Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಮರ | Karnataka
    Trending

    ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಮರ | Karnataka

    vartha chakraBy vartha chakraApril 28, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.28: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆರ್ಥಿಕ ನೆರವು ಸಾಕಾಗುತ್ತಿಲ್ಲ ಎಂದು ಆರೋಪಿಸಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧರಣಿ ನಡೆಸಿದರು.
    ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದ ಅವರು ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾಗಿರುವ ಪರಿಹಾರ ಸಿಗುವವರೆಗೆ ತಮ್ಮ ಹೋರಾಟ ಮುಂದುವರೆಯಲಿದೆ ಎಂದು ಘೋಷಿಸಿದರು.

    ಪ್ರಾಕೃತಿಕ ವಿಕೋಪ ನಿರ್ವಹಣೆ ನಿಧಿ ಅನ್ವಯ ರಾಜ್ಯಕ್ಕೆ 18,171 ಕೋಟಿ ರೂಪಾಯಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498 ಕೋಟಿಗೆ ಅನುಮೋದನೆ ನೀಡಿ, 3,454 ಕೋಟಿ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅಗ್ರಹಿಸಿದರು ರಾಜ್ಯಕ್ಕೆ ಸಿಗಬೇಕಾದ ಬರ ಪರಿಹಾರ ನೆರವಿಗಾಗಿ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಬೇಕಾಯಿತು ಎಂದು ವಿಷಾದಿಸಿದ ಅವರು ಮಳೆ ಅಭಾವದಿಂದಾಗಿ 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದ್ದು, ಇದರ ಅಂದಾಜು ವೌಲ್ಯ 35 ಸಾವಿರ ಕೋಟಿ ರೂ.ಗಳು. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ, 18,172 ಕೋಟಿ ರೂ. ಪರಿಹಾರ ನೀಡುವಂತೆ ಮನವಿ ಮಾಡಿದ್ದೆವು.
    ಸುಪ್ರೀಂಕೋರ್ಟ್‌ ಚಾಟಿ ಬೀಸಿದ ಮೇಲೆ 15 ದಿನದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಹೇಳಿತ್ತು. ಮತ್ತೆ ಹೆಚ್ಚುವರಿಯಾಗಿ ಒಂದು ವಾರ ಸಮಯ ಕೇಳಿ ಈಗ ಪ್ರಸ್ತಾವನೆ ಸಲ್ಲಿಸಿದ್ದರ ಪೈಕಿ ಶೇ.19 ರಷ್ಟು ಪರಿಹಾರ ನೀಡುವುದಾಗಿ ಹೇಳಿದೆ. 3,454 ಕೋಟಿ ರೂ. ಪರಿಹಾರ ನೀಡುವುದಾಗಿ ಹೇಳಿದೆ. 14,718 ಕೋಟಿ ರೂ. ಕೊಡುತ್ತಿಲ್ಲ ಎಂದು ವಿವರಿಸಿದರು.
    ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಅಮಿತ್‌ ಶಾ ಅವರುಗಳು ರಾಜ್ಯಕ್ಕೆ ಬಂದು ಸುಳ್ಳು ಹೇಳಿದರು. ಪ್ರಸ್ತಾವನೆ ಸಲ್ಲಿಸುವುದು ತಡವಾಗಿದೆ ಎಂದಾಗಿದ್ದರೆ, ತಾವು ಭೇಟಿ ಮಾಡಿದ್ದಾಗಲೇ ಅಮಿತ್‌ ಶಾ ಹೇಳಬಹುದಿತ್ತು. ದ್ವೇಷದ ರಾಜಕಾರಣಕ್ಕಾಗಿ ಸುಳ್ಳು ಹೇಳುತ್ತಿದ್ದಾರೆ ಎಂದರು.

    ನಮ್ಮ ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿಲ್ಲ, ಬರಪೀಡಿತ ರೈತರ ಪರಿಹಾರಕ್ಕೆ ಹಣ ಕೇಳುತ್ತಿದ್ದೇವೆ. ನಾವು ಸಂಗ್ರಹಿಸಿಕೊಟ್ಟ ತೆರಿಗೆಯಲ್ಲಿ ನಮಗೆ ಸರಿಯಾದ ಪಾಲು ನೀಡುವುದು ಮತ್ತು ರೈತರಿಗೆ ಪರಿಹಾರ ನೀಡುವುದು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
    ಕೇಂದ್ರ ಸರ್ಕಾರದ ನೆರವಿಗೆ ಕಾಯದೆ ಈಗಾಗಲೇ ರಾಜ್ಯ ಸರ್ಕಾರ 34 ಲಕ್ಷ ರೈತರಿಗೆ ರಾಜ್ಯಸರ್ಕಾರ ತನ್ನ ಬೊಕ್ಕಸದಿಂದಲೇ ತಲಾ 2 ಸಾವಿರ ರೂ. ಪರಿಹಾರವನ್ನು ಪಾವತಿಸಿದೆ. ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ದೊರೆಯುತ್ತಿದೆ. ಯಾವ ರೈತರೂ ಪರಿಹಾರ ಸಿಕ್ಕಿಲ್ಲ ಎಂದು ದೂರು ನೀಡಿಲ್ಲ. ಕುಮಾರಸ್ವಾಮಿ ಸುಳ್ಳು ಟೀಕೆಗಳನ್ನು ಮಾಡುತ್ತಿದ್ದಾರೆ. ನಾವು ರೈತರಿಗೆ ಪರಿಹಾರ ನೀಡುತ್ತಿದ್ದೇವೆಯೇ ಹೊರತು ಕುಮಾರಸ್ವಾಮಿಯವರಿಗಲ್ಲ ಎಂದು ತಿರುಗೇಟು ನೀಡಿದರು.
    ಗಾಂಧಿ ಪ್ರತಿಮೆ ಮುಂದೆ ಧರಣಿಗೂ ಮುನ್ನ ದೇವರಾಜ ಅರಸು ಪ್ರತಿಮೆಯಿಂದ ಗಾಂಧಿ ಪ್ರತಿಮೆ ಯವರೆಗೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ , ಸಚಿವರಾದ ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರೊಂದಿಗೆ ಪಾದಯಾತ್ರೆ ನಡೆಸಿದರು.

    Verbattle
    Verbattle
    Verbattle
    Karnataka ಕಾಂಗ್ರೆಸ್ ನ್ಯಾಯ ಬೆಳೆ ನಷ್ಟ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಟ್ಟಿಂಗ್ ಕರ್ಮಕಾಂಡ ನಟ ಸಾಹೀಲ್ ಖಾನ್ ಬಂಧನ | Sahil Khan
    Next Article ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Akslqt on February 11, 2026 2:56 pm

      betmgm app https://betmgm-play.com/ betmgm NC

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1ace_stsr on ದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ
    • LinwoodGah on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • 1win_riet on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.