Bengaluru
ಮಾಜಿ ಪ್ರಧಾನಿ ದಿವಂಗತ ವಾಜಪೇಯಿ ಅವರ ಹುಟ್ಟುಹಬ್ಬ ಸಂಭ್ರಮಾಚರಣೆಯ ನಂತರ ಬೆಂಬಲಿಗರೊಂದಿಗೆ ನಡೆದುಕೊಂಡು ಹೋಗುತ್ತಿದ್ದ
ಶಾಸಕ ಮುನಿರತ್ನ ಅವರ ಮೇಲಿನ ಮೊಟ್ಟೆ ದಾಳಿ ಅವರದ್ದೇ ಪಿತೂರಿ ಎಂದು ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತ ರಾಯಪ್ಪ ಆಪಾದಿಸಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಬಗ್ಗೆ ಹೇಳಿಕೆಯೊಂದನ್ನು ಪ್ರಕಟಿಸಿರುವ ಕುಸುಮಾ ಹನುಮಂತರಾಯಪ್ಪ ಶಾಸಕ ಮುನಿರತ್ನ ಅವರ ಮೇಲಿನ “ಮೊಟ್ಟೆ ಅಟ್ಯಾಕ್” ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ ಎಂದು ಹೇಳಿದ್ದಾರೆ
ದಲಿತರನ್ನು ತುಚ್ಚವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ FSL ರಿಪೋರ್ಟ್ ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ ತರಹೇವಾರಿ ನಾಟಕಗಳು ಶುರುವಾಗಿದೆ ಎಂದು ತಿಳಿಸಿದ್ದಾರೆ
ಜನರೆದುರು ತನ್ನ ನಿಜರೂಪ ಬೆತ್ತಲಾದ ನಂತರ ಸಿಂಪತಿ ಗಿಟ್ಟಿಸಿಕೊಳ್ಳಲು “ಇಮೇಜ್ ಬಿಲ್ಡಿಂಗ್” ಆಕ್ಟಿವಿಟಿಯ ಒಂದು ಭಾಗವೇ ಇಂದಿನ ಪ್ರಹಸನಗಳು. ಈತನ ಸ್ಕ್ರಿಪ್ಟೆಡ್ ಸ್ಟೋರಿಗಳು ಅಲ್ಪ ವಿರಾಮದ ಬಳಿಕ ಮತ್ತೆ ಚಾಲ್ತಿಗೆ ಬಂದಿವೆ ಎಂದು ವ್ಯಾಖ್ಯಾನಿಸಿದ್ದಾರೆ
ಮಹಿಳೆಯರಿಗೆ ರಾಜಕೀಯದಲ್ಲಿ ಆದ್ಯತೆಯೇ ಕಡಿಮೆ ಇಂತಹ ಸನ್ನಿವೇಶದಲ್ಲಿ ಸ್ವಚ್ಚ ರಾಜಕಾರಣದ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದ ಕನಸುಗಳಿಗೆ ಬೆಲೆಯಿಲ್ಲವೆನಿಸುತ್ತದೆ.
ಈ ನಾಟಕಗಳನ್ನು ಗಮನಿಸಿದರೆ ಕೊಚ್ಚೆಯಲ್ಲಿ ಹೊರಳಾಡುವ ಹಂದಿಯ ಜೊತೆ ಹಂದಿಗಳಾಗಿಯೇ ಇರಬೇಕಾ ಎಂಬ ಪ್ರಶ್ನೆಯ ಜೊತೆ ಅಸಹ್ಯ ಮೂಡುತ್ತಿದೆ ಎಂದಿದ್ದಾರೆ
ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈತನ ಪಾಪದ ಕೆಲಸಗಳಿಗೆ ತಕ್ಕ ಶಾಸ್ತಿ ಆಗೇ ಆಗುತ್ತದೆ, ಆದರೆ ತನ್ನ ತಪ್ಪು ಮುಚ್ಚಿಕೊಳ್ಳಲು ನನ್ನ ಹೆಸರನ್ನು ವಿನಾಕಾರಣ ಎಳೆದು ತರುವುದು ಎಷ್ಟು ಸರಿ? ಇಂದಿನ ಪ್ರಹಸನದ ಹಿಂದಿನ ದುರುದ್ದೇಶಗಳನ್ನು ಅರಿಯದೆ ಈತನ ಕತೆಗಳನ್ನು ನಂಬುವಷ್ಟು ನಮ್ಮ ಜನರು ದಡ್ಡರೂ, ಮೂರ್ಖರೂ ಅಲ್ಲ.
ಕಾಲಾಯ ತಸ್ಮೈ ನಮಃ!
ಎಂದಿದ್ದಾರೆ
Previous Articleಮಾರ್ಚ್ 14 ರಂದು ಬಜೆಟ್ ಮಂಡನೆ.
Next Article ಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.