Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ A1ಆರೋಪಿ.
    ಅಪರಾಧ

    ಸಿದ್ದರಾಮಯ್ಯ A1ಆರೋಪಿ.

    vartha chakraBy vartha chakraSeptember 27, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು,ಸೆ.27:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
    ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು
    ಸಿಆರ್‌ಪಿ ಸೆಕ್ಷನ್ 156(3)ರಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಎ 1 ಆರೋಪಿ), ಅವರ ಪತ್ನಿ ಪಾರ್ವತಿ (ಎ 2 ಆರೋಪಿ), ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ (ಎ 3 ಆರೋಪಿ), ಜಮೀನು ಮಾಲೀಕ ದೇವರಾಜ್ (ಎ 4 ಆರೋಪಿ) ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
    ಸಾಮಾಜಿಕ ಕಾರ್ಯಕರ್ತ ಸ್ನೇಹ ಮಯಿ ಕೃಷ್ಣ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿತ್ತು.
    ಸಿದ್ದರಾಮಯ್ಯ ವಿರುದ್ಧ ಯಾವ ನ್ಯಾಯಿಕ ಪ್ರಕ್ರಿಯೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂಬ ವಿಷಯದ ಕುರಿತಂತೆ ಲೋಕಾಯುಕ್ತ ಪೊಲೀಸರಲ್ಲಿ ಜಿಜ್ಞಾಸೆ ಉಂಟಾಗಿತ್ತು. ಸಿದ್ದರಾಮಯ್ಯ ವಿರುದ್ಧ ಸಿಆರ್ ಪಿಸಿ ಅಥವಾ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆ ಎಂಬ ವಿಷಯದ ಕುರಿತಾಗಿ ಸ್ಪಷ್ಟನೆ ನೀಡುವಂತೆ ಕೋರಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ರವರು ರಾಜ್ಯ ಲೋಕಾಯುಕ್ತರಿಗೆ ಮನವಿ ಮಾಡಿದ್ದರು.
    ಈ ಮನವಿಯ ಕುರಿತಂತೆ ಕಾನೂನಾತ್ಮಕ ಅಂಶಗಳನ್ನು ಪರಿಶೀಲಿಸಿದ ಲೋಕಾಯುಕ್ತ ಎಡಿಜಿಪಿ ಜಿಪಿ ಮನೀಷ್‌ ಕರ್ಬೀಕರ್‌ ಜನಪ್ರತಿನಿಧಿಗಳ ನ್ಯಾಯಾಲಯ ಸಿಆರ್ ಪಿಸಿ ಅನ್ವಯ ಪ್ರಕರಣ ದಾಖಲಿಸುವಂತೆ ಸೂಚಿಸಿದೆ ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಪ್ರಕರಣ ದಾಖಲಿಸಬಹುದು ಎಂದು ಸ್ಪಷ್ಟನೆ ನೀಡಿದ್ದರು.
    ಈ ಸ್ಪಷ್ಟನೆ ದೊರೆತ ನಂತರ ಮೈಸೂರು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಸಿಆರ್‌ಪಿ ಸೆಕ್ಷನ್ 156(3)ರಡಿ ಎಫ್ ಐ ಆರ್ ದಾಖಲಿಸಿದರು.
    ಇದಷ್ಟೇ ಅಲ್ಲದೆ ಆರೋಪಿಗಳ ವಿರುದ್ಧ ಸೆಕ್ಷನ್ 120ಬಿ(ಅಪರಾಧಿಕ ಒಳಸಂಚು), 166-ಯಾವುದೇ ವೈಯಕ್ತಿಗೆ ಹಾನಿ ಉಂಟು ಮಾಡುವ ಉದ್ದೇಶದಿಂದ ಸಾರ್ವಜನಿಕ ನೌಕರನು ಕಾನೂನು ಬದ್ದ ಆದೇಶ ಪಾಲಿಸದಿರುವುದು, 403 ಸ್ವತ್ತಿನ ಅಪ್ರಮಾಣಿಕ ದುರುಪಯೋಗ, 406 ಅಪರಾಧಿಕ ನಂಬಿಕೆ ದ್ರೋಹ, 420 ವಂಚನೆ ಮಾಡುವುದು ಮತ್ತು ಸ್ವತ್ತನ್ನ ನೀಡಲು ಅಪ್ರಮಾಣಿಕವಾಗಿ ಪ್ರೇರೇಪಿಸುವುದು, 42 ಕೇಡಿನ ಅಪರಾಧಕ್ಕಾಗಿ ದಂಡನೆ, 465 ಖೋಟಾ ತಯಾರಿಕೆಗೆ ದಂಡನೆ, 468 ವಂಚನೆ ಉದ್ದೇಶಕ್ಕಾಗಿ ಖೋಟಾ ತಯಾರಿಕೆ, 340 ಅಕ್ರಮ ಬಂಧನ ಮತ್ತು ಕಲಂ 351ರ ಅಡಿಯಲ್ಲಿ ತನಿಖೆ ನಡೆಯಲಿದೆ.

    ಕಾನೂನು ನ್ಯಾಯ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    Next Article ಸಿಎಂ ವಿರುದ್ಧ ಸಿಬಿಐ ತನಿಖೆಗೆ ಅರ್ಜಿ.
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025

    2 Comments

    1. 2b8x3 on June 8, 2025 2:49 am

      buy generic clomiphene cost clomiphene prices can i get generic clomiphene prices can i get generic clomid for sale get clomiphene without rx can you buy cheap clomid without rx clomid challenge test protocol

      Reply
    2. cialis 20 mg tablets uk on June 9, 2025 10:51 am

      Thanks on putting this up. It’s okay done.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Albertohog on ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • Albertohog on Matrimonial ವೆಬ್ ಸೈಟ್ ನಲ್ಲೂ ವಂಚನೆ
    • Patrickblerm on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe