Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೊಚ್ಚು.
    Trending

    ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೊಚ್ಚು.

    vartha chakraBy vartha chakraJune 17, 20248 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.17:
    ಡೀಸೆಲ್‌ ಮತ್ತು ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಿ,ಕೂಡಲೇ ದರ ಹೆಚ್ಚಳ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು
    ಬೆಂಗಳೂರು, ಬೆಳಗಾವಿ, ತುಮಕೂರು ಶಿವಮೊಗ್ಗ,
    ಮಂಡ್ಯ, ದಕ್ಷಿಣ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಮೋರ್ಚಾಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
    ಕೆಲವು ಕಡೆ ಕಾರಿಗೆ ಹಗ್ಗ ಕಟ್ಟಿ ಎಳೆದರೆ ಇನ್ನು ಕೆಲವು ಕಡೆ ಎತ್ತಿನ ಗಾಡಿ ಮೆರವಣಿಗೆ, ಶವಯಾತ್ರೆ, ತೆಂಗಿನಕಾಯಿ ಚಿಪ್ಪು, ಕರಪತ್ರ ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಜನವಿರೋಧಿ, ರೈತ ವಿರೋಧಿ ಎಂದು ಕಿರಿಕಾರಿದರು.
    ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌,ಮುಖಂಡರಾದ ಸಿ.ಟಿ.ರವಿ, ಭೈರತಿ ಬಸವರಾಜ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.
    ಎಚ್ಚರಿಕೆ:
    ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ
    ಅಧಿಕಾರಕ್ಕೆ ಬಂದ ಮೇಲೆ ಜನ ಸಾಮಾನ್ಯರ ಸಂಕಷ್ಟ ಹೆಚ್ಚಾಗಿದೆ. ಅವೈಜ್ಞಾನಿಕವಾಗಿ ಪೆಟ್ರೋಲ್, ಡೀಸೆಲ್‌ ದರ ಹೆಚ್ಚಳ ಮಾಡಲಾಗಿದೆ ಎಂದು ಆಪಾದಿಸಿದರು.
    ಈ ಹೆಚ್ಚಳವನ್ನು ಕೂಡಲೆ ವಾಪಸ್ ಪಡೆಯಬೇಕು
    ಮುಂದಿನ ವಾರ ನಾವು ಮತ್ತು ಜೆಡಿಎಸ್‌‍ನವರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ ತಡೆ ನಡೆಸಲಿದ್ದೇವೆ. ಬೆಲೆ ಹಿಂತೆಗೆದುಕೊಳ್ಳುವವರೆಗೂ ನಮ ಹೋರಾಟ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ನಮ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಸಿದರು.
    ರೈತರು, ಬಡವರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಗ್ಯಾರಂಟಿ ಮೂಲಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ಕೊಡಲು ಹೊರಟಿದೆ. ಒಬ್ಬ ಅನುಭವಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎಂಬ ಕಾರಣಕ್ಕೆ ಜನರಿಗೆ ಬೆಲೆ ಏರಿಕೆ ಮಾಡಿದ್ದಾರೆ. ಇದು ಜನ ವಿರೋಧಿ ಸರ್ಕಾರವಲ್ಲವೇ ಎಂದು ಪ್ರಶ್ನಿಸಿದರು.
    ವಿಧಾನಸೌಧ ಒತ್ತೆ:
    ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ,
    ಆದಷ್ಟು ಬೇಗ ಕಾಂಗ್ರೆಸ್‌‍ ಸರ್ಕಾರ ಅಧಿಕಾರದಿಂದ ತೊಲಗದಿದ್ದರೆ ಮುಂದಿನ ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧವನ್ನೇ ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಟೀಕಿಸಿದರು.
    ಈಗಾಗಲೇ ಕಾರ್ಪೋರೇಷನ್‌ ಕಟ್ಟಡಗಳು , ವಾರ್ಡ್‌ ಕಚೇರಿ ಅಡ ಇಟ್ಟು ಬ್ಯಾಂಕ್‌ನಿಂದ ಸಾಲ ಪಡೆಯಲು ಇಟ್ಟಿದ್ದಾರೆ. ಇದೇ ಪ್ರವೃತ್ತಿ ಮುಂದುವರೆದರೆ ಸಿಎಂ ಸಿದ್ದರಾಮಯ್ಯನವರು ವಿಧಾನಸೌಧವನ್ನು ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
    ನಾವು ಅಂದು ಆಡಳಿತದಲ್ಲಿದ್ದಾಗ ಒಂದು ರೂ. ಬೆಲೆ ಹೆಚ್ಚಳ ಮಾಡಿದ್ದಕ್ಕೆ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದ್ದರು. ಈಗ ಪೆಟ್ರೋಲ್‌ ದರವನ್ನು 3 ರೂ. 50 ಪೈಸೆ ಹಾಗೂ ಡೀಸೆಲ್‌ ದರವನ್ನು 3 ರೂ.ಗೆ ಏರಿಕೆ ಮಾಡಿದ್ದಾರೆ. ಹಾಗಾದರೆ ನಿಮ ಸರ್ಕಾರಕ್ಕೆ ಮಾನಮರ್ಯಾದೆ ಇದೆಯೇ ಎಂದು ತರಾಟೆಗೆ ತೆಗೆದುಕೊಂಡರು.
    ತುಮಕೂರಿನಲ್ಲಿ ಭದ್ರಾ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಶಾಸಕ ಜ್ಯೋತಿ ಗಣೇಶ್‌ ನೇತೃತ್ವದಲ್ಲಿ ಭದ್ರಮ ವೃತ್ತದಿಂದ ಕನಕ ವೃತ್ತದವರೆಗೆ ಪ್ರತಿಭಟನಾ ಮೆರಣಿವಣಿಗೆ ನಡೆಸಲಾಯಿತು. ಶಾಸಕ ಜ್ಯೋತಿ ಗಣೇಶ್‌ ಪ್ರತಿಭಟನೆಗೆ ಸೈಕಲ್‌ ಏರಿ ಬಂದಿದ್ದು, ವಿಶೇಷವಾಗಿತ್ತು.
    ದಕ್ಷಿಣಕನ್ನಡದಲ್ಲಿ ಅಣುಕು ಶವಯಾತ್ರೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದ ಸರ್ಕಾರ ಜನರ ಜೇಬಿಗೆ ದರದ ಬರೆಯನ್ನು ಎಳೆದಿದೆ. ಬೇರೆ ರಾಜ್ಯಗಳಲ್ಲಿ ಅಷ್ಟಿತ್ತು, ಇಷ್ಟಿತ್ತು ಎನ್ನುವ ಬದಲು ಮೊದಲು ನೀವು ಕಡಿಮೆ ಮಾಡಿ ಎಂದು ಸವಾಲು ಹಾಕಿದರು.

