Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಖ್ಯಮಂತ್ರಿ ಬದಲಾವಣೆ ವಿಷಯ ಅಪ್ರಸ್ತುತ.
    Trending

    ಮುಖ್ಯಮಂತ್ರಿ ಬದಲಾವಣೆ ವಿಷಯ ಅಪ್ರಸ್ತುತ.

    vartha chakraBy vartha chakraAugust 13, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.11:
    ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ವಿದ್ಯಮಾನಗಳು ನಡೆಯುತ್ತಿಲ್ಲ ಮುಖ್ಯಮಂತ್ರಿ ಬದಲಾವಣೆ ವಿಷಯ ಎಲ್ಲಿಯೂ ಚರ್ಚೆಗೆ ಬಂದಿಲ್ಲ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದು ಅವರೇ ಪೂರ್ಣಾವಧಿ ನೀಡಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅವರು ಬದಲಾಗುವುದಿಲ್ಲ ಎಂಬ ವ್ಯಾಖ್ಯಾನಗಳ ಕುರಿತು ಪ್ರತಿಕ್ರಿಯಿಸಿದರು.
    ಮುಖ್ಯಮಂತ್ರಿ ಬದಲಾವಣೆ ಎಂಬ ವಿಷಯ ಈಗ ಅಪ್ರಸ್ತುತ.ನಮ ಪಕ್ಷದ ಯಾವ ನಾಯಕರೂ ಈ ಬಗ್ಗೆ ಹೇಳಿಕೆ ನೀಡಿಲ್ಲ. ಬಿಜೆಪಿ-ಜೆಡಿಎಸ್‌‍ನ ನಾಯಕರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆ ರೀತಿಯ ಚರ್ಚೆಗಳೇ ಅನಗತ್ಯ ಎಂದು ಹೇಳಿದರು.
    ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಬಾರದು. ಈ ಕುರಿತು ದಾಖಲಾಗಿರುವ ದೂರನ್ನು ತಿರಸ್ಕರಿಸಬೇಕು ಮತ್ತು ಶೋಕಾಸ್‌‍ ನೋಟೀಸ್‌‍ ಅನ್ನು ಹಿಂಪಡೆಯಬೇಕು ಎಂದು ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಸಲಹೆ ನೀಡಿದೆ. ಅದರ ಹೊರತಾಗಿಯೂ ಅವರು ಮುಂದುವರೆದರೆ ನಮಗೂ ಕಾನೂನು ಹೋರಾಟ ಅನಿವಾರ್ಯವಾಗಲಿದೆ. ಆದರೆ ರಾಜ್ಯಪಾಲರು ಕಾನೂನು ಬಿಟ್ಟು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಮಗೆ ಅನಿಸುವುದಿಲ್ಲ. ಕಾನೂನಿನ ಪ್ರಕಾರ ನಡೆದುಕೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.
    ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೊ ಪ್ರಕರಣಕ್ಕೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಅಭಿಯೋಜಕರು ಮೇಲನವಿ ಸಲ್ಲಿಸಿದ್ದಾರೆ. ಮುಂದಿನ ವಿಚಾರಣೆಯಲ್ಲಿ ಅಡ್ವಕೇಟ್‌ ಜನರಲ್‌ ಅಥವಾ ಯಾರು ಹಾಜರಾಗುತ್ತಾರೆ ಎಂಬುದನ್ನು ಆಧರಿಸಿ ರಾಜ್ಯಸರ್ಕಾರದ ಪರವಾಗಿ ಸಮರ್ಥ ವಾದ ಮಂಡಿಸಲಾಗುವುದು ಎಂದು ಹೇಳಿದರು.
    ಫೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಸಾಮಾನ್ಯವಾಗಿ ಜಾಮೀನು ದೊರೆಯುವುದಿಲ್ಲ. ಆದರೆ ನ್ಯಾಯಾಧೀಶರು ಕೊಟ್ಟಿದ್ದಾರೆ. ರಾಜ್ಯಸರ್ಕಾರದ ಪರವಕೀಲರು ನ್ಯಾಯಾಲಯದ ಮುಂದೆ ಸತ್ಯಾಸತ್ಯತೆಗಳನ್ನು ವಿವರಿಸಲಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಲಾಗುವುದು ಎಂದರು.
    ಕೆನೆಪದರ ಮೀರಿದವರನ್ನು ಮೀಸಲಾತಿಯಿಂದ ಹೊರಗಿಡುವಂತಹ ನಿರ್ಣಯ ಮಾಡುವಂತೆ ಬಿಜೆಪಿ ಸಂಸದರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನ್ನ ಅಭಿಪ್ರಾಯಗಳು ಏನೇ ಇದ್ದರೂ ಅದು ವೈಯಕ್ತಿಕ. ಎಐಸಿಸಿ ಚರ್ಚೆ ಮಾಡಿ ತೆಗೆದುಕೊಳ್ಳುವ ನಿರ್ಧಾರಗಳು ಅದರ ಆಧಾರದ ಮೇಲೆ ರಾಜ್ಯ ಘಟಕಕ್ಕೆ ನೀಡುವ ನಿರ್ದೇಶನಗಳು ಮುಖ್ಯವಾಗುತ್ತದೆ. ನಂತರ ನಾವು ಪ್ರತಿಕ್ರಿಯೆ ನೀಡುತ್ತೇವೆ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಜೆಡಿಎಸ್ ನರೇಂದ್ರ ಮೋದಿ ನ್ಯಾಯ ಯಡಿಯೂರಪ್ಪ ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಬದಲಾವಣೆಗೆ ಹೆಚ್ಚಿದ ಒತ್ತಡ.
    Next Article ಅಂಬಾನಿ ಮಾಡಿದ ಕೆಲಸ ಏನು ಗೊತ್ತಾ..
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    1 Comment

    1. Ykekhw on February 13, 2026 1:36 am

      mgm betting app betmgm NC mgm bet promo

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on May 3, 2023 51st Year Free Mass Marriage at Sri Kshetra Dharmasthala
    • LinwoodGah on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Atyjfy on ನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.