Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    ಅಪರಾಧ

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    vartha chakraBy vartha chakraAugust 30, 2025Updated:August 30, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಯಾದಗಿರಿ,ಆ.30-
    ರಾಜ್ಯ ಸರ್ಕಾರದ ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.‌ಮಗು ಮತ್ತು ತಾಯಿ ಆರೋಗ್ಯವಾಗಿದ್ದು ಇಬ್ಬರನ್ನೂ ನಿರೀಕ್ಷಣಾ ಮಂದಿರದಲ್ಲಿ ಇರಿಸಲಾಗಿದೆ.
    ಈ ಸುದ್ದಿ ಮಾಧ್ಯಮಗಳಲ್ಲಿ ವರದಿ ಯಾಗುವ ಮೂಲಕ ಸಾಕಷ್ಟು ಸಂಚಲನ ಮೂಡಿಸಿತ್ತು.
    ಈ ಬಗ್ಗೆ ವಸತಿ ಶಾಲೆಯ ಮುಖ್ಯಸ್ಥರು ನೀಡಿದ ದೂರು ಆಧರಿಸಿ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿಯಾಗಿದ್ದಾನೆ.ಪ್ರಕರಣದ ಸಂಬಂಧ ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾದಾಗ ಎ1 ಆರೋಪಿ ಸ್ಥಾನ ಖಾಲಿ ಇಡಲಾಗಿತ್ತು. ಈಗ ಪರಮಣ್ಣನನ್ನು ಬಂಧಿಸಿ ಎ1 ಆರೋಪಿ ಮಾಡಿದ್ದಾರೆ.
    ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದನು.
    ಪ್ರಮುಖ ಆರೋಪಿಯನ್ನು ಬಂಧಿಸಿರುವ  ಪೊಲೀಸರ ಕಾರ್ಯಕ್ಕೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.
    ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ಬಾಲಕಿ ಅಸ್ಪೃಶ್ಯ ಪಂಗಡಕ್ಕೆ ಸೇರಿದ್ದು, ಆರೋಪಿ ಸ್ಪರ್ಶ ಸಮುದಾಯಕ್ಕೆ ಸೇರಿದವನಾಗಿದ್ದರಿಂದ ಅಟ್ರಾಸಿಟಿ ಪ್ರಕರಣವನ್ನು ಸೇರಿಸಿ ತ್ವರಿತ ಗತಿಯಲ್ಲಿ ಪ್ರಕ್ರಿಯೆ ಮುಗಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಸುರಪುರ ಡಿವೈಎಸ್ಪಿ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
    ಆರೋಪಿಯು ಹಳ್ಳಿಯಲ್ಲಿ ಆಕೆಯ ಮನೆಯ ಬಳಿಯಲ್ಲೇ ವಾಸವಾಗಿದ್ದಾನೆ ಎಂದು ಹೇಳಲಾಗಿದೆ. ಆತನಿಗೆ ಈಗಾಗಲೇ ಮದುವೆಯಾಗಿ ಒಂದು ಮಗುವೂ ಇದೆ. ಆದರೂ, ಆತ ಈ ಹುಡುಗಿಯನ್ನು ಮರುಳು ಮಾಡಿ ಆಕೆಯ ಇಂಥ ಪರಿಸ್ಥಿತಿಗೆ ಕಾರಣನಾಗಿದ್ದಾನೆ ಎಂದು ಹೇಳಲಾಗಿದೆ.
    ವಿದ್ಯಾರ್ಥಿನಿಯು 9ನೇ ತರಗತಿಯಲ್ಲಿ ಓದುತ್ತಿದ್ದು ಆಕೆ ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ಹಾಸ್ಟೆಲ್ ಹತ್ತಿರದಲ್ಲೇ ತನ್ನ ಹಳ್ಳಿಯಿದಿದ್ದರಿಂದ ತನ್ನ ಮನೆಗೆ ಆಗಾಗ ಹೋಗಿಬರುತ್ತಿದ್ದಳು. ಆರೋಪಿಯು ಆಕೆಯ ಮನೆಯ ಬಳಿಯಲ್ಲೇ ವಾಸವಾಗಿದ್ದಾನೆ. ಮನೆ ಹತ್ತಿರದಲ್ಲಿದ್ದ ಆತ ಆಕೆಗೆ ಪರಿಚಯವಾಗಿದ್ದಾನೆ. ಅವರಿಬ್ಬರ ನಡುವೆ ಪ್ರೇಮವಾಗಿ ಅದೇ ಈ ಪರಿಸ್ಥಿತಿ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ಆಕೆಗೆ, ತನ್ನ ವಸತಿ ನಿಲಯದ ಶೌಚಾಲಯದಲ್ಲಿ ಹೆರಿಗೆ ಆದಾಗಲೇ ವಿಚಾರ ಬೆಳಕಿಗೆ ಬಂದಿದೆ. ಸಂತ್ರಸ್ಥ ಬಾಲಕಿಯನ್ನೂ ಪೊಲೀಸರಿಗೆ ಹೇಳಿಕೆ ನೀಡಿಲ್ಲ. ಆಕೆ ಹೆರಿಗೆಯಾಗಿ ಇನ್ನೂ ಶುಶ್ರೂಷೆಯಲ್ಲಿರುವುದೇ ಅದಕ್ಕೆ ಕಾರಣ. ಆದರೂ ಪ್ರಾಥಮಿಕ ತನಿಖೆಯಲ್ಲಿ ಈ ವಿಚಾರ ತಿಳಿದುಬಂದಿದೆ. ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಗ್ಯ ಕರ್ನಾಟಕ ನ್ಯಾಯ ಮದುವೆ ವಿದ್ಯಾ ವಿದ್ಯಾರ್ಥಿ ಶಾಲೆ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleSIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?
    Next Article ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups on ಪ್ರಿಯಾಂಕ್ ಖರ್ಗೆ ಆಗ್ತಾರಂತೆ ಸಿಎಂ | Priyank Kharge
    • Connietaups on ಮಾರ್ಚ್ 14 ರಂದು ಬಜೆಟ್ ಮಂಡನೆ.
    • Connietaups on ಬೆಚ್ಚಿ ಬಿದ್ದು ಮನೆಗಳಿಂದ ಓಡಿ ಬಂದ ಗ್ರಾಮಸ್ಥರು
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe