ್‌ ಮಾಡದಂತೆ ಜಾಗರೂಕತೆ ವಹಿಸಿದ್ದಾನೆ ಎನ್ನಲಾಗಿದೆ.
    ಬೇರೆ ಬೇರೆ ರೂಟ್ ನ ಬಸ್ ಗಳಲ್ಲಿ ಪ್ರಯಾಣ ಮಾಡಿರುವ ಶಂಕಿತ ಆರೋಪಿ, ಕೆಲ ಬಸ್ ಗಳಲ್ಲಿ ಟಿಕೆಟ್ ಪಡೆದು, ಇನ್ನೂ ಕೆಲ ಬಸ್ ಗಳಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸಿರುವ ಮಾಹಿತಿಯು ತನಿಖೆಯಲ್ಲಿ ಕಂಡುಬಂದಿದೆ.

    Verbattle
    Verbattle
    Verbattle
    ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿಯ ಶಿಫಾರಸು ಮಾಡಿದ ಆಯೋಗ
    Next Article ತುಮಕೂರಿನ ಕೆರೆಗಳಿಗೆ ಬೆಂಗಳೂರಿನ ಕೊಳಚೆ ನೀರು | Tumkur
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • CharlesSok on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • LinwoodGah on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.