ಬೆಂಗಳೂರು,ಫೆ.21-ಹಾಳು ಬಿದ್ದ ಮನೆಯಲ್ಲಿ ಸರಸದ ವೇಳೆ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಮಾರಕಾಸ್ತ್ರಗಳಿಂದ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಪ್ರಿಯಕರ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಡುಗೋಡಿಯಲ್ಲಿ ನಡೆದಿದೆ.
ಚನ್ನಸಂದ್ರದ ಕಿಶೋರ್ ಕುಮಾರ್ (38) ಕೊಲೆಯಾದವರು.
ಈತನ ಪ್ರೇಯಸಿ ಅರುಂಧತಿ(37) ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
ಕಾಡುಗೋಡಿ ಸಮೀಪದ ಬೆಳತ್ತೂರು ಕಾಲೋನಿಯಲ್ಲಿ ನಿನ್ನೆ ಮಧ್ಯಾಹ್ನ 1.30ರ ವೇಳೆ ನಡೆದ ಕೃತ್ಯದ ಸಂಬಂಧ ಸಂಬಂಧ ಗಾಯಾಳು ಅರುಂಧತಿ ಪತಿ ಯಲ್ಲಪ್ಪ(45), ಪುತ್ರಿ ಪೂಜಾ(20) ಮತ್ತು ಅಳಿಯ ವೆಂಕಟರಾಮು(24)ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ಮೂಲದ ಯಲ್ಲಪ್ಪ-ಅರುಂಧತಿ ದಂಪತಿ ತಮ್ಮ ಪುತ್ರಿ ಪೂಜಾ ಜತೆಗೆ ಸ್ವಂತ ಊರಿನಲ್ಲಿ ನೆಲೆಸಿದ್ದರು. ಒಂದು ವರ್ಷದ ಹಿಂದೆ ಪುತ್ರಿ ಪೂಜಾಳನ್ನು ಅರುಂಧತಿ ಸಹೋದರ ವೆಂಕಟರಾಮುಗೆ ಕೊಟ್ಟು ಮದುವೆ ಮಾಡಿಸಿದ್ದರು.
ಮದುವೆ ನೂ
ವೆಂಕಟರಾಮು ದಂಪತಿ ಕಾಡುಗೋಡಿ ಸಮೀಪದ ಬೆಳತ್ತೂರಿನಲ್ಲಿ ನೆಲೆಸಿದ್ದರು. ಈ ನಡುವೆ ಕೆಲ ವರ್ಷಗಳ ಹಿಂದೆ ಹಿಂದೆ ಪರಿಚಿತನಾಗಿದ್ದ ದೂರದ ಸಂಬಂಧಿ ಕಿಶೋರ್ ಕುಮಾರ್ ಜತೆಗೆ ಅರುಂಧತಿ ಅನೈತಿಕ ಸಂಬಂಧ ಇರಿಸಿಕೊಂಡಿದ್ದಳು. ಈ ವಿಚಾರ ತಿಳಿದು ಪತಿ ಯಲ್ಲಪ್ಪಗೆ ಬುದ್ಧಿವಾದ ಹೇಳಿದರೂ ಆಕೆ ಅನೈತಿಕ ಸಂಬಂಧ ಮುಂದುವರೆಸಿದ್ದಳು.
ಈ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಗಲಾಟೆಗಳು ಆಗಿದ್ದವು.
ಇದರ ಪರಿಣಾಮವಾಗಿ
ಅರುಂಧತಿ ಪತಿಯನ್ನು ತೊರೆದು ಪುತ್ರಿ ಪೂಜಾ ಅವರ ಮನೆಗೆ ಬಂದು ಅವರ ಜತೆಗೆ ಬೆಳತ್ತೂರಿನಲ್ಲಿ ನೆಲೆಸಿದ್ದಳು.
ಪಾಳು ಮನೆಯಲ್ಲಿ ಭೇಟಿ:
ಪತಿ ಜತೆ ಜಗಳ ಮಾಡಿಕೊಂಡು ಪುತ್ರಿ ಮನೆಯಲ್ಲಿ ನೆಲೆಸಿದ್ದ ಅರುಂಧತಿ ನಂತರವೂ ಕಿಶೋರ್ ಕುಮಾರ್ ಜತೆಗೆ ತನ್ನ ಅನೈತಿಕ ಸಂಬಂಧ ಮುಂದುವರೆಸಿದ್ದಳು. ಬೆಳತ್ತೂರು ಕಾಲೋನಿಯ ಪಾಳು ಮನೆಯಲ್ಲಿ ಆಗಾಗ ಇಬ್ಬರು ಭೇಟಿಯಾಗುತ್ತಿದ್ದರು. ನಿನ್ನೆ ಮಧ್ಯಾಹ್ನ ಸಹ ಅರುಂಧತಿ ಮತ್ತೆ ಕಿಶೋರ್ ಕುಮಾರ್ ಆ ಪಾಳು ಮನೆಯಲ್ಲಿ ಭೇಟಿಯಾಗಿದ್ದರು. ಇದೇ ಸಮಯಕ್ಕೆ ಯಲ್ಲಪ್ಪ ಖಚಿತ ಮಾಹಿತಿ ಮೇರೆಗೆ ಆ ಪಾಳು ಮನೆ ಕಡೆಗೆ ಬಂದಾಗ ಪತ್ನಿ ಅರುಂಧತಿ ಮತ್ತು ಆಕೆಯ ಪ್ರಿಯಕರ ಕಿಶೋರ್ ಕುಮಾರ್ ಒಟ್ಟಿಗೆ ಸಿಕ್ಕಿಬಿದ್ದಿದ್ದಾರೆ. ಇದರಿಂದ ಕೋಪಗೊಂಡ ಯಲ್ಲಪ್ಪ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ.
ಅಷ್ಟೇ ಊಅಳಿಯ ಮತ್ತು ಪುತ್ರಿಗೆ ಕರೆ ಮಾಡಿ ಪಾಳು ಮನೆ ಬಳಿ ಕರೆಸಿಕೊಂಡಿದ್ದಾನೆ. ಬಳಿಕ ಮೂವರು ಸೇರಿಕೊಂಡು ಮಾರಕಾಸ್ತ್ರಗಳಿಂದ ಅರುಂಧತಿ ಮತ್ತು ಆಕೆಯ ಪ್ರಿಯಕರ ಕಿಶೋರ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಗಲಾಟೆ ಚೀರಾಟದ ಸದ್ದಿಗೆ ಸ್ಥಳೀಯರು ಪಾಳು ಮನೆ ಬಳಿ ಜಮಾಯಿಸಿದ್ದಾರೆ. ಈ ವೇಳೆ ರಕ್ತದಮಡುವಿನಲ್ಲಿ ಬಿದ್ದಿದ್ದ ಕಿಶೋರ್ ಕುಮಾರ್ ಮತ್ತು ಅರುಂಧತಿಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕಿಶೋರ್ ಕುಮಾರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಅರುಂಧತಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.