Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ಈ ವಿಷಯ ರಾಹುಲ್ ಗಾಂಧಿಗೆ ಬೇಸರ ತರಿಸಿದೆ.
    Trending

    ರಾಜ್ಯದ ಈ ವಿಷಯ ರಾಹುಲ್ ಗಾಂಧಿಗೆ ಬೇಸರ ತರಿಸಿದೆ.

    vartha chakraBy vartha chakraJuly 31, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.30:
    ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಪ್ರಕರಣಗಳು ಕಾಂಗ್ರೆಸ್ ಹೈಕಮಾಂಡ್ ಅನ್ನು ಚಿಂತೆಗೀಡು ಮಾಡಿದೆ.
    ಎಲ್ಲ ರಾಜ್ಯಗಳ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಂದಿಗೆ ಈ ವಿಷಯದ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದ್ಯಮಾನಗಳ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.
    ಬಿಜೆಪಿಯ ಭ್ರಷ್ಟಾಚಾರ ಆರೋಪಗಳ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ರೀತಿಯ ಹೋರಾಟಕ್ಕೆ ಸಜ್ಜುಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಈ ಆರೋಪಗಳು ಮುಜುಗರ ಉಂಟು ಮಾಡುತ್ತಿವೆ ಎಂದು ಹೇಳಲಾಗಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಬಿಜೆಪಿ ನಾಯಕರು ಈ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ ನಾಯಕರಿಗೆ ಇರಿಸು ಮುರಿಸು ಉಂಟು ಮಾಡುತ್ತಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಮೂಲಗಳು ತಿಳಿಸಿವೆ.
    ಈ ವಿಷಯಗಳನ್ನು ಇಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಉದ್ದೇಶಿಸಿರುವ ಬಗ್ಗೆ ರಾಜ್ಯ ನಾಯಕರಿಂದ ಮಾಹಿತಿ ಪಡೆದುಕೊಂಡಿರುವ ರಾಹುಲ್ ಗಾಂಧಿ ಇದರಿಂದ ಪಕ್ಷದ ವರ್ಚಸ್ಸಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿರುವುದಾಗಿ ಗೊತ್ತಾಗಿದೆ.
    ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದ್ದ ಅವಧಿಯಲ್ಲಿ ಹಲವಾರು ಅಕ್ರಮಗಳ ಆರೋಪಗಳು ಕೇಳಿಬಂದಿದ್ದವು. ಆದರೆ ಈಗಿನ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇಲ್ಲಿಯವರೆಗೆ ಈ ಯಾವುದೇ ಆರೋಪಗಳ ಬಗ್ಗೆ ತನಿಖೆ ನಡೆಸುವ ಇಲ್ಲವೇ ಸಾರ್ವಜನಿಕರಿಗೆ ಮಾಹಿತಿ ನೀಡುವ ಕೆಲಸವನ್ನು ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ರಾಹುಲ್ ಗಾಂಧಿ ಇಬ್ಬರೂ ನಾಯಕರು ಕರ್ನಾಟಕಕ್ಕೆ ಹಿಂತುರುಗಿದ ಕೂಡಲೇ ಸಂಪುಟ ಸಹೋದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಕ್ರಮಗಳನ್ನು ಬಯಲಿಗೆಳೆಯುವಂತೆ ಸೂಚಿಸಿದರು ಎಂದು ಗೊತ್ತಾಗಿದೆ.
    ಕುಮಾರಸ್ವಾಮಿ ತಂತ್ರ:
    ಈ ವೇಳೆ ಎರಡು ಹಗರಣಗಳ ಕುರಿತಂತೆ ಸುಧೀರ್ಘ ವಿವರಣೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಸಚಿವ ಕುಮಾರಸ್ವಾಮಿ ರೂಪಿಸಿರುವ ತಂತ್ರ ಇದಾಗಿದೆ ಎಂದು ಹೇಳಿದ್ದಾರೆ.
    ಉಪಚುನಾವಣೆಯಲ್ಲಿ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿರುವ ಕುಮಾರಸ್ವಾಮಿ ಅವರು ಈ ಎರಡು ಆರೋಪಗಳನ್ನು ಇಟ್ಟುಕೊಂಡು ಪಾದಯಾತ್ರೆ ಮಾಡುವ ಮೂಲಕ ತಮ್ಮ ಪುತ್ರನನ್ನು ನಾಯಕನನ್ನಾಗಿ ಬಿಂಬಿಸಲು ಹೊರಟಿದ್ದಾರೆ ಸದ್ಯದಲ್ಲೇ ಕುಮಾರಸ್ವಾಮಿ ತಮ್ಮ ಪುತ್ರನಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಕಟ್ಟುತ್ತಿದ್ದಾರೆ ಅದಕ್ಕಾಗಿ ಈ ಪಾದಯಾತ್ರೆಯ ತಂತ್ರ ರೂಪಿಸಿದ್ದಾರೆ.
    ಕುಮಾರಸ್ವಾಮಿಯವರ ಪುತ್ರನನ್ನು ನಾಯಕನನ್ನಾಗಿ ಮಾಡಲು ಹೊರಟಿರುವ ಈ ಹೋರಾಟಕ್ಕೆ ಅವರು ಬಿಜೆಪಿಯನ್ನು ಬಳಸಿಕೊಳ್ಳುತ್ತಿದ್ದಾರೆ ಇದರ ವಿರುದ್ಧ ನಾವು ಕೂಡ ರಾಜಕೀಯ ಹೋರಾಟ ಮಾಡಬಹುದಾಗಿದೆ ಈ ಸಂಬಂಧ ತಾವು ಈಗಾಗಲೇ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದೇನೆ.ಮಂತ್ರಿಗಳು ಕೂಡ ಹಲವು ಸಲಹೆಗಳನ್ನು ನೀಡಿದ್ದು ಆ ಎಲ್ಲವನ್ನು ಕಾರ್ಯರೂಪಕ್ಕೆ ತರುವ ಮೂಲಕ ಜೆಡಿಎಸ್ ಮತ್ತು ಬಿಜೆಪಿ ರೂಪಿಸಿರುವ ರಾಜಕೀಯ ತಂತ್ರಕ್ಕೆ ತಕ್ಕ ಎದುರೇಟು ನೀಡುತ್ತೇವೆ ಎಂದು ಸಮಜಾಯಿಸಿ ನೀಡಿರುವುದಾಗಿ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ಜೆಡಿಎಸ್ ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರವನ್ನು ಭ್ರಷ್ಟ ಎಂದು ಬಿಂಬಿಸುವ ಯತ್ನ.
    Next Article ಸಿದ್ದರಾಮಯ್ಯ ವಿರುದ್ಧ ಕಾನೂನು ಕುಣಿಕೆ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Glennhof on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Idcrbl on ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.