Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?
    ಸುದ್ದಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    vartha chakraBy vartha chakraJune 25, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚೆನ್ನೈ,ಜೂ.25-
    ಮಾದಕವಸ್ತು ಸೇವನೆ,ಪೂರೈಕೆ, ಉದ್ಯೋಗ ಹಗರಣ, ಬ್ಲ್ಯಾಕ್‌ಮೇಲ್ , ಭೂ ಕಬಳಿಕೆ ಆರೋಪ ಸೇರಿ ಹಲವು ಕ್ರಿಮಿನಲ್ ಪ್ರಕರಣದಲ್ಲಿ ಖ್ಯಾತ ನಟ ಶ್ರೀಕಾಂತ್ ನನ್ನು ಪೊಲೀಸರು ಬಂಧಿಸಿದ್ದಾರೆ.
    ನಟ ಶ್ರೀಕಾಂತ್‌ಗೆ ಕೊಕೇನ್‌ ಸರಬರಾಜು ಮಾಡಿದ್ದ ಪ್ರಮುಖ ಆರೋಪಿ ಪ್ರಸಾದ್, ಮಾದಕ ದ್ರವ್ಯ ಆಧಾರಿತ ಪಾರ್ಟಿಗಳನ್ನು ಆಯೋಜಿಸುತ್ತಿದ್ದುದಲ್ಲದೆ, ಅನೇಕ ವ್ಯಕ್ತಿಗಳಿಗೆ ಕೊಕೇನ್ ಮಾರಾಟ ಮಾಡಿರುವುದು ಈಗ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ತನಿಖಾಧಿಕಾರಿಗಳ ಪ್ರಕಾರ, ಪ್ರಸಾದ್ ಬೇರೆ ಬೇರೆ ವಂಚನೆ ಜಾಲವನ್ನು ನಡೆಸುತ್ತಿದ್ದ. ಸರ್ಕಾರಿ ಉದ್ಯೋಗದ ಭರವಸೆ ನೀಡಿ 200 ಕ್ಕೂ ಹೆಚ್ಚು ಜನರನ್ನು ವಂಚಿಸುತ್ತಿದ್ದಾನೆ. ಚೆನ್ನೈ ಕಾರ್ಪೊರೇಷನ್, ರೈಲ್ವೆ, ಆದಾಯ ತೆರಿಗೆ ಇಲಾಖೆ ಮತ್ತು ತಮಿಳುನಾಡು ಸಾರ್ವಜನಿಕ ಸೇವಾ ಆಯೋಗ (ಟಿಎನ್ ಪಿಎಸ್ ಸಿ) ಗಳಲ್ಲಿ ಉದ್ಯೋಗ ನೀಡುವ ನಕಲಿ ಭರವಸೆಗಳನ್ನು ನೀಡಿ ಉದ್ಯೋಗಾಕಾಂಕ್ಷಿಗಳನ್ನು ಆಕರ್ಷಿಸುತ್ತಿದ್ದರು. ಪ್ರಸಾದ್ ಪ್ರತಿಯೊಬ್ಬ ಆಕಾಂಕ್ಷಿಯಿಂದ 2 ಲಕ್ಷ ರೂ.ನಿಂದ 20 ಲಕ್ಷ ರೂ.ವರೆಗೆ ಹಣ ಸಂಗ್ರಹಿಸಿದ್ದ ಎಂದು ತಿಳಿದು ಬಂದಿದೆ. ಇದರಲ್ಲಿ ನಟ ಶ್ರೀಕಾಂತ್ ಪಾತ್ರವಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    ತನಿಖಾಧಿಕಾರಿಗಳು ಪ್ರಸಾದ್ ಅವರ ಸಹಚರ ಅಜಯ್ ವಂಡೈಯರ್ ಅವರನ್ನೂ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಅಜಯ್ ವಿರುದ್ಧ ಭೂಕಬಳಿಕೆ ಮತ್ತು ಭೂಮಾಲೀಕರನ್ನು ಬೆದರಿಸುವ ಆರೋಪ ಹೊರಿಸಲಾಗಿದೆ, ವಿಶೇಷವಾಗಿ ಅನಿವಾಸಿ ಭಾರತೀಯರನ್ನು ಗುರಿಯಾಗಿಸಿಕೊಂಡು ಅಕ್ರಮ ಎಸಗುತ್ತಿದ್ದ ಆರೋಪ ಕೇಳಿಬಂದಿದೆ . ಇವರ ಆಸ್ತಿಗಳನ್ನು ಕಬಳಿಸಲು ಅವರು ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
    ತನಿಖೆಯಲ್ಲಿ ಪ್ರಸಾದ್ ವ್ಯಕ್ತಿಗಳ ಕರೆ ಮತ್ತು ಸ್ಥಳ ದಾಖಲೆಗಳನ್ನು ಪಡೆಯುವ ಮೂಲಕ ಅವರನ್ನು ಬ್ಲ್ಯಾಕ್‌ಮೇಲ್ ಮಾಡಿದ್ದ ಎಂದು ತಿಳಿದು ಬಂದಿದೆ. ಇದಕ್ಕೆ ಇಬ್ಬರು ಸಬ್-ಇನ್‌ಸ್ಪೆಕ್ಟರ್‌ಗಳು ಸಹಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸಾದ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಮಧುರೈ ಮೂಲದ ಹೆಡ್ ಕಾನ್‌ಸ್ಟೆಬಲ್‌ ಒಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ 22 ಜನರನ್ನು ಬಂಧಿಸಲಾಗಿದ್ದು, ಐವರನ್ನು ಕಠಿಣ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.
    ಮಾದಕ ದ್ರವ್ಯ ಸೇವನೆ ಅಥವಾ ಮಾರಾಟದ ಬಗ್ಗೆ ಮಾಹಿತಿಯನ್ನು ಮುಚ್ಚಿಟ್ಟರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಕಾನೂನು ತಮಿಳುನಾಡು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ
    Next Article ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 7mjes on ಪಾಕಿಸ್ತಾನದಿಂದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ.
    • el7c2 on ಪ್ರತಾಪ್ ಸಿಂಹ ಅವರಿಗೆ ಯಾಕೆ ಹೀಗಾಯ್ತು | Pratap Simha
    • AlbertDuabe on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe