Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು
    ಅಂತಾರಾಷ್ಟ್ರೀಯ

    ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು

    vartha chakraBy vartha chakraOctober 14, 2024Updated:October 14, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಡೆರೋನ್ ಅಸಿಮೊಗ್ಲು, ಸೈಮನ್ ಜಾನ್ಸನ್, ಜೇಮ್ಸ್ ರಾಬಿನ್ಸನ್ ಎಂಬ ಅಮೆರಿಕನ್ ಆರ್ಥಿಕ ವಿಜ್ಞಾನಿಗಳು  2024ರ ಸಾಲಿನ ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ ಮತ್ತು ಬಹುಮಾನವನ್ನು ಪಡೆದಿದ್ದಾರೆ. ಈ ಪ್ರಶಸ್ತಿ ಪಡೆದಿರುವ ಡೆರನ್ ಮತ್ತು ಸಿಮೋನ್ ಜಾನ್ಸನ್ ಅವರು ಮೆಸಾಚುಸೆಟ್ಸ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಂಶೋಧಕರಾಗಿದ್ದಾರೆ. ಜೇಮ್ಸ್ ಎ ರಾಬಿನ್ಸನ್ ಅವರು ಚಿಕಾಗೋ ಯೂನಿವರ್ಸಿಟಿಯಲ್ಲಿ ರಿಸರ್ಚ್ ನಡೆಸುತ್ತಾರೆ.

    ಈ ಮೂವರು ಆರ್ಥಿಕ ತಜ್ಞರು, ಸಾಮಾಜಿಕ ಸಂಸ್ಥೆಗಳು ಹೇಗೆ ರಚನೆ ಆಗುತ್ತವೆ, ಹಾಗೂ ಅವುಗಳಿಂದ ಪ್ರಗತಿ ಮೇಲೆ ಏನು ಪರಿಣಾಮ ಎಂಬುದನ್ನು ತಮ್ಮ ಅಧ್ಯಯನಗಳಿಂದ ವಿವರಿಸಿದ್ದಾರೆ. ಇವರ ಈ ಸಾಧನೆಗಾಗಿ ನೊಬೆಲ್ ಪುರಸ್ಕಾರ ಲಭಿಸಿದೆ.

    ಯಾಕೆ ಕೆಲ ದೇಶಗಳು ಶ್ರೀಮಂತವಾಗಿವೆ ಎಂಬ ಪ್ರಶ್ನೆಗೆ ಈ ಮಾವರು ತಜ್ಞರಿಂದ ಉತ್ತರ…

    ವಿವಿಧ ದೇಶಗಳ ನಡುವೆ ಶ್ರೀಮಂತಿಕೆಯಲ್ಲಿ ಯಾಕೆ ದೊಡ್ಡ ಅಂತರ ಇದೆ ಎನ್ನುವ ಪ್ರಶ್ನೆ ಇಟ್ಟುಕೊಂಡು ಈ ಮೂವರು ಆರ್ಥಿಕ ತಜ್ಞರು ಸಂಶೋಧನೆ ನಡೆಸಿದ್ದಾರೆ. ಸಾಮಾಜಿಕ ಸಂಸ್ಥೆಗಳ ರಚನೆಯ ಸ್ವರೂಪ ಮತ್ತು ಅವುಗಳಿಂದ ಆರ್ಥಿಕ ಬೆಳವಣಿಗೆಯ ಮೇಲಾಗುವ ಪರಿಣಾಮಗಳ ಮೇಲೆ ಇವರು ಅಧ್ಯಯನ ನಡೆಸಿ ಪ್ರಸ್ತುಪಡಿಸಿದ್ದಾರೆ.

    ಒಂದು ದೇಶದ ಸಮೃದ್ಧಿಗೆ ಸಾಮಾಜಿಕ ಸಂಸ್ಥೆಗಳ ಮಹತ್ವ ಏನು ಎಂಬುದನ್ನು ಇವರು ಮೂರು ಪ್ರಮುಖ ಅಂಶಗಳಲ್ಲಿ ವಿವರಿಸಿದ್ದಾರೆ.

    1. ಸಮಾಜದಲ್ಲಿ ಸಂಪನ್ಮೂಲಗಳು ಹೇಗೆ ನಿಯೋಜನೆ ಆಗುತ್ತವೆ. ಅವುಗಳನ್ನು ನಿರ್ಧರಿಸುವ ಅಧಿಕಾರ ಯಾರಿಗೆ ಇರುತ್ತದೆ ಎನ್ನುವುದು ಮೊದಲ ಅಂಶ.
    2. ಜನಸಮುದಾಯದವರು ಒಗ್ಗೂಡಿ, ಆಡಳಿತಾರೂಢ ವರ್ಗಕ್ಕೆ ಸೆಡ್ಡು ಹೊಡೆಯುವ ಅಧಿಕಾರ ಬಳಸುವುದು ಎರಡನೇ ಅಂಶ
    3. ಮೂರನೇ ಅಂಶವೆಂದರೆ, ಅಧಿಕಾರ ಅನುಭವಿಸುವ ಮೇಲ್ಮಟ್ಟದ ಜನರು ಸಂಪನ್ಮೂಲ ಹಂಚಿಕೆಯ ಅಧಿಕಾರವನ್ನು ಜನಸಾಮಾನ್ಯರಿಗೆ ಒಪ್ಪಿಸುವ ಅನಿವಾರ್ಯ ಸ್ಥಿತಿ ಬರುವುದು.

    ಈ ಮೇಲಿನ ಮೂರು ಅಂಶಗಳು ಒಂದು ದೇಶದ ಸಮೃದ್ಧತೆಯ ಮೇಲೆ ಪರಿಣಾಮ ಬೀರಲಿದೆ ಎನ್ನುವ ಥಿಯರಿಯನ್ನು ಡೆರೋನ್ ಅಸಿಮೋಗ್ಲು, ಸಿಮೋನ್ ಜಾನ್ಸನ್ ಮತ್ತು ಜೇಮ್ಸ್ ಎ ರಾಬಿನ್ಸನ್ ಅವರು ತಮ್ಮ ಅಧ್ಯಯನದಲ್ಲಿ ನಿರೂಪಿಸಿದ್ದಾರೆ.

    ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ ಬಗ್ಗೆ – ಆಲ್ಫ್ರೆಡ್ ನೊಬೆಲ್ ಸ್ಮರಣಾರ್ಥ ಸ್ವೆರಿಜೆಸ್ ರಿಕ್ಸ್​ಬ್ಯಾಂಕ್​ನಿಂದ ನೀಡಲಾಗುವ ಪ್ರಶಸ್ತಿ ಇದಾಗಿದ್ದು, ಆರ್ಥಿಕ ವಿಜ್ಞಾನ ಕ್ಷೇತ್ರದ ಸಾಧಕರಿಗೆ ನೀಡಲಾಗುವ ಈ ಪ್ರಶಸ್ತಿಗೆ ನೊಬೆಲ್ ಫೌಂಡೇಶನ್​ನ ಅನುಮೋದನೆ ಇದೆ. ಈ ಕಾರಣಕ್ಕೆ ಇದನ್ನು ಪರೋಕ್ಷವಾಗಿ ನೊಬೆಲ್ ಬಹುಮಾನ ಎಂದೂ ಪರಿಗಣಿಸಲಾಗುತ್ತದೆ.

    ಆಲ್ಫ್ರೆಡ್ ನೊಬೆಲ್ ಎಂಬ ಸ್ವೀಡಿಶ್ ವಿಜ್ಞಾನಿ ಮತ್ತು ಉದ್ಯಮಿಯ ಸಾವಿನ ನಂತರ ಅವರ ಅಭಿಲಾಷೆಯಂತೆ ಭೌತ ವಿಜ್ಞಾನ, ರಾಸಾಯನಿಕ ವಿಜ್ಞಾನ, ಔಷಧ ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ ಈ ಐದು ವಿಭಾಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೊಬೆಲ್ ಬಹುಮಾನ ನೀಡುತ್ತಾ ಬರಲಾಗಿದೆ.

    1969ರಿಂದ ಸ್ವೀಡನ್​ನ ಸ್ವೆರಿಗೆಸ್ ರಿಕ್ಸ್​ ಬ್ಯಾಂಕ್ ಆರ್ಥಿಕ ವಿಜ್ಞಾನ ವಿಭಾಗದಲ್ಲೂ ಪ್ರಶಸ್ತಿ ನೀಡುತ್ತಿದೆ. ಇದಕ್ಕೆ ನೊಬೆಲ್ ಫೌಂಡೇಶನ್​ನ ಅನುಮೋದನೆ ಇದೆಯಾದ್ದರಿಂದ ನೊಬೆಲ್ ಬಹುಮಾನ ಎಂದು ಪರಿಗಣಿಸಲಾಗುತ್ತದೆ. ಆದರೆ, ಇದು ಅಧಿಕೃತ ನೊಬೆಲ್ ಪುರಸ್ಕಾರ ಎನಿಸುವುದಿಲ್ಲ.

    Verbattle
    Verbattle
    Verbattle
    'Sveriges Riksbank Prize' art Entertainment international news narve nobel price sweden ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದೂ ಧರ್ಮ ತೊರೆಯುತ್ತೇನೆ ಎಂದ ಮಂತ್ರಿ.
    Next Article ಅಧಿಕಾರಿಗಳಿಗೆ ಸಚಿವ ಜಾರ್ಜ್ ಕಟ್ಟಾಜ್ಞೆ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. StellaHewly on February 12, 2026 9:26 pm

      mgm first bet betmgm-play betmgm Maryland

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನಾಲ್ವರಿಗೆ ಒಲಿದ ಅದೃಷ್ಟ !
    • 1win_snSi on ರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    • Vmqrsl on ಮೋದಿಗೂ ಅದಾನಿಗೂ ಲವ್ವು – ಬೀದಿಗಿಳಿದ ಹತ್ತಿಪ್ಪತ್ತು ಹುಡುಗರ ಡವ್ವು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.