Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಎಲ್ಲೆಲ್ಲಿ ಸುರಂಗ ಮಾರ್ಗ ಬರಲಿದೆ ಗೊತ್ತಾ.
    Bengaluru

    ಬೆಂಗಳೂರಲ್ಲಿ ಎಲ್ಲೆಲ್ಲಿ ಸುರಂಗ ಮಾರ್ಗ ಬರಲಿದೆ ಗೊತ್ತಾ.

    vartha chakraBy vartha chakraDecember 9, 202426 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.8:
    ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ನಿರ್ಮಾಣ ಯೋಜನೆ ಅನುಷ್ಠಾನಕ್ಕೆ ದಿಢೀರ್ ಚಾಲನೆ ಸಿಕ್ಕಿದೆ
    ‘ಬೆಂಗಳೂರು ಟ್ವಿನ್ ಟನಲ್ ಪ್ರಾಜೆಕ್ಟ್’ ಎಂದು ಹೆಸರಿಡಲಾಗಿರುವ ಈ ಯೋಜನೆ ಜಾರಿಯಿಂದ ಮಹಾನಗರ ಬೆಂಗಳೂರಿನ ಸಂಚಾರ ದಟ್ಟಣೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
    ಸುರಂಗ ರಸ್ತೆಯು ಹೆಬ್ಬಾಳದ ಎಸ್ಟೀಮ್ ಮಾಲ್ ಜಂಕ್ಷನ್‌ನಿಂದ ಮೇಖ, ವೃತ್ತ, ಅರಮನೆ ರಸ್ತೆ, ಗಾಲ್ಫ್ ಕೋರ್ಸ್ ರಸ್ತೆ, ಚಾಲುಕ್ಯ ವೃತ್ತ, ಕಬ್ಬನ್ ಪಾರ್ಕ್, ಕೆ.ಎಚ್.ರಸ್ತೆ, ಲಾಲ್‌ಬಾಗ್, ಜಯನಗರ ಮಾರ್ಗವಾಗಿ ಸಿಲ್ಕ್ ಬೋರ್ಡ್ ಜಂಕ್ಷನ್‌ಗೆ ಹಾದು ಹೋಗಲಿದೆ.
    ಹೆಬ್ಬಾಳದ ಎಸ್ಟೀಮ್ ಮಾಲ್ ಜಂಕ್ಷನ್, ಅರಮನೆ ರಸ್ತೆ, ಗಾಲ್ಫ್ ಕೋರ್ಸ್ ರಸ್ತೆ, ಜಯನಗರದ ಅಶೋಕ ಪಿಲ್ಲರ್, ಸಿಲ್ಕ್ಬೋರ್ಡ್ ಜಂಕ್ಷನ್‌ನಲ್ಲಿ ಸುರಂಗ ರಸ್ತೆಯ ಪ್ರವೇಶ, ನಿರ್ಗಮನ ದ್ವಾರಗಳಿರಲಿವೆ. ತಳಭಾಗದ 3 ಪಥ, ಮೇಲ್ಬಾಗದ ಎ2 ಪಥದ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಇರಲಿದೆ.
    ಇಲ್ಲಿ ಸಂಚರಿಸುವ ವಾಹನಗಳಿಂದ ಟೋಲ್ ಸಂಗ್ರಹಿಸಲು ಉದ್ದೇಶಿಸಲಾಗಿದೆ. ಈ ರಸ್ತೆಯಲ್ಲಿ ವಾಹನಗಳು ಗಂಟೆಗೆ. 135-40 ಕಿ.ಮೀ. ವೇಗದಲ್ಲಿ ಸಂಚರಿಸಬಹುದಾಗಿದೆ.
    ಇದೀಗ ಈ ಯೋಜನೆಗೆ ಸಾಲ ನೀಡುವುದಕ್ಕೆ ಸಿದ್ದವಿರುವ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ‘ಬಂಡವಾಳ ಹೂಡಿಕೆಗೆ ಆಸಕ್ತಿ ವ್ಯಕ್ತಪಡಿಸುವಿಕೆ’ಯ ‘ಆರ್ಥಿಕ ಬಿಡ್’ ಅನ್ನು ಬಿಬಿಎಂಪಿ ಆಹ್ವಾನಿಸಿದೆ.
    ರಾಜ್ಯ ಸರ್ಕಾರದ ಗ್ಯಾರಂಟಿಯೊಂದಿಗೆ 19 ಸಾವಿರ ಕೋಟಿ ಸಾಲ ಪಡೆದು ಸುರಂಗ ರಸ್ತೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ .ಪ್ರಾಯೋಗಿಕವಾಗಿ ಉತ್ತರ- ದಕ್ಷಿಣ ಕಾರಿಡಾರ್ ಹೆಬ್ಬಾಳದ ಎಸ್ಟೀಮ್ ಮಾಲ್ ನಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್‌ ಕೆಎಸ್‌ಆರ್‌ಪಿ ಜಂಕನ್ ವರೆಗೆ 18.5 ಕಿ.ಮೀ ಉದ್ದದ ಟನಲ್ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಿ ಕಾಮಗಾರಿ ಆರಂಭಿಸುವುದಕ್ಕೆ ಮುಂದಾಗಿದೆ.
    ಬಂಡವಾಳ ಹೂಡಿಕೆ ಮಾಡುವ ಹಣಕಾಸು ಸಂಸ್ಥೆಗಳಿಗೆ ಮತ್ತು ಬ್ಯಾಂಕ್ ಗಳಿಗೆ ರಾಜ್ಯ ಸರ್ಕಾರವು ಗ್ಯಾರಂಟಿ ನೀಡಲಿದೆ. ಅದನ್ನು ಹೊರತು ಪಡಿಸಿ ಸಾಲ ನೀಡುವ ಸಂಸ್ಥೆಗಳಿಗೆ ಭದ್ರತೆ ಆಸ್ತಿ ಅಡಮಾನದ ಬಗ್ಗೆ ಈಗಲೇ ಯಾವುದೇ ನಿರ್ಧಾರ ಮಾಡಿಕೊಂಡಿಲ್ಲ.
    ಬಂಡವಾಳ ಹೂಡಿಕೆ ಮಾಡುವುದಕ್ಕೆ ಆಸಕ್ತಿ ಹೊಂದಿರುವ ಹಣಕಾಸು ಸಂಸ್ಥೆಗಳು ತಾವು ಒದಗಿಸಬಹುದಾದ ಸಾಲಧ ಮೊತ್ತ ಹಾಗೂ ಬಡ್ಡಿ ದರ ತಿಳಿಸುವುದಕ್ಕೆ ಡಿ.19 ಕೊನೆಯ ದಿನವಾಗಿದೆ. ಈ ಬಗ್ಗೆ ಗೊಂದಲ ಮತ್ತು ಸಷ್ಟತೆ ಪಡೆದುಕೊಳ್ಳಲು ಡಿ.9ರಿಂದ 11ವರೆಗೆ ಅವಕಾಶ ನೀಡಲಾಗಿದೆ. ಡಿ.16ರಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರ ಕಚೇರಿಯಲ್ಲಿ ಈ ಕುರಿತು ಬಿಡ್ ಪೂರ್ವಭಾವಿ ಸಭೆ ನಡೆಸಲಾಗುತ್ತದೆ. ಇದಾದ ನಂತರ ಡಿ.19ರ ಸಂಜೆ 4 ಗಂಟೆಯ ಒಳಗೆ ಮುಚ್ಚಿದ ಲಕೋಟೆಯಲ್ಲಿ ಸಾಲ ಒದಗಿಸುವ ಮೊತ್ತ ಹಾಗೂ ಬಡ್ಡಿದರದ ಬಿಡ್ ಸಲ್ಲಿಕೆ ಮಾಡಬೇಕೆಂದು ಸೂಚಿಸಲಾಗಿದೆ.

    Verbattle
    Verbattle
    Verbattle
    Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಯತ್ನಾಳ್ ವಿರುದ್ಧ ಕ್ರಮಕ್ಕೆ ಮೀನಾಮೇಷ.
    Next Article ಮೋದಿಯವರ ಹವ್ಯಾಸಗಳೇನು ಗೊತ್ತಾ?
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • MiguelBuino on ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • Cqubeg on 15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
    Latest Kannada News

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.