    Bangalore BJP Congress Government Karnataka News petrol bunk petroleum Politics Trending Varthachakra ಉಗ್ರ ಕಾಂಗ್ರೆಸ್ Election ಜೆಡಿಎಸ್ ತುಮಕೂರು ಧಾರವಾಡ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಪೆಟ್ರೋಲ್ ಡೀಸೆಲ್ ಬೆಲೆ ರೂ.3 ಹೆಚ್ಚಳ.
    Next Article ಜನರಿಗೆ ತೊಂದರೆಯಾಗದಂತೆ ತೆರಿಗೆ ಹಾಕುತ್ತಾರಂತೆ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    8 Comments

    1. b6os4 on June 8, 2025 1:58 am

      order cheap clomid price cost cheap clomiphene without insurance cheapest clomid pills clomid tablets for sale generic clomiphene walmart can you buy generic clomid prices buying cheap clomid

      Reply
    2. buy cialis today on June 8, 2025 11:30 pm

      Greetings! Very gainful suggestion within this article! It’s the petty changes which liking espy the largest changes. Thanks a lot towards sharing!

      Reply
    3. flagyl and dogs on June 10, 2025 5:14 pm

      With thanks. Loads of knowledge!

      Reply
    4. nm67h on June 18, 2025 12:08 am

      propranolol cheap – purchase methotrexate pill where to buy methotrexate without a prescription

      Reply
    5. Raymondhek on June 19, 2025 2:57 pm

      ¡Saludos, participantes del juego !
      Experiencia fluida en casinos online extranjeros – https://www.casinosextranjero.es/# п»їcasinos online extranjeros
      ¡Que vivas increíbles instantes inolvidables !

      Reply
    6. Sonnynef on June 20, 2025 2:51 pm

      ¡Hola, buscadores de fortuna !
      Casinos extranjeros con mГЎs de 1000 juegos disponibles – https://www.casinoextranjero.es/ п»їcasinos online extranjeros
      ¡Que vivas conquistas brillantes !

      Reply
    7. Robertasson on June 21, 2025 8:28 pm

      ¡Hola, seguidores de la aventura !
      Casinosextranjerosdeespana.es – plataforma fiable – https://www.casinosextranjerosdeespana.es/ casinos extranjeros
      ¡Que vivas increíbles instantes únicos !

      Reply
    8. lwoe4 on June 23, 2025 12:32 am

      buy zithromax no prescription – tinidazole pills nebivolol 5mg cost

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pechat_na_futbolkah_yhSt on ಎತ್ತುಗಳ ಕಳ್ಳರು ಸಿಕ್ಕಿಬಿದ್ದರು
    • karkasnyy_dom_cbkl on Budget ನಲ್ಲಿ ಬಯಲು ಸೀಮೆಗೆ ನಿರ್ಮಲಾ ಬಂಪರ್ ಕೊಡುಗೆ!
    • BrianEVISM on 27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe