ದೇಶಾದ್ಯಂತ ವಿಮಾನಗಳ ಹಾರಾಟದಲ್ಲಿ ಅಡಚಣೆಗಳ ನುಡವೆಯೂ ಭಾರತದ ಅತಿದೊಡ್ಡ ದೇಶೀಯ ವಿಮಾನ ಯಾನ ಸಂಸ್ಥೆ ಇಂಡಿಗೋ ಶನಿವಾರ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಂದ 400ಕ್ಕೂ ಹೆಚ್ಚು ವಿಮಾನ ಹಾರಾಟವನ್ನು ರದ್ದುಗೊಳಿಸಿದೆ. ಪರಿಣಾಮ ಟಿಕೆಟ್ ಬೆಲೆಗಳು ಗಗನಕ್ಕೇರಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಶನಿವಾರ ಬೆಂಗಳೂರು, ಮುಂಬೈ, ದೆಹಲಿ, ಹೈದರಾಬಾದ್ ಸೇರಿದಂತೆ ದೇಶಾದ್ಯಂತ ಇತರೆ ವಿಮಾನ ನಿಲ್ದಾಣಗಳಲ್ಲಿ ವಿಮಾನ ರದ್ದತಿ ಮುಂದುವರೆದಂತೆ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದರು. ಇದೀಗ ಸ್ವಲ್ಪ ಮಟ್ಟಿಗೆ ಬದಲಾವಣೆಗಳು ಕಂಡು ಬಂದಿವೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಇಂಡಿಗೋ ವಿಮಾನಗಳ ವೈಫಲ್ಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಜವಾಬ್ದಾರಿಯುತರು ಅದಕ್ಕೆ ಪಾವತಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಾಗರಿಕ ವಿಮಾನಯಾನ ಸೇವೆಗಳನ್ನು ಸಹಜ ಸ್ಥಿತಿಗೆ ತರಲು ಅಧಿಕಾರಿಗಳು ಆದ್ಯತೆ ನೀಡುತ್ತಿದ್ದಾರೆ ಮತ್ತು ಇಂಡಿಗೋ ವಿಮಾನ ರದ್ದತಿಗೆ ಕಾರಣವಾದ ಹೊಸ ವಿಮಾನ ಕರ್ತವ್ಯ ಸಮಯ ಮಿತಿ ಮಾನದಂಡಗಳನ್ನು ಕೇಂದ್ರವು ಪಾಲಿಸುತ್ತಿದೆ ಎಂದು ನಾಯ್ಡು ಹೇಳಿದ್ದಾರೆ.
ಇಂಡಿಗೋ ವಿಮಾನ ರದ್ದತಿಯ ಕುರಿತು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ನಾಗರಿಕ ವಿಮಾನಯಾದ ಏಕಸ್ವಾಮ್ಯ/ದ್ವಿಪಕ್ಷೀಯ ಮಾರುಕಟ್ಟೆಯ ಕರೆಯನ್ನು ಪುನರುಚ್ಚರಿಸಿದ್ದಾರೆ.
ಪ್ರಯಾಣಿಕರಿಗೆ ಅನಾನುಕೂಲತೆ ಆಗಿದೆ. ಅವರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಗಿಲ್ಲ. ಅವರಿಗೆ ಯಾವುದೇ ಮಾಹಿತಿಯನ್ನು ನೀಡಲಾಗುತ್ತಿರಲಿಲ್ಲ. ಆಡಳಿತ ಮಂಡಳಿಯಿಂದ ಯಾವುದೇ ಮಾಹಿತಿ ಸಿಗದ ಕಾರಣ ಇಂಡಿಗೋ ಸಿಬ್ಬಂದಿ ಕೂಡ ತೊಂದರೆ ಅನುಭವಿಸಬೇಕಾಯಿತು ಎಂದು ಖಾಸಗಿ ಸುದ್ದಿ ಸಂಸ್ಥೆಯೊಂದರ ಮಾಹಿತಿಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